ಬೆಳ್ತಂಗಡಿ: ಕಕ್ಕೇನ ಕುಟುಂಬಕ್ಕೆ ಗುಡಿಸಲೇ ಆಧಾರ


Team Udayavani, Jan 21, 2019, 5:27 AM IST

21-january-3.jpg

ಬೆಳ್ತಂಗಡಿ: ಆರ್ಥಿಕವಾಗಿ ಹಿಂದು ಳಿದ ಕುಟುಂಬಗಳ ಸಶಕ್ತೀಕರಣಕ್ಕೆ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಅದು ಅರ್ಹ ಫಲಾನುಭವಿಗಳನ್ನು ತಲುಪದೆ ಕೆಲವೊಂದು ಬಾರಿ ಹಳ್ಳ ಹಿಡಿಯುತ್ತದೆ. ಇದಕ್ಕೊಂದು ಉತ್ತಮ ಉದಾಹರಣೆ ಎಂಬಂತೆ ಲಾೖಲ ಗ್ರಾ.ಪಂ. ವ್ಯಾಪ್ತಿಯ ಕಕ್ಕೇನದಲ್ಲಿ ಕುಟುಂಬವೊಂದು ಮುರುಕಲು ಗುಡಿಸಲಲ್ಲಿ ವಾಸಿಸುತ್ತಿದೆ.

ಕಳೆದ ಕೆಲವು ವರ್ಷಗಳ ಹಿಂದೆ ಇವರ ಮನೆಗೆ ಮರವೊಂದು ಬಿದ್ದು, ಇದ್ದ ಮನೆಯೊಂದು ಧರೆಗುರುಳಿದೆ. ಕೂಲಿ ಮಾಡಿಕೊಂಡು ಜೀವಿಸುವ ಈ ಕುಟುಂಬಕ್ಕೆ ಮನೆಯನ್ನು ಮರು ನಿರ್ಮಿಸುವುದು ಅಸಾಧ್ಯವಾಗಿದ್ದು, ಹೀಗಾಗಿ ಸೂರಿಲ್ಲದೆ ಗುಡಿಸಲೇ ಗತಿಯಾಗಿದೆ. ತಾಲೂಕು ಕೇಂದ್ರವಾದ ಬೆಳ್ತಂಗಡಿಯಿಂದ ಕೇವಲ 5 ಕಿ.ಮೀ. ಅಂತರದಲ್ಲಿ ವಾಸಿಸುವ ಈ ಕುಟುಂಬಕ್ಕೆ ಆಡಳಿತ ವ್ಯವಸ್ಥೆಯಿಂದ ಸೂರು ಕಲ್ಪಿಸಲು ಸಾಧ್ಯವಾಗದೇ ಇರುವುದು ವಿಪರ್ಯಾಸವೇ ಸರಿ.

ಪ.ಜಾ.ಗೆ ಸೇರಿದ ಮುಟ್ಟಿ ಎಂಬ ವೃದ್ಧೆಯ ಕುಟುಂಬದ ವ್ಯಥೆ ಇದು. ಅವರು ಹೇಳುವ ಪ್ರಕಾರ ಕಳೆದ ಸುಮಾರು 35 ವರ್ಷಗಳಿಂದ ಈ ಕುಟುಂಬ ಕಕ್ಕೇನ ಕಾಲನಿಯಲ್ಲಿ ವಾಸಿ ಸುತ್ತಿದ್ದು, ಹಿಂದೊಮ್ಮೆ 22 ಸಾವಿರ ರೂ. ವೆಚ್ಚದಲ್ಲಿ ಆಶ್ರಯ ಯೋಜನೆಯಲ್ಲಿ ಮನೆ ನಿರ್ಮಾಣಗೊಂಡಿತ್ತು. ಅದು ಮರಬಿದ್ದು ಧರೆಗುರುಳಿದೆ.

ದುಡ್ಡೂ ಇಲ್ಲ-ಮಾಹಿತಿಯೂ ಇಲ್ಲ !
ಮುಟ್ಟಿ ಅವರ ಕುಟುಂಬದಲ್ಲಿ ಅವರ ಪುತ್ರ ಅಮಣ, ಸೊಸೆ ಲೀಲಾ, ಮೊಮ್ಮಕ್ಕಳಾದ ಲಕ್ಷ್ಮೀ ಹಾಗೂ ಲೋಕೇಶ್‌ ಇದ್ದಾರೆ. ಈ ಕುಟುಂಬದ ಬಿದ್ದಿರುವ ಮನೆಯ ಪಕ್ಕದಲ್ಲಿ ಮುರುಕಲು ಗುಡಿಸಲು ನಿರ್ಮಿಸಲಾಗಿದ್ದು, ಅದರಲ್ಲಿ ಈ 5 ಮಂದಿ ಹೇಗೆ ವಾಸಿಸುತ್ತಾರೆ ಎಂಬುದೇ ಅಚ್ಚರಿ ಹುಟ್ಟಿಸುತ್ತಿದೆ. ಮನೆ ನಿರ್ಮಿಸುವುದಕ್ಕೆ ಈ ಕುಟುಂಬದ ಬಳಿ ದುಡ್ಡಿಲ್ಲ ಎಂಬುದು ಒಂದೆಡೆಯಾದರೆ, ಸರಕಾರಿ ಸೌಲಭ್ಯಗಳ ಮಾಹಿತಿಯೂ ಅವರಿಗಿಲ್ಲ.

