ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ PDO ಬಂಧನ
Team Udayavani, Jun 22, 2023, 5:30 PM IST
ಕಡಬ : ಮಂಗಳೂರು/ಉಪ್ಪಿನಂಗಡಿ, ಜೂ. 22: ಖಾತೆ ಬದಲಾವಣೆಗೆ ಸಂಬಂಧಿಸಿದಂತೆ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕೌಕ್ರಾಡಿ ಗ್ರಾಮ ಪಂಚಾಯ್ ಅಭಿವೃದ್ಧಿ ಅ ಧಿಕಾರಿ ಮಹೇಶ್ ಜಿ.ಎನ್. ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ವ್ಯಕ್ತಿಯೊಬ್ಬರು ಕೌಕ್ರಾಡಿಯ ತಮ್ಮ ಜಮೀನಿನ 9/11 ಖಾತೆ ಬದಲಾವಣೆಯನ್ನು ತನ್ನ ಹೆಸರಿಗೆ ಮಾಡಿಸಲು 2017ರಲ್ಲಿ ಗ್ರಾಮ ಪಂಚಾಯತ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಖಾತೆ ಬದಲಾವಣೆಯಾಗದ ಹಿನ್ನೆಲೆಯಲ್ಲಿ 2021ರಲ್ಲಿ ಮತ್ತೆ ಗ್ರಾಮ ಪಂಚಾಯತ್ಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದರು. ಆದರೂ ಅವರ ಕೆಲಸ ಆಗಿಲ್ಲ.
ಈ ಹಿನ್ನೆಲೆಯಲ್ಲಿ ಜೂ. 20ರಂದು ಪಂಚಾಯತ್ಗೆ ಹೋಗಿ ವಿಚಾರಿಸಿದಾಗ, ಪಿಡಿಒ ಮಹೇಶ್ ಕೆಲಸ ಮಾಡಿಕೊಡಲು 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಆದರಂತೆ ಜೂ. 22ರಂದು ಪಿಡಿಒ ದೂರುದಾರರಿಂದ ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ ಕೆ. ಹಾಗೂ ಚಲುವರಾಜು, ಇನ್ಸ್ಪೆಕ್ಟರ್ ಅಮಾನುಲ್ಲಾ ಎ., ವಿನಾಯಕ ಬಿಲ್ಲವ ಅವರು ಸಿಬಂದಿ ಜತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್