ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ: ಮೂವರು ಸೆರೆ
Team Udayavani, Jan 23, 2023, 11:18 PM IST
ಬೆಳ್ತಂಗಡಿ: ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಜ. 20ರ ರಾತ್ರಿ ನಡೆದಿದೆ.
ಕೃತ್ಯದಲ್ಲಿ ಭಾಗಿಯಾಗಿದ್ದ ಮದ್ದಡ್ಕದ ಹಮೀದ್ (46), ಬೇಲೂರು ಗೋಣಿಬೀಡಿನ ಇಸ್ಮಾಯಿಲ್ (41) ಮತ್ತು ಹ್ಯಾರಿಸ್ (30)ನನ್ನು ವಶಕ್ಕೆ ಪಡೆಯಲಾಗಿದೆ.
ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗ ದಳದ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತತ್ಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ ದಾಳಿ ನಡೆಸಿ ಸುಮಾರು 55 ಕೆ.ಜಿ.ಯಷ್ಟು ಗೋಮಾಂಸ ಹಾಗೂ ಮಾಂಸ ತಯಾರಿಸುತ್ತಿದ್ದ ಸೊತ್ತುಗಳನ್ನು ವಶಕ್ಕೆ ಪಡೆದು ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ ಪ್ರಕರಣ ದಾಖಲಿಸಿದ್ದಾರೆ.