ಬೆಳ್ತಂಗಡಿ ನಗರ: ದಿನಕ್ಕೆ ಒಂದೇ ತಾಸು ನೀರು ಸರಬರಾಜು


Team Udayavani, May 16, 2019, 6:00 AM IST

13

ಬೆಳ್ತಂಗಡಿ ನಗರಕ್ಕೆ ನೀರಿನ ಆಶ್ರಯವಾದ ಸೋಮಾವತಿ ನದಿ ಬತ್ತಿ ಹೋಗಿದೆ.

ಬೆಳ್ತಂಗಡಿ: ನೀರಿನ ಅಭಾವ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಪರಿಣಾಮ ಬೆಳ್ತಂಗಡಿ ನಗರ ವ್ಯಾಪ್ತಿಗೆ ದಿನಕ್ಕೆ ಒಂದು ತಾಸಿನಂತೆ ಕುಡಿಯುವ ನೀರು ಸರಬರಾಜು ಮಾಡಲು ನಗರ ಪಂಚಾಯತ್‌ ಮುಂದಾಗಿದೆ.

ಅಂತರ್ಜಲ ಮಟ್ಟವೂ ಕುಸಿತ
ಪೂರ್ವ ಮುಂಗಾರು ಕೈಕೊಟ್ಟ ಪರಿಣಾಮ ಈ ಬಾರಿ ನದಿಗಳಲ್ಲಿ ನೀರು ಸಂಪೂರ್ಣ ಬತ್ತಿಹೋಗಿದೆ. ಪಟ್ಟಣಕ್ಕೆ ನೀರಿನ ಆಶ್ರಯದ ಸೋಮಾವತಿ ನದಿ ನೀರು ಹಿಂದೆಂದೂ ಕೇಳರಿಯದಂತೆ ಬತ್ತಿಹೋಗಿ ಅದಾ ಗಲೇ ಒಂದು ತಿಂಗಳು ಕಳೆದಿದೆ. ಈವರೆಗೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿದ್ದ 11 ಹಾಗೂ 3 ಖಾಸಗಿ ಕೊಳವೆಬಾವಿಗಳಿಂದ ದಿನಕ್ಕೆ ಎರಡು ತಾಸು ನೀರು ಬಿಡಲಾಗುತ್ತಿತ್ತು. ಈಗಿರುವ ನೀರಿನ ಟ್ಯಾಂಕ್‌ಗಳಿಗೆ ಶೇಖರಿಸಲೂ ಆಗದಿರುವ ಪರಿಸ್ಥಿತಿ ಇದೆ. ಇದರಿಂದ ನೇರವಾಗಿ ನೀರಿನ ಸಂಪರ್ಕ ಹೊಂದಿರುವ ಪೈಪ್‌ಲೈನ್‌ಗಳಿಗೆ ಸರಬರಾಜು ಮಾಡಲಾಗುತ್ತಿದೆ. ಪರಿಸ್ಥಿತಿಯನ್ನರಿತು ಒಂದು ತಾಸು ನೀರು ಸರಬರಾಜು ಮಾಡಲು ಮುಂದಾಗಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿತ ಬಳಕೆ
ಬೆಳಗ್ಗೆ 6.30ರಿಂದ 7.30, ತಪ್ಪಿದರೆ 8 ಗಂಟೆಯವರೆಗೆ ನೀರು ಸರಬರಾಜಾಗುತ್ತಿದೆ. ಮನೆಮಂದಿ ಹಾಗೂ ಪ್ರತಿಯೊಬ್ಬ ನಾಗರಿಕರೂ ನೀರಿನ ಮಿತಬಳಕೆ ಮಾಡದಿದ್ದಲ್ಲಿ ಪರಿಸ್ಥಿತಿ ಸುಧಾರಣೆ ಕಷ್ಟ ಸಾಧ್ಯವಾಗಲಿದೆ. ಈಗಾಗಲೇ ಪಟ್ಟಣ ಪಂಚಾಯತ್‌ನಿಂದ ಹೊಸ ಹಾಗೂ ಹಳೆ ಕೊಳವೆಬಾವಿಗಳನ್ನು ಮರು ಶುದ್ಧೀಕರಣ ಮಾಡಲಾಗುತ್ತಿದೆ. ಏನೇ ಆದರೂ ಅಂತರ್ಜಲ ಮಟ್ಟ ಸುಧಾರಿಸ ದಿದ್ದಲ್ಲಿ ಅಧಿಕಾರಿಗಳು ಏನು ಮಾಡುವ ಪರಿಸ್ಥಿತಿಯಿಲ್ಲ. ಇದನ್ನರಿತು ನಾಗರಿಕರೇ ನೀರಿನ ಮಿತಬಳಕೆಗೆ ಮುಂದಾಗ ಬೇಕಾದ ಅನಿವಾರ್ಯವಿದೆ.

