ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಗರ್ಭಪಾತ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳ ಬಂಧನ
Team Udayavani, Jan 7, 2023, 10:04 PM IST
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಪರಸರದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಮನೋಹರ (23) ಹಾಗೂ ಮಂಗಳೂರು ಕೊಣಾಜೆಯ ಮಾಧವ ಯಾನೆ ಮಾಧು (30) ಬಂಧಿತ ಆರೋಪಿಗಳು.
ಬಾಲಕಿಯು ತನ್ನ ಹತ್ತಿರದ ಸುಧೀರ್ ಮನೆಗೆ ರವಿವಾರ ಹಾಗೂ ಇತರ ರಜಾ ದಿನಗಳಲ್ಲಿ ಟಿವಿ ವೀಕ್ಷಣೆಗೆಂದು ಹೋಗುತ್ತಿದ್ದು, ಈ ಸಮಯ ಸುಧೀರನು ಸಮೀಪದಲ್ಲಿರುವ ಆತನ ಅಜ್ಜಿ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಸಿ ಅತ್ಯಾಚಾರ ನಡೆಸಿ ಬಳಿಕ ಆಗಾಗ ಈ ಕೃತ್ಯವನ್ನು ಕಳೆದ ಒಂದು ವರ್ಷದಿಂದ ಮುಂದುವರಿಸುತ್ತಿದ್ದ.
ಇದರಿಂದ ಬಾಲಕಿಯು ಗರ್ಭವತಿಯಾಗಿದ್ದು ಪಾರ್ವತಿ, ಮನೋಹರ ಹಾಗೂ ಮಾಧವ ಅವರ ಜತೆ ಸೇರಿ ಯಾವುದೋ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿದ್ದ. ಈ ವಿಚಾರವಾಗಿ ಡಿ. 30ರಂದು ಚೈಲ್ಡ್ಲೈನ್ನಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಮೂಡಬಿದಿರೆಯ ಪ್ರಜ್ಞಾ ನಿರ್ಗತಿಕ ಮಕ್ಕಳ ಕುಟೀರದಲ್ಲಿ ಆಪ್ತ ಸಮಾಲೋಚನೆ ನಡೆಸಿ ಬಳಿಕ ನಾಲ್ವರ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಇಬ್ಬರು ಆರೋಪಿಗಳ ಬಂಧನವಾಗಿದೆ.
ಇದನ್ನೂ ಓದಿ: ರೈಲಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಕ್ಕೆ: ಬದಿಯಡ್ಕ ನಿವಾಸಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