ಬೆಳ್ಳಾರೆ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆ


Team Udayavani, Dec 30, 2017, 4:55 PM IST

30-Dec-22.jpg

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್‌ ಜಾಗದಲ್ಲಿ ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವಿದ್ದು ಇದರ ಯಥಾಸ್ಥಿತಿ ಕಾಪಾಡುವಂತೆ ಜಿಲ್ಲಾಧಿಕಾರಿ ಗ್ರಾ. ಪಂ.ಗೆ ನೋಟಿಸ್‌ ನೀಡಿರುವುದಕ್ಕೆ ಬೆಳ್ಳಾರೆ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ತೀವ್ರವಾದ ವಿರೋಧ ವ್ಯಕ್ತವಾಯಿತು. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯು ಪಂಚಾಯತ್‌ ಅಧ್ಯಕ್ಷೆ ಶಕುಂತಲಾ ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಪಂಚಾಯತ್‌ ಪ್ರಭಾರ ಪಿಡಿಒ ಸುನಂದಾ ರೈ ಅವರು ಜಿಲ್ಲಾಧಿಕಾರಿಯಿಂದ ಬಂದ ಪತ್ರವನ್ನು ಓದುತ್ತಿದ್ದಂತೆ ಪಂ. ಸದಸ್ಯರಾದ ನವೀನ್‌ಕುಮಾರ್‌ ರೈ ತಂಬಿನಮಕ್ಕಿ ಅವರು ಮಾತನಾಡಿ, ನಾವು ಗ್ರಾ.ಪಂ. ಜಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಕೆಡವುವಂತೆ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದೆವು. ಆದರೆ ಈ ತನಕ ಯಾವುದೇ ಪ್ರಯೋಜನ ಆಗಿಲ್ಲ. ಈ ಜಾಗದಲ್ಲಿ ಪಂಚಾಯತ್‌ ವಾಣಿಜ್ಯ ಸಂಕೀರ್ಣ ನಿರ್ಮಾಣ ವಾಗಲಿರುವ ಕಾರಣ ಆ ಕಟ್ಟಡ ವನ್ನು ಅಲ್ಲಿಂದ ತೆರವುಗೊಳಿಸಬೇಕು. ಇಲ್ಲ ದಿದ್ದರೆ ನಮಗೆ ಸಮಸ್ಯೆ ಯಾಗುತ್ತದೆ. ಇದನ್ನು ಪಂ. ವತಿಯಿಂದ ಕೆಡವಬೇಕು ಎಂದು ಹೇಳಿದರು.

ಈ ವಿಷಯಕ್ಕೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಎನ್‌ ಎಸ್‌ಡಿ ವಿಠಲದಾಸ್‌ ನವೀನ್‌ ರೈ ಮಾತಿಗೆ ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಮಾತಿಗಿಳಿದ ನವೀನ್‌ ರೈ ಅವರು ಪಂಚಾಯತ್‌ನವರೆಲ್ಲ ನಿಂತು ಕಟ್ಟಡವನ್ನು ಕೆಡವಬೇಕಾದ ಕೆಲಸ ಆಗಬೇಕು. ಸಭೆಯಲ್ಲಿ ನಿರ್ಣಯ ಮಾಡಿ ಎಂದು ಒತ್ತಾಯಿಸಿದರು.

ಹಣ ಪಾವತಿ ಮಾಡುತ್ತಿಲ್ಲ
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದವರು ತ್ಯಾಜ್ಯ ವಿಲೇವಾರಿಗೆ ಹಣ ಪಾವತಿ ಮಾಡುತ್ತಿಲ್ಲ. ಪಂಚಾಯತ್‌ ಗೆ ಸಾಕಷ್ಟು ಖರ್ಚು ಬರುತ್ತದೆ ಎಂದು ಸುನಂದಾ ರೈ ತಿಳಿಸಿದರು. ಪಂಚಾಯತ್‌ಗೆ ಬರುವ ಸಮರ್ಪಕವಲ್ಲದ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ನವೀನ್‌ ರೈ ಸಲಹೆ ನೀಡಿದರು. ಈ ಸಂದರ್ಭ ಅಧ್ಯಕ್ಷರು ಮಾತನಾಡಿ, ಮುಂದಿನ ದಿನದಲ್ಲಿ ಅರ್ಜಿ ತೆಗೆದುಕೊಳ್ಳುವ ಸಂದರ್ಭ ಸಮರ್ಪಕವಾಗಿ ನೋಡಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದರು.

ನೆಟ್ಟಾರು ಶಾಲೆಯ ಕ್ರೀಡಾಂಗಣಕ್ಕೆ ಪಂ. ವತಿಯಿಂದ ಅನುದಾನ ಇಟ್ಟಿಲ್ಲ ಎಂದು ವಿಟ್ಠಲದಾಸ್‌ ಆರೋಪ ಮಾಡಿದರು. ಈ ವೇಳೆ ಸ್ಪಷ್ಟನೆ ನೀಡಿದ ಶಕುಂತಲಾ ನಾಗರಾಜ್‌ ಅವರು ಇಂಟರ್‌ ಲಾಕ್‌ ಕಾಮಗಾರಿಗೆ ಅನುದಾನ ಇಡಲಾಗಿದೆ. ಮುಂದಿನ ಕ್ರಿಯಾಯೋಜನೆಯಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗುವುದು ಎಂದು ಹೇಳಿದರು. ಸುನಂದಾ ರೈ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.