ದಿನಕ್ಕೆ 5ಲಕ್ಷ ಲೀಟರ್‌ ಪೂರೈಕೆಯೂ ಕಷ್ಟ
ಪ್ರತಿದಿನ ಒಬ್ಬ ವ್ಯಕ್ತಿಗೆ 130 (ಎಲ್‌ಪಿಸಿಡಿ) ಲೀಟರ್‌ ಅವಶ್ಯದಂತೆ 7,746 ಮಂದಿಗೆ 5ರಿಂದ 7 ಲಕ್ಷ ಲೀ. ನೀರು ಸರಬರಾಜು ಅವಶ್ಯವಿದೆ. ಆದರೆ ಪ್ರಸ್ತುತ 5 ಲಕ್ಷ ಲೀಟರ್‌ ನೀರು ಸರಬರಾಜು ಕಷ್ಟಕರವಾಗಿದೆ. ಸದ್ಯ 11 ಕೊಳವೆಬಾವಿ ಹೊರತುಪಡಿಸಿ ಖಾಸಗಿ ಯಾಗಿ ಸಂತೆಕಟ್ಟೆ, ಸಂತೆಕಟ್ಟೆ ಚಾಮುಂ ಡೇಶ್ವರಿ, ಉದಯನಗರದಿಂದ 3 ಖಾಸಗಿ ಕೊಳವೆಬಾವಿಯ ನೀರು ಬಳಸಲಾಗುತ್ತಿದೆ.

15 ಲಕ್ಷ ರೂ. ಬರಪರಿಹಾರ ಯೋಜನೆ
ಈಗಾಗಲೇ ಬರ ಪರಿಹಾರ ನಿಧಿಯಿಂದ 15 ಲಕ್ಷ ರೂ.ನಲ್ಲಿ 9 ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ 7 ಕೆಲಸಗಳು ಪೂರ್ಣಗೊಂಡಿದ್ದು, ಎರಡು ಕೆಲಸ ಪ್ರಗತಿಯಲ್ಲಿದೆ. ಇದರಲ್ಲಿ 3 ಹಳೆ ಕೊಳವೆಬಾವಿ ಮರುಶುದ್ಧೀಕರಣ ಕೆಲಸ, 1 ಹೊಸ ಕೊಳವೆಬಾವಿ, ಪೈಪ್‌ಲೈನ್‌ ಕೆಲಸ, ಕೆಟ್ಟುನಿಂತ ಪಂಪ್‌ ದುರಸ್ತಿ ಕಾರ್ಯ ಮಾಡಲಾಗಿದೆ. 2 ಕಡೆ ಹೊಸ ಕೊಳವೆಬಾವಿಗೆ ಟಿ.ಸಿ. ಅಳವಡಿಸಲು ತಲಾ 2.50 ಲಕ್ಷ ರೂ.ಗಳಂತೆ ಇರಿಸಲಾಗಿದೆ ಎಂದು ಬೆಳ್ತಂಗಡಿ ಪ.ಪಂ. ಎಂಜಿನಿಯರ್‌ ಮಹಾವೀರ ಆರಿಗ ತಿಳಿಸಿದ್ದಾರೆ.

ನೀರು ಬಳಕೆ
ನಗರದ ಹಿಂದಿನ ಜನಸಂಖ್ಯೆ- 7,746 (2011ರ ಜನಗಣತಿ)
ಒಟ್ಟು ನೀರಿನ ಸಂಪರ್ಕ- 1,455
ಗೃಹಬಳಕೆ ಸಂಪರ್ಕ-1,302
ಗೃಹೇತರ ಬಳಕೆ-93
ವಾಣಿಜ್ಯ ಉದ್ದೇಶದ ಬಳಕೆ- 60

 ಅಂತರ್ಜಲ ಸಂರಕ್ಷಣೆಗೆ ಆದ್ಯತೆ
ಪ.ಪಂ.ನಿಂದ ನೀರು ಪಡೆಯುವ ಎಲ್ಲರೂ ವಾಹನ, ಕೃಷಿ ಬಳಕೆಗೆ ನೀರು ಬಳಸದಂತೆ ಈಗಾಗಲೇ ನೋಟಿಸ್‌ ನೀಡಲಾಗಿದೆ. ಬರ ಪರಿಹಾರ ನಿಧಿಯಿಂದ 15 ಲಕ್ಷ ರೂ. ಕಾಮಗಾರಿ ಶೇ. 90 ಪೂರ್ಣಗೊಂಡಿದೆ. ಮಿತಬಳಕೆ, ಅಂತರ್ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ.
 - ಅರುಣ್‌ ಬಿ., ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್‌

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.