ಬೆಳ್ತಂಗಡಿ, ಬಂಟ್ವಾಳ ಶಿಕ್ಷಕರಿಗೆ ಪಗಾರವಿಲ್ಲ !


Team Udayavani, Jun 4, 2018, 7:36 AM IST

14.jpg

ಮಂಗಳೂರು: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಸರ್ವಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಳೆದ ಮೂರು ತಿಂಗಳುಗಳಿಂದ ಸಂಬಳ ಸಿಕ್ಕಿಲ್ಲ. ಹೀಗಾಗಿ ರಜೆ ಕಳೆದು ಪಾಠ ಮಾಡಲು ಸಿದ್ಧರಾದ ಶಿಕ್ಷಕರ ಮುಖಗಳಲ್ಲಿ ಸಂತಸವಿಲ್ಲ. 

ಜಿಲ್ಲೆಯ ಇತರೆಲ್ಲ ತಾಲೂಕುಗಳ ಶಿಕ್ಷಕರಿಗೆ ಸಂಬಳ ಸಿಕ್ಕಿದೆ, ಇಲ್ಲಿ ಮಾತ್ರ ಯಾಕೆ ಸಮಸ್ಯೆ ಎಂಬ ಪ್ರಶ್ನೆಗೆ, ಇದು ಸಣ್ಣ ತಾಂತ್ರಿಕ ದೋಷದಿಂದ ಆದ ಸಮಸ್ಯೆ ಎಂಬ ಉತ್ತರ ಶಿಕ್ಷಣ ಇಲಾಖೆ ಯಿಂದ ಕೇಳಿಬರುತ್ತಿದೆ. ತಾಂತ್ರಿಕ ದೋಷ ಸಣ್ಣದಾದರೂ ಅದರ ಪರಿಣಾಮ ಮಾತ್ರ ದೊಡ್ಡದು ಎಂಬುದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಳಲು. 

ಸಮಸ್ಯೆ ಏನು? 
ಈ ಎರಡು ತಾಲೂಕುಗಳಿಗೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ವೇತನಕ್ಕಾಗಿ ಹಣಕಾಸು ಇಲಾಖೆಯಿಂದ ಬರುವ ಅನುದಾನ ಅದಲು ಬದಲಾಗಿರು ವುದೇ ಸಮಸ್ಯೆಗೆ ಮೂಲ ಕಾರಣ. ಅಂದರೆ ಬೆಳ್ತಂಗಡಿ ತಾಲೂಕಿಗೆ ಬಂಟ್ವಾಳದ್ದು, ಬಂಟ್ವಾಳಕ್ಕೆ ಬೆಳ್ತಂಗಡಿ ಯದು ಬಿಡುಗಡೆಯಾಗಿದೆ. ಇವೆರಡು ತಾಲೂಕುಗಳಲ್ಲಿ ಇರುವ ಶಿಕ್ಷಕರ ಸಂಖ್ಯೆಯಲ್ಲಿ ಅಜಗಜಾಂತರವಿದ್ದು, ಸಹಜವಾಗಿ ಅನುದಾನ ಮೊತ್ತ ದಲ್ಲಿಯೂ ಅಂತರವಿದೆ. ಬಂಟ್ವಾಳ ತಾಲೂಕಿನಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಕರ್ತವ್ಯ 

ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ ಸುಮಾರು 126, ಬೆಳ್ತಂಗಡಿ ತಾಲೂಕಿನಲ್ಲಿರುವ ಶಿಕ್ಷಕರ ಸಂಖ್ಯೆ ಬಹಳ ಕಡಿಮೆ. ಹೀಗಾಗಿ ವೇತನ ಅನುದಾನ ಬಿಡುಗಡೆಯಾಗಿದ್ದರೂ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅದನ್ನು ಶಿಕ್ಷಕರ ವೇತನಕ್ಕಾಗಿ ಬಳಸಿಕೊಳ್ಳುವ ಸ್ಥಿತಿ ಇಲ್ಲ. ಇದು ಅನುದಾನ ಬಿಡುಗಡೆ ಮಾಡುವ ಹಣಕಾಸು ಇಲಾಖೆಯ ಅಧಿಕಾರಿಗಳೇ ಸರಿಪಡಿಸಿಕೊಳ್ಳಬೇಕಾದ ತಪ್ಪಾಗಿ ರುವುದರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲಧಿಕಾರಿಗಳಿಗೆ ದೂರು ನೀಡಿ, ತಪ್ಪು ಸರಿಪಡಿಸುವಂತೆ ಕೋರಿದ್ದಾರೆ. 

