ಬೆಳ್ಳಾರೆ : ಮಾರಾಕಾಸ್ತ್ರದಿಂದ ದಾಳಿ : ಚಿಕಿತ್ಸೆ ಫಲಿಸದೆ ಬಿಜೆಪಿ ಕಾರ್ಯಕರ್ತ ಸಾವು
Team Udayavani, Jul 26, 2022, 10:19 PM IST
ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳು ಆಸ್ಪತ್ರೆಯಲ್ಲಿ ಮೃತ ಘಟನೆ ಜು.26 ರಂದು ಸಂಭವಿಸಿದೆ.
ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಬಿಜೆಪಿ ಕಾರ್ಯಕರ್ತ ಪ್ರವೀಣ್ (29) ಮೃತಪಟ್ಟವರು. ಪೆರುವಾಜೆ ಕ್ರಾಸ್ ಬಳಿ ಪ್ರವೀಣ್ ಅವರು ಕೋಳಿ ಅಂಗಡಿ ಹೊಂದಿದ್ದು ರಾತ್ರಿ ಅಂಗಡಿ ಮುಚ್ಚುತ್ತಿರುವ ವೇಳೆ ಒಂದು ಬೈಕಿನಲ್ಲಿ ಮೂವರು ಅವರ ಮೇಲೆ ಮಾರಾಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
ಸ್ವಲ್ಪ ದೂರ ಅಟ್ಟಾಡಿಕೊಂಡು ಹೋಗಿ ಮಾರಾಕಾಯುದ್ದದಿಂದ ಯದ್ವಾತದ್ವಾ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬೈಕ್ ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು ಎಂಬ ವದಂತಿ ಸ್ಥಳೀಯವಾಗಿ ಹಬ್ಬಿದ್ದು ಖಚಿತಗೊಂಡಿಲ್ಲ.
ಒಂದು ವಾರದ ಹಿಂದೆ ಬೆಳ್ಳಾರೆ ಸಮೀಪದ ಕಳಂಜದಲ್ಲಿ ಮಸೂದ್ ಎಂಬ ಯುವಕನ ಬರ್ಬರ ಕೊಲೆಯಾಗಿತ್ತು. ಅದಾದ ವಾರದೊಳಗೆ ಪ್ರವೀಣ್ ಕೊಲೆಯಾಗಿದೆ.
ಇದನ್ನೂ ಓದಿ : ಸೋನಿಯಾ ಗಾಂಧಿ ವಿಚಾರಣೆ ವಿರುದ್ಧ ಸಿಡಿದ ಕೈ: ರಾಹುಲ್ ಸೇರಿ 50ಕ್ಕೂ ಹೆಚ್ಚು ಸಂಸದರು ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು