ಬೆಳ್ತಂಗಡಿ ನಗರದ ಆಯಕಟ್ಟಿನ ಸ್ಥಳಗಳಲ್ಲಿಲ್ಲ ಸಿಸಿ ಕೆಮರಾ

ದುರಸ್ತಿ ನಡೆಸದ ಪಟ್ಟಣ ಪಂಚಾಯತ್‌

Team Udayavani, Aug 19, 2022, 1:35 PM IST

17

ಬೆಳ್ತಂಗಡಿ: ಕರಾವಳಿ ಜಿಲ್ಲೆ ಅತೀ ಸೂಕ್ಷ್ಮ ಪ್ರದೇಶವಾಗಿ ಮತ್ತೆ ಮತ್ತೆ ಸಾಬೀತಾದರೂ ಪಟ್ಟಣಗಳಲ್ಲಿ ಕಾನೂನು ಚೌಕಟ್ಟಿನೊಳಗೆ ಬೇಕಾಗುವ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬುದಕ್ಕೆ ಸಾಕ್ಷಿ ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲೂ ಗೋಚರಿಸುತ್ತದೆ.

ಬೆಳ್ತಂಗಡಿ ಪಟ್ಟಣದಲ್ಲೇ ಕಳವು, ಸರಕಾರಿ ಕಾಲೇಜು ಮೈದಾನ ಸಹಿತ ಆಯಕಟ್ಟಿನ ಸ್ಥಳಗಳಲ್ಲಿ ಮಧ್ಯರಾತ್ರಿವರೆಗೂ ದುಶ್ಚಟಗಳನ್ನು ಮೈಗೆ ಅಂಟಿಸಿಕೊಂಡು ಓಡಾಡುವ ಜನ, ಟ್ರಾಫಿಕ್‌ ಸಮಸ್ಯೆ ಮಧ್ಯೆ ಹೆಲ್ಮೆಟ್‌ ಧರಿಸದೇ ಓಡಾಟ, ನಿರ್ಲಕ್ಷ್ಯದ ಚಾಲನೆ, ಅವ್ಯವಸ್ಥಿತ ಪಾರ್ಕಿಂಗ್‌ ಇವುಗಳಿಗೆ ಯಾವುದಕ್ಕೂ ಕ್ರಮವಿಲ್ಲ. ಪ.ಪಂ. ವ್ಯಾಪ್ತಿಗೆ ಒಳಪಟ್ಟಂತೆ ಬಸ್‌ ನಿಲ್ದಾಣದಲ್ಲಿ ವಾರ್ತಾಭವನದ ಮುಂಭಾಗದ ಸಿಸಿ ಕೆಮರಾ ಅಳವಡಿಸಿ 4 ವರ್ಷಗಳೇ ಕಳೆದಿವೆ.

ಅಳವಡಿಸಿ ಒಂದೇ ವರ್ಷದಲ್ಲಿ ಕೆಮರಾ ಕೆಟ್ಟು ನಿಂತಿದ್ದು ಈವರೆಗೆ ಅದರ ನಿರ್ವಹಣೆ ನಡೆಸಿಲ್ಲ. ಪ್ರತೀ ಬಾರಿ ಸಾಮಾನ್ಯ ಸಭೆಯಲ್ಲಿ ಚರ್ಚೆಗಳಾಗಿವೆ. ಆದರೆ ನಿರ್ಣಯಕ್ಕಷ್ಟೆ ಸೀಮಿತ. ಯಾವುದಾದರೂ ದುರ್ಘ‌ಟನೆ ಸಂಭವಿಸಿದ ಬಳಿಕವಷ್ಟೆ ಅದರ ಉಪಯೋಗ ನೆನಪಿಗೆ ಬರುತ್ತದೆ. ಬೆಳ್ತಂಗಡಿ ತಾಲೂಕು ನಾಡಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರಗಳಲ್ಲೊಂದು. ಸಾವಿರಾರು ಜನ ಇಲ್ಲಿ ಸೇರುತ್ತಾರೆ.

ಇಂತಹ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಯಾವುದೇ ತಾಂತ್ರಿಕ ಕ್ರಮಗಳಿಲ್ಲ. ಇದ್ಯಾವುದಕ್ಕೂ ಜನಪ್ರತಿನಿಧಿಗಳು ಯೋಚಿಸಿಲ್ಲ. ಬೆಳ್ತಂಗಡಿ ಬಸ್‌ ನಿಲ್ದಾಣದಲ್ಲಿ ಇರುವ ಸಿಸಿ ಕೆಮರಾ ಒಂದು ಪಾರ್ಶ್ವವಷ್ಟೆ ಗೋಚರಿಸುತ್ತದೆ. ಬಸ್‌ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಅದರ ಕುರಿತು ಮಾಹಿತಿ ಕಲೆ ಹಾಕಲು ಸಿಸಿ ಕೆಮರಾವಿಲ್ಲ. ಬಸ್‌ ನಿಲ್ದಾಣದಲ್ಲಿ ಶಾಲಾ ಮಕ್ಕಳಿಗೆ ಉಂಟಾಗುವ ಕಿರುಕುಳ, ಬಿಕ್ಷಾಟನೆ ಸೋಗಲ್ಲಿ ಬರುವವರು, ಬಸ್‌ ನಿಲ್ದಾಣದ ಅಂಗಡಿಗಳ ಕಳ್ಳತನ ನಡೆದರೆ ಪತ್ತೆ ಹಚ್ಚಲು ಸಾಧ್ಯವಿಲ್ಲ.

ಪಿಕ್‌ ಪಾಕೆಟ್‌, ಮೊಬೈಲ್‌ ಕಳವು, ಮಹಿಳಾ ಕಿರುಕುಳ ನಡೆದಲ್ಲಿ ಸಾಕ್ಷಿ ಸಿಗಲಾರದು. ಈ ಕುರಿತು ಮೂರು ವರ್ಷಗಳಿಂದ ಪರಿಶಿಷ್ಟ ಜಾತಿ ಕುಂದು ಕೊರತೆ ಸಭೆಯಲ್ಲೂ ಧ್ವನಿ ಎತ್ತಲಾಗಿದೆ. ಆದರೆ ಕ್ರಮ ಮಾತ್ರ ಕಡತಕ್ಕಷ್ಟೆ ಸೀಮಿತ.

ಬಸ್‌ ನಿಲ್ದಾಣದ ಅನೇಕ ಪ್ರಕರಣದಲ್ಲಿ ದೂರು ನೀಡಿದರೆ ಕಾರಣಾಂತರಗಳಿಂದ ಒಂದು ಹಂತದಲ್ಲಿ ಬಿ ರಿಪೋರ್ಟ್‌ (ಪತ್ತೆಯಾಗದ ಪ್ರಕರಣವಾಗಿ) ಆಗಿಯೇ ಉಳಿಯುತ್ತದೆ.

ಎಲ್ಲ ಪಾರ್ಶ್ವಕ್ಕೂ ಸಿಸಿ ಕೆಮರಾ ಅಗತ್ಯ ಬೆಳ್ತಂಗಡಿ ಬಸ್‌ ನಿಲ್ದಾಣದ ಒಳಗೆ ಎಲ್ಲ ಪಾರ್ಶ್ವಕ್ಕೂ ಸಿಸಿ ಕೆಮರಾ ಅಳವಡಿಸಬೇಕು. ಪ್ರತೀ ದಿನ 2ರಿಂದ 3 ಸಾವಿರಕ್ಕೂ ಅಧಿಕ ಮಕ್ಕಳು ಸಂಚರಿಸುತ್ತಿದ್ದಾರೆ. ಸಾವಿರಾರು ಪ್ರಯಾಣಿಕರು ಬಂದು ಹೋಗುವ ಬಸ್‌ ನಿಲ್ದಾಣದಲ್ಲಿ ಸಿಸಿ ಕೆಮರಾ ಇಲ್ಲವಾದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಾದರು ಹೇಗೆ? –ಬಿ.ಕೆ. ವಸಂತ್‌, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರು, ದಸಂಸ (ಅಂಬೇಡ್ಕರ್‌ ವಾದ)

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.