ಶಿಕ್ಷಕರ ಸಂಘದ ಒತ್ತಾಯ
ಶಿಕ್ಷಕರ ಸಂಕಷ್ಟವನ್ನು “ಉದಯ ವಾಣಿ’ಯ ಜತೆ ಹಂಚಿಕೊಂಡ ರಾಜ್ಯ ಪ್ರಾ.ಶಾ. ಶಿಕ್ಷಕರ ಸಂಘದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಶಿವಶಂಕರ್‌ ಭಟ್‌ ಕೆ., ಮಾರ್ಚ್‌ನಿಂದ ವೇತನ ಸಿಗದೆ ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಬೇಸಿಗೆ ರಜೆಯನ್ನು ಸಂತಸ ದಿಂದ ಕುಟುಂಬದೊಂದಿಗೆ ಕಳೆಯ ಬೇಕಾಗಿದ್ದ ಅವರು ಆರ್ಥಿಕ ಮುಗ್ಗಟ್ಟಿ ನಿಂದಿದ್ದರು. ಈಗ ಶಾಲೆ ಪ್ರಾರಂಭ ವಾಗಿದ್ದು, ಅಸಂತೋಷ ದಿಂದಲೇ ಕರ್ತವ್ಯಕ್ಕೆ ಹಾಜರಾಗು ತ್ತಿದ್ದಾರೆ. ಇದೊಂದು ಗಂಭೀರ ವಿಚಾರ, ಸಂಬಂಧಪಟ್ಟ ಅಧಿಕಾರಿಗಳು ತಪ್ಪು ಸರಿ ಪಡಿಸಿ ಶೀಘ್ರದಲ್ಲೇ ವೇತನ ಬಿಡುಗಡೆ ಯಾಗುವಂತೆ ಮಾಡಬೇಕು ಎಂದರು. 

ಇನ್ನೆರಡು ದಿನಗಳಲ್ಲಿ   ಇತ್ಯರ್ಥ ನಿರೀಕ್ಷೆ :
ಜಿಲ್ಲಾ  ಉಪಯೋಜನಾ ಸಮನ್ವಯಾಧಿಕಾರಿ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಮಹಾದೇವ್‌ ಎಸ್‌.ಪಿ. ಅವರನ್ನು ಸಂಪರ್ಕಿಸಿದಾಗ, ಸರ್ವಶಿಕ್ಷಾ ಅಭಿಯಾನದ ನಿರ್ದೇಶಕರಿಗೆ ಪತ್ರ ಬರೆಯ ಲಾಗಿದ್ದು, ತಾಂತ್ರಿಕ ದೋಷದಿಂದ ವೇತನ ಬಿಡುಗಡೆ ಅದಲು ಬದ ಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ದೋಷ ಸರಿಪಡಿಸಿ ಮುಂದೆ ವೇತನ ವಿತರಣೆ ವಿಳಂಬ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. 

ಎರಡು ತಿಂಗಳ ಸಂಬಳ ವಿತರಣೆಗೆ ಕ್ರಮ: ಬಿಇಒ 
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ಅವರು ಶಿಕ್ಷಕರು ಪದೇಪದೇ ವೇತನಕ್ಕಾಗಿ ವಿಚಾರಿಸುತ್ತಿರುವುದಾಗಿ ತಿಳಿಸಿದ್ದಾರೆ. “ಅನುದಾನ ನೀಡಿಕೆಯಲ್ಲಿ ಉಂಟಾದ ತಪ್ಪನ್ನು ಸರಿಪಡಿಸಲಾಗುವುದೆಂಬ ಉತ್ತರ ಮೇಲಧಿಕಾರಿಗಳಿಂದ ಸಿಕ್ಕಿದೆ. ಒಂದು ವೇಳೆ ಅದು ವಿಳಂಬವಾದರೆ, ಈಗಾಗಲೇ ಬಿಡುಗಡೆಯಾದ ಅನುದಾನವನ್ನೇ ಬಳಸಿ ಬಾಕಿ ಇರುವ ಮೂರು ತಿಂಗಳ ಸಂಬಳದಲ್ಲಿ ಎರಡು ತಿಂಗಳದ್ದನ್ನು ನೀಡಲಾಗುವುದು’ ಎಂದರು.

ಗಣೇಶ್‌ ಮಾವಂಜಿ 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.