ಬೆಳ್ಳಾರೆ: ಚರಂಡಿ ಸಮಸ್ಯೆ ನಿವಾರಣೆಯಾಗಲಿ

ಅವ್ಯವಸ್ಥೆಯಿಂದ ಕೂಡಿದ ಚರಂಡಿ

Team Udayavani, Apr 6, 2022, 10:09 AM IST

drainage

ಸುಳ್ಯ: ಸುಳ್ಯ ತಾಲೂಕಿನಲ್ಲಿ ಹೋಬಳಿ ಕೇಂದ್ರವಾಗುವ ಅರ್ಹತೆಯನ್ನು ಹೊಂದಿರುವ ಬೆಳ್ಳಾರೆ ಪೇಟೆಯಲ್ಲಿ ಚರಂಡಿ ಅವ್ಯವಸ್ಥೆಯಿಂದ ಕೂಡಿದೆ. ಚರಂಡಿಯಲ್ಲಿ ಮಲಿನ ನೀರು ಸಂಗ್ರಹಗೊಂಡು ರೋಗ ಭೀತಿ ಸೃಷ್ಟಿಯಾಗಿದೆ. ಬೆಳ್ಳಾರೆ ಪೇಟೆಯಲ್ಲಿ ವ್ಯವಸ್ಥಿತ ಚರಂಡಿ ಹಾಗೂ ಮಳೆಗಾಲಕ್ಕೂ ಮುನ್ನ ಚರಂಡಿ ದುರಸ್ತಿ ಆಗಬೇಕಿದೆ.

ಬೆಳ್ಳಾರೆ ಅಭಿವೃದ್ಧಿ ಹೊಂದುತ್ತಿರುವ ಪೇಟೆಯಾಗಿದೆ. ಪೇಟೆಯ ಮೇಲಿನ ಭಾಗದಿಂದ ಸುಬ್ರಹ್ಮಣ್ಯ ರಸ್ತೆ ಹಾಗೂ ಸುಳ್ಯ ರಸ್ತೆಯವರೆಗೂ ಚರಂಡಿ ವ್ಯವಸ್ಥೆ ಅಸಮರ್ಪಕವಾಗಿದೆ.

ಪೇಟೆಯಲ್ಲಿ ಈ ಹಿಂದೆ ಚರಂಡಿಗಳನ್ನು ನಿರ್ಮಿಸಲಾಗಿದ್ದರೂ ಅದರಲ್ಲಿ ಈಗ ಗಿಡ-ಗಂಟಿಗಳು ಬೆಳೆದುಕೊಂಡಿದೆ. ಇನ್ನು ಕೆಲವೆಡೆ ಮಣ್ಣು ತುಂಬಿಕೊಂಡು ಚರಂಡಿ ಮುಚ್ಚಿ ಹೋಗಿವೆ. ನೀರು ಸೇರುವಲ್ಲೂ ಚರಂಡಿ ಮುಚ್ಚಿದ ಸ್ಥಿತಿಯಲ್ಲಿದೆ.

ಮಲಿನ ನೀರು ಸಂಗ್ರಹ

ಕೆಳಗಿನ ಪೇಟೆಯ ಸುಬ್ರಹ್ಮಣ್ಯ ರಸ್ತೆಯಲ್ಲಿರುವ ಚರಂಡಿಯ ಕೆಲವೆಡೆ ಮಲಿನ ನೀರು ಸಂಗ್ರಹಗೊಂಡಿದ್ದು,ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಯಾಗಿದೆ. ಜೋರು ಮಳೆ ಬಂದಲ್ಲಿ ಮಳೆ ನೀರು ಚರಂಡಿಯಲ್ಲಿ ತುಂಬಿ ರಸ್ತೆಯ ಮೇಲೂ ಕಲ್ಮಶ ನೀರು ಹರಿಯುತ್ತದೆ.

ಅಪಾಯಕಾರಿ

ಪೇಟೆಯ ಅವ್ಯವಸ್ಥಿತ ಚರಂಡಿಯಿಂದಾಗಿ ಮಳೆ ನೀರು ರಸ್ತೆಯಲ್ಲೇ ಹರಿದು ಮಣ್ಣು ನಿಂತಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ರಸ್ತೆಯ ಎರಡೂ ಬದಿಯಲ್ಲೂ ಸಮರ್ಪಕ ಚರಂಡಿ ವ್ಯವಸ್ಥೆ ಅಗತ್ಯ ಎಂದು ಬೇಡಿಕೆ ಇಡುತ್ತಾರೆ ಸ್ಥಳೀಯರು.

ರಸ್ತೆಗೆ ನೀರು ನುಗ್ಗುವ ಆತಂಕ

ಮೊನ್ನೆ ಸುರಿದ ಮೊದಲ ಮಳೆಗೆ ನೀರು ಚರಂಡಿ ಬಿಟ್ಟು ರಸ್ತೆಯಲ್ಲೇ ಹರಿದಿದೆ. ಮಳೆಗಾಲಕ್ಕೆ ಮೊದಲು ವರ್ಷಂಪ್ರತಿ ಚರಂಡಿ ದುರಸ್ತಿ ಮಾಡಬೇಕೆಂಬ ಬೇಡಿಕೆ ಇದ್ದರೂ ಈಡೇರಿಲ್ಲ ಎಂಬ ದೂರು ವ್ಯಕ್ತವಾಗಿದೆ. ಇಲ್ಲಿನ ಚರಂಡಿ ದುರಸ್ತಿಗೆ ಗ್ರಾಮಸಭೆಯಲ್ಲೂ ಆಗ್ರಹ ವ್ಯಕ್ತವಾಗಿತ್ತು. ಶೀಘ್ರ ಚರಂಡಿ ವ್ಯವಸ್ಥಿತವಾಗಿ ದುರಸ್ತಿಯಾಗದಿದ್ದರೆ ಮಳೆಗಾಲದಲ್ಲಿ ರಸ್ತೆಗೆ ನೀರು ನುಗ್ಗುವ ಆತಂಕವಿದೆ. ಮಾತ್ರವಲ್ಲ ಜತೆಗೆ ಕೊಳಚೆ ನೀರು ರಸ್ತೆಯಲ್ಲೇ ಹರಿಯಲಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.