‘ಓಟ್‌ ಬ್ಯಾಂಕ್‌ಗೆ ದಲಿತರನ್ನು ಎತ್ತಿಕಟ್ಟುವ ಯತ್ನ’ 


Team Udayavani, Sep 7, 2018, 11:07 AM IST

7-september-7.jpg

ಬೆಳ್ತಂಗಡಿ : ಜಂತರ್‌-ಮಂಥರ್‌ ನಲ್ಲಿ ಸಂವಿಧಾನ ಸುಟ್ಟು ಅಂಬೇಡ್ಕರ್‌ ಅವರಿಗೆ ಧಿಕ್ಕಾರ ಕೂಗುತ್ತಿದ್ದವರು ಆರೆಸ್ಸೆಸ್‌ನವರು ಎಂದು ಬಿಂಬಿಸುವ ಕೆಲಸ ಮಾಡಲಾಗುತ್ತಿದ್ದು, ಆದರೆ ಅಲ್ಲಿ ಮೋದಿ ಹಾಗೂ ಅಮಿತ್‌ಗೂ ಧಿಕ್ಕಾರ ಹಾಕಲಾಗುತ್ತಿತ್ತು. ಆದರೆ ಕೆಲವರು ಓಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದಲಿತರನ್ನು ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಚಿ.ನಾ. ರಾಮು ಆರೋಪಿಸಿದರು. ಅವರು ಗುರುವಾರ ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕೇಸರಿ ಸುಟ್ಟು ಪ್ರಕರಣವನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಹಿಂದೆ ಅಖಂಡ ಭಾರತವನ್ನು ವಿಭಜನೆ ಮಾಡುವ ಸಂದರ್ಭದಲ್ಲೂ ಅದನ್ನು ಅಂಬೇಡ್ಕರ್‌ ವಿರೋಧಿಸಿದ್ದರು. ಆದರೆ ದೇಶ ವಿಭಜನೆಯೇ ಈಗ ದೊಡ್ಡ ಸಮಸ್ಯೆಯಾಗಿದೆ. ಸಂವಿಧಾನವನ್ನು ರೂಪಿಸುವ ಸಂದರ್ಭದಲ್ಲಿ ಕೇವಲ 6 ಜಾತಿಗಳಿಗೆ ಶೇ. 15 ದಲಿತ ಮೀಸಲಾತಿ ರೂಪಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷ ಓಟಿಗಾಗಿ ಅದಕ್ಕೆ 95 ಜಾತಿಯನ್ನು ಸೇರಿಸುವ ಕೆಲಸ ಮಾಡಿದೆ. ಮೀಸಲಾತಿ ಹೆಸರಿನಲ್ಲಿ ಶ್ರೀಮಂತರು ಹೆಚ್ಚಿನ ಅವಕಾಶಗಳನ್ನು ಪಡೆಯುತ್ತಿದ್ದು, ಬಡವರು ಬಡವರಾಗಿಯೇ ಉಳಿದಿದ್ದಾರೆ. ನಾವು ಸಂವಿಧಾನ, ಭಗವದ್ಗೀತೆ, ಭಗವಾಧ್ವಜ ಎಲ್ಲವನ್ನೂ ಗೌರವಿಸುವವರಾಗಿದ್ದು, ಯಾವುದಕ್ಕೂ ತೊಂದರೆಯಾದರೂ ವಿರೋಧಿಸುತ್ತೇವೆ. ಸಂವಿಧಾನ ಸುಟ್ಟ ಪ್ರಕರಣವನ್ನೂ ವಿರೋಧಿಸಿ, ಪ್ರತಿಭಟನೆ ನಡೆಸಿದ್ದೇವೆ. ಹೀಗಾಗಿ ಬೆಳ್ತಂಗಡಿ ಕೇಸರಿ ಸುಟ್ಟ ಪ್ರಕರಣವನ್ನು ಖಂಡಿಸುತ್ತೇನೆ ಎಂದರು.

ಸಂಘಟನೆಗಳ ಮುಂದಾಳು ಫಟಾಫಟ್‌ ಶ್ರೀನಿವಾಸ್‌ ಮಾತನಾಡಿ, ನಾವು ಸಂವಿಧಾನ ಸುಟ್ಟ ಪ್ರಕರಣವನ್ನು ಮೊತ್ತ ಮೊದಲು ಖಂಡಿಸಿದ್ದೇವೆ. ಆದರೆ ಅದನ್ನೇ ಗುರಿಯಾಗಿಸಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಕೇಸರಿಯನ್ನು ಸುಟ್ಟಿರುವುದು ರಾಷ್ಟ್ರಧ್ವಜದ ಒಂದು ಭಾಗವನ್ನೇ ಸುಟ್ಟಂತೆ. ಅಂಬೇಡ್ಕರ್‌ ಚುನಾವಣೆಗೆ ನಿಂತಾಗ ಅವರನ್ನು ಸೋಲಿಸಿದ ಕಾಂಗ್ರೆಸ್‌ ಗೆ ಈಗ ಅವರ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ. ದಲಿತರೆಂದು ಬೊಬ್ಬೆ ಹಾಕುವ ಇವರು ಮಲ್ಲಿಕಾರ್ಜುನ ಖರ್ಗೆಯನ್ನು ಸಿಎಂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಪ್ರಮುಖರಾದ ಮುರಳಿಕೃಷ್ಣ ಹಸಂತ್ತಡ್ಕ, ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ದಿನೇಶ್‌ ಅಮ್ಟೂರು, ವಿಹಿಂಪ ಜಿಲ್ಲಾ ಉಪಾಧ್ಯಕ್ಷ ಭಾಸ್ಕರ್‌ ಡಿ. ಧರ್ಮಸ್ಥಳ, ವೇಣೂರು ಪ್ರಖಂಡದ ಅಧ್ಯಕ್ಷ ಶಶಾಂಕ್‌ ಭಟ್‌ ಮೊದಲಾದವರಿದ್ದರು. ವಿಹಿಂಪ ಬೆಳ್ತಂಗಡಿ ಅಧ್ಯಕ್ಷ ಸುಬ್ರಹ್ಮಣ್ಯಕುಮಾರ್‌ ಅಗರ್ತ ಸ್ವಾಗತಿಸಿ, ಕಾರ್ಯದರ್ಶಿ ನವೀನ್‌ ನೆರಿಯ ನಿರೂಪಿಸಿದರು. ಬಳಿಕ ಶಾಸಕ ಹರೀಶ್‌ ಪೂಂಜ ನೇತೃತ್ವದಲ್ಲಿ ಕೇಸರಿ ಸುಟ್ಟವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ತಹಶೀಲ್ದಾರ್‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.

ಕಾಂಗ್ರೆಸ್‌ ಕುಮಕ್ಕಿನ ಕೃತ್ಯ
ಶಾಸಕ ಹರೀಶ್‌ ಪೂಂಜ ಮಾತನಾಡಿ, ಹಿಂದೂ ಸಮಾಜದ ಭಾಗವಾದ ಕೇಸರಿಯನ್ನು ಸುಟ್ಟಿರುವುದು ಕಾಂಗ್ರೆಸ್‌ ಕುಮ್ಮಕ್ಕಿನ ಕೃತ್ಯ. ದಲಿತ ಸಂಘಟನೆಗಳ ಪ್ರತಿಭಟನೆಯಲ್ಲಿ ಮಾಜಿ ಶಾಸಕರು, ಕಾಂಗ್ರೆಸ್‌ ಜಿ.ಪಂ. ಸದಸ್ಯರು ಸಹಿತ ಮತ್ತಿತರರು ಭಾಗವಹಿಸಿರುವುದೇ ಅದಕ್ಕೆ ಸಾಕ್ಷಿ. ಜತೆಗೆ ಕಾಂಗ್ರೆಸ್‌ ಪ್ರೇರಿತ ಕೃತ್ಯ ಎಂದು ನೇರ ಆರೋಪ ಮಾಡಿದಾಗಲೂ ಅಲ್ಲ ಎಂದಿಲ್ಲ. ಚುನಾವಣೆ ಸಮೀಪಿಸುತ್ತಿರುವಾಗ ಕಾಂಗ್ರೆಸ್‌ ಇಂತಹ ಕೃತ್ಯಗಳನ್ನು ಅಲ್ಲಲ್ಲಿ ಮಾಡುತ್ತದೆ. ಕೆಲವರು ಕಲೆಕ್ಷನ್‌ಗೆ ಬೇಕಾಗಿ ಹಿಂದುತ್ವದ ನಾಟಕವಾಡುತ್ತಿದ್ದು, ಅಂಥವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.