ಮನೆಗಾಗಿ ಅರ್ಜಿ ಹಾಕಿದ್ದೀರಾ ಎಂದು ಅಮಣ ಅವರಲ್ಲಿ ಕೇಳಿದರೆ, ಹೌದೆನ್ನುತ್ತಾರೆ, ಮನೆ ಮಂಜೂರಾಗಿದೆಯೇ ಎಂದರೆ ಅದಕ್ಕೂ ಹೌದು ಎನ್ನುತ್ತಾರೆ. ಆದರೆ ಸರಕಾರಿ ನಿಯಮದ ಪ್ರಕಾರ ಹಂತ ಹಂತವಾಗಿ ಮನೆ ನಿರ್ಮಿಸುವುದಕ್ಕೆ ಇವರ ಬಳಿ ದುಡ್ಡಿಲ್ಲ ಎನ್ನುವುದು ಅವರ ಉತ್ತರವಾಗಿದೆ. ಜತೆಗೆ ಮನೆಗೆ ತೆರಳುವುದಕ್ಕೆ ರಸ್ತೆಯೂ ಇಲ್ಲ. ಯಾವುದೇ ಸರಕನ್ನೂ ಹೊತ್ತುಕೊಂಡೇ ಬರಬೇಕಾದ ಸ್ಥಿತಿ ಇದೆ.

ಬ್ಯಾನರ್‌ಗಳೇ ಆಧಾರ
ಸರಕಾರದ ಯೋಜನೆಗಳು ಈ ಕುಟುಂಬವನ್ನು ತಲುಪದೇ ಇದ್ದರೂ ಸರಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವ ಬ್ಯಾನರ್‌ಗಳೇ ಈ ಕುಟುಂಬಕ್ಕೆ ಆಧಾರವಾಗಿದೆ. ರಸ್ತೆ ಬದಿಗಳಲ್ಲಿ ಹಾಕಿರುವ ಬ್ಯಾನರ್‌ಗಳನ್ನು ಅಮಣ ಅವರು ಕೇಳಿ ತಂದು ಗುಡಿಸಲಿನ ಮೇಲೆ ಹಾಕಿದ್ದಾರೆ. ಇಂತಹ ಹಲವು ಬ್ಯಾನರ್‌ಗಳು ಮೇಲ್ಛಾವಣಿಯಲ್ಲಿವೆ.

ಗುಡಿಸಲಿಗೆ ಮಳೆಗಾಲದಲ್ಲಿ ನೀರು ಒಳಬರುತ್ತದೆ ಎಂಬ ಕಾರಣಕ್ಕೆ ಒಳಗಡೆ ಮಲಗುವುದಕ್ಕಾಗಿ ಎತ್ತರದ ವ್ಯವಸ್ಥೆ ಮಾಡಿದ್ದಾರೆ. ಚಿಮಿಣಿ-ಕ್ಯಾಂಡಲ್‌ ದೀಪಗಳೇ ಬೆಳಕಿಗೆ ಆಧಾರ. ಸ್ನಾನ, ಶೌಚಾಲಯದ ವ್ಯವಸ್ಥೆಯೂ ಇಲ್ಲವಾಗಿದೆ. ಸುಮಾರು 4 ಅಡಿ ಎತ್ತರದ ಗುಡಿಸಲಿಗೆ ಬಗ್ಗಿ ಕೊಂಡೇ ಹೋಗಬೇಕಿದೆ. ಗ್ರಾ.ಪಂ. ನಿಂದ ಉಚಿತವಾಗಿ ನೀರು ಕೊಡುತ್ತಿದ್ದು, ಬಾರದೇ ಇದ್ದರೆ ದೂರದ ಬಾವಿ ಯಿಂದ ತರಬೇಕಿದೆ ಎಂದು ಅಮಣ ಕಣ್ಣೀರಿಡುತ್ತಾರೆ.

ಮನೆ ಮಂಜೂರಾಗಿದೆ
ಮುಟ್ಟಿ ಅವರ ಕುಟುಂಬಕ್ಕೆ ಮನೆ ಮಂಜೂರಾಗಿದ್ದು, ನಿರ್ಮಿಸಿ ಕೊಡುವವರಿಲ್ಲ. ಹಿಂದೆ 2 ಬಾರಿ ಟಾರ್ಪಾಲಿನ ವ್ಯವಸ್ಥೆ ಅವರಿಗೆ ನೀಡಿದ್ದೇವೆ. ಜತೆಗೆ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಮನೆ ದುರಸ್ತಿಗೂ ಗ್ರಾ.ಪಂ.ನಿಂದ ಅನದಾನ ನೀಡಲಾಗಿದೆ. ಆದರೆ ಗ್ರಾ.ಪಂ.ನಿಂದ ಮನೆ ನಿರ್ಮಿಸಿ ಕೊಡುವುದಕ್ಕೆ ಅವಕಾಶವಿಲ್ಲ.
 – ಪ್ರಕಾಶ್‌ ಶೆಟ್ಟಿ ನೊಚ್ಚ
   ಅಭಿವೃದ್ಧಿ ಅಧಿಕಾರಿ,
   ಲಾೖಲ ಗ್ರಾ.ಪಂ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.