ಬೆಳಂದೂರು: ಶಾಶ್ವತ ಯೋಜನೆ ಅನುಷ್ಠಾನ ಅಗತ್ಯ


Team Udayavani, Feb 13, 2019, 4:25 AM IST

13-february-1.jpg

ಸವಣೂರು: ಬೇಸಗೆಯ ಬಿಸಿ ಕಳೆದ ಬಾರಿಗಿಂತ ಈ ಬಾರಿ ತೀವ್ರತೆ ಪಡೆದುಕೊಂಡಿದೆ. ಹಳ್ಳ, ತೊರೆಯಲ್ಲಿ ನೀರಿನ ಹರಿವು ನಿಂತು ಎಲ್ಲವೂ ಬತ್ತಿಹೋಗಿವೆ. ನೀರಿನ ಬವಣೆ ಗ್ರಾಮೀಣ ಭಾಗಕ್ಕೂ ತಟ್ಟುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಬೆಳಂದೂರು ಜಿ.ಪಂ.ವ್ಯಾಪ್ತಿಯಲ್ಲಿ ಆಲಂಕಾರು, ಬೆಳಂದೂರು, ಕಾಣಿಯೂರು, ಪೆರಾಬೆ, ಸವಣೂರು ಹೀಗೆ 5 ಗ್ರಾಮ ಪಂಚಾಯತ್‌ಗಳು ಒಳಗೊಳ್ಳುತ್ತದೆ. ಗ್ರಾ.ಪಂ. ಸರಬರಾಜು ಮಾಡುವ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನೇ ಆಶ್ರಯಿಸಲಾಗಿದೆ. ಈ ಭಾಗಕ್ಕೆ ಕುಮಾರಾಧಾರಾ ನದಿಯನ್ನು ಬಳಸಿಕೊಂಡು ಶಾಶ್ವತ ಯೋಜನೆಯನ್ನು ರೂಪಿಸಬೇಕಿದೆ.

ಆಲಂಕಾರು ಗ್ರಾ.ಪಂ. ವ್ಯಾಪ್ತಿಗೆ ಆಲಂಕಾರು, ಬೆಳಂದೂರು ಗ್ರಾ.ಪಂ.ನಲ್ಲಿ ಬೆಳಂದೂರು, ಕುದ್ಮಾರು, ಕಾಯ್ಮಣ, ಕಾಣಿಯೂರು ಗ್ರಾ.ಪಂ.ನಲ್ಲಿ ಕಾಣಿಯೂರು, ಚಾರ್ವಾಕ, ದೋಳ್ಪಾಡಿ, ಸವಣೂರು ಗ್ರಾ.ಪಂ.ನಲ್ಲಿ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳು ಇವೆ. ಪೆರಾಬೆ ಗ್ರಾ.ಪಂ.ನಲ್ಲಿ ಪೆರಾಬೆ, ಕುಂತೂರು ಗ್ರಾಮಗಳು ಸೇರಿವೆ. ಐದು ಗ್ರಾ.ಪಂ.ಗಳ 12 ಗ್ರಾಮಗಳು ಬೆಳಂದೂರು ಕ್ಷೇತ್ರಕ್ಕೆ ಒಳಪಡುತ್ತವೆ. ಜನತೆಯ ಮೂಲ ಆವಶ್ಯಕತೆ ಯಾದ ಶುದ್ಧ ಕುಡಿಯುವ ನೀರಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ. ಸಾರ್ವಜನಿಕ ವಲಯದಲ್ಲಿ ಕೂಗು ಕೇಳಿ ಬರುತ್ತಿದೆ.

ಅಣೆಕಟ್ಟು: ಪ್ರಗತಿ ಕಂಡಿಲ್ಲ
ಬೆಳಂದೂರು, ಸವಣೂರು, ಕಾಣಿಯೂರು, ಆಲಂಕಾರು, ಪೆರಾಬೆ ಗ್ರಾ.ಪಂ. ವ್ಯಾಪ್ತಿಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆ ಶೀಘ್ರವಾಗಿ ಅನುಷ್ಠಾನವಾಗಬೇಕು. ಕುಮಾರಧಾರಾ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಎಸ್‌. ಅಂಗಾರ ಅವರು 2017ರ ಮಾರ್ಚ್‌ನಲ್ಲಿ ಶಿಲಾನ್ಯಾಸ ಮಾಡಿದ್ದರು. ಬಳಿಕ ಯಾವುದೇ ಪ್ರಗತಿ ಕಂಡಿಲ್ಲ.

ಅನುಷ್ಠಾನವಾಗಲಿ
ಪರಿಸರದಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಯ ನೀರನ್ನು ಬಳಸಿಕೊಂಡು ಸವಣೂರು, ಪಾಲ್ತಾಡಿ, ಪುಣ್ಚಪ್ಪಾಡಿ, ಬೆಳಂದೂರು, ಕುದ್ಮಾರು,ಕಾೖಮಣ, ಚಾರ್ವಾಕ, ಕಾಣಿಯೂರು, ಆಲಂಕಾರು, ಪೆರಾಬೆ, ಕುಂತೂರು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಶಾಶ್ವತ ಯೋಜನೆ ಅನುಷ್ಠಾನವಾಗಬೇಕಿದೆ.

ಬಹುಗ್ರಾಮ ಶೀಘ್ರ ಅನುಷ್ಠಾನ
ಬೆಳಂದೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನ ಮಾಡಲು ಶಾಸಕ ಎಸ್‌. ಅಂಗಾರ ಅವರ ಪ್ರಯತ್ನದಿಂದ ಯೋಜನೆ ಮಂಜೂರಾತಿಗೆ ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗಿದೆ. ತಾಂತ್ರಿಕ ಮಂಜೂರಾತಿ ಬಳಿಕ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆ ಶೀಘ್ರ ಅನುಷ್ಠಾನವಾಗಲಿ ಎನ್ನುವ ಆಶಯ ನಮ್ಮದು.
-ಪ್ರಮೀಳಾ ಜನಾರ್ದನ,
ಜಿ.ಪಂ. ಸದಸ್ಯರು

ವಿದ್ಯುತ್‌ ಕಡಿತ ದೊಡ್ಡ ಹೊಡೆತ
ಹೆಚ್ಚಿನ ಭಾಗದಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನೇ ಆಶ್ರಯಿಸಲಾಗಿದ್ದು, ಅನಿಯಮಿತ ವಿದ್ಯುತ್‌ ಕಡಿತದಿಂದ ಕೃಷಿ ಹಾಗೂ ಕುಡಿಯುವ ನೀರಿನ ಪೂರೈಕೆಗೆ ದೊಡ್ಡ ಹೊಡೆತ ಬೀಳುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ 4 ಗಂಟೆ ಲೋಡ್‌ ಶೆಡ್ಡಿಂಗ್‌ ಮಾಡಲಾಗುತ್ತಿದೆ. ಅಲ್ಲದೆ ತ್ರಿಫೇಸ್‌ ವಿದ್ಯುತ್‌ ನೀಡುವಲ್ಲಿಯೂ ವ್ಯತ್ಯಯವಾಗುತ್ತಿದೆ .ಇದು ಇನ್ನಷ್ಟು ಸಮಸ್ಯೆಯನ್ನು ಹೆಚ್ಚಿಸಿದೆ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.