ಶಾಶ್ವತ ಪುನರ್ವಸತಿಗೆ ರಾಜ್ಯದಲ್ಲೇ ಮೊದಲ ಹೆಜ್ಜೆ: ಪೂಂಜಾ

ಬೆಳ್ತಂಗಡಿ: ನೆರೆ ಸಂತ್ರಸ್ತರಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

Team Udayavani, Sep 25, 2019, 5:02 AM IST

r-33

ಶಾಸಕ ಹರೀಶ್‌ ಪೂಂಜಾ ಅವರು ಮನೆ ಮಂಜೂರಾದ ಸಂತ್ರಸ್ತರಿಗೆ ಕಾಮಗಾರಿ ಆದೇಶ ಪತ್ರವನ್ನು ವಿತರಿಸಿದರು.

ಬೆಳ್ತಂಗಡಿ: ತಾಲೂಕಿನಲ್ಲಿ ನೆರೆಯಿಂದ ವಸತಿ ಕಳೆದುಕೊಂಡವರಿಗೆ ಶಾಶ್ವತ ಮನೆ ನಿರ್ಮಿಸಲು ಸರಕಾರ ಬದ್ಧ. ರಾಜೀವ್‌ ಗಾಂಧಿ ವಸತಿ ಯೋಜನೆಯಡಿ ಕಾನೂನು ಸಡಿಲಗೊಳಿಸಿ ರಾಜ್ಯದಲ್ಲೇ ಮೊದಲ ಬಾರಿಗೆ ಇಲ್ಲಿ ಕಾಮಗಾರಿಗೆ ಮುಂಗಡ ನೀಡಲಾಗುತ್ತಿದೆ ಎಂದು ಶಾಸಕ ಹರೀಶ್‌ ಪೂಂಜಾ ತಿಳಿಸಿದರು.

ಸಂತೆಕಟ್ಟೆ ಸಮೀಪದ ಮಂಜುನಾಥ ಕಲಾಭವನದಲ್ಲಿ ಮಂಗಳವಾರ ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ- 2019ರಡಿ ಮನೆ ಮಂಜೂರಾದವರಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ನೆರೆಯಿಂದ 170 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. 257 ಮನೆಗಳ ಪುನರ್ವಸತಿ ಕಾಮಗಾರಿಗೆ ಮುಂದಡಿ ಇಡಲಾಗಿದೆ. ಮನೆ ನಿರ್ಮಾಣಕ್ಕೆ ಆರಂಭದಲ್ಲಿ 1 ಲಕ್ಷ ರೂ. ಬಿಡುಗಡೆ ಮಾಡಿದ್ದು, ಬಳಿಕ ಒಟ್ಟು 5 ಲಕ್ಷ ರೂ. ನೀಡಲಾಗುತ್ತದೆ ಎಂದರು.

ಉದ್ಯಮಿಗಳಿಂದ ನೆರವು
ಕೊಳಂಬೆ ಮತ್ತು ಇತರ ಕಡೆ ಉದ್ಯಮಿಗಳಾದ ರಾಜೇಶ್‌ ಪೈ ಮತ್ತು ಮೋಹನ್‌ ಉಜಿರೆ ತಂಡವು ಸಂತ್ರಸ್ತರ ನೆರವಿಗೆ ಅಭೂತಪೂರ್ವವಾಗಿ ಸ್ಪಂದಿಸಿದೆ ಮನೆ ನಿರ್ಮಾಣಕ್ಕೂ ನೆರವು ಪಡೆಯಲಾಗುವುದು ಎಂದರು.

ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸೆಬಾಸ್ಟಿಯನ್‌, ಜಿ.ಪಂ. ಸದಸ್ಯರಾದ ಸೌಮ್ಯಲತಾ ಜಯಂತ್‌ ಗೌಡ, ನಮಿತಾ, ತಾ.ಪಂ. ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಜಯರಾಮ್‌, ಗಣೇಶ್‌ ಆಚಾರ್ಯ ಮತ್ತು ನೆರೆ ಸಂತ್ರಸ್ತ 17 ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು. ಪಿಡಿಒಗಳು ಸಂತ್ರಸ್ತರ ಮಾಹಿತಿ ನೀಡಿದರು. ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಇ. ಜಯರಾಮ್‌ ಸ್ವಾಗತಿಸಿ, ತಾ.ಪಂ. ಸಂಯೋಜಕ ಜಯನಂದ್‌ ಲಾೖಲ ವಂದಿಸಿದರು. ಉಜಿರೆ ಪಿಡಿಒ ಪ್ರಕಾಶ್‌ ಶೆಟ್ಟಿ ನೊಚ್ಚ ನಿರೂಪಿಸಿದರು.

ಮಕ್ಕಿ ಮಂದಿ ಸ್ಥಳಾಂತರ ಚಿಂತನೆ
ಮಿತ್ತಬಾಗಿಲು ಗ್ರಾಮದ ಮಕ್ಕಿ ಪ್ರದೇಶದ ನಿವಾಸಿಗಳ ಭೂಮಿ ಕಂದಾಯ ಇಲಾಖೆಗೆ ಸೇರಿದ್ದು, ಅದನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿ, ಸೂಕ್ತ ಪರಿಹಾರ ನೀಡಿ ಅವರನ್ನು ಸ್ಥಳಾಂತರಿಸುವ ಚಿಂತನೆ ಇದೆ. ಗಣೇಶ ನಗರದ 32 ಕುಟುಂಬಗಳನ್ನೂ ಸ್ಥಳಾಂತರಿಸಿ ಬದಲಿ ನಿವೇಶನ ಮತ್ತು ಮನೆ ಮಂಜೂರಾತಿಗೆ ಪ್ರಯತ್ನಿಸಲಾಗುತ್ತಿದೆ. ಹಾನಿಗೊಳಗಾದ ಹೊಳೆ ಬದಿಯ ಕೆಲವು ಮನೆಗಳು ಮತ್ತು ಜಮೀನುಗಳವರು ಪಟ್ಟಿಯಲ್ಲಿ ಹೆಸರು ತಪ್ಪಿಹೋಗಿದ್ದರೆ ತನ್ನ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಾಸಕರು ತಿಳಿಸಿದರು.

ಪ್ರಮಾಣ ಪತ್ರ ಪಡೆದವರು
ಬಂದಾರು, ಚಾರ್ಮಾಡಿ, ಬೆಳಾಲು, ಧರ್ಮಸ್ಥಳ, ಇಂದಬೆಟ್ಟು, ಕಡಿರುದ್ಯಾವರ, ಕಳೆಂಜ, ಲಾೖಲ, ಮಲವಂತಿಗೆ, ಮಿತ್ತಬಾಗಿಲು, ಮುಂಡಾಜೆ, ನಡ, ನಾವೂರ, ನೆರಿಯ, ಕಲ್ಮಂಜ (ನಿಡಿಗಲ್‌), ಪಟ್ರಮೆ ಮತ್ತು ಪುದುವೆಟ್ಟು ಗ್ರಾಮಗಳಲ್ಲಿ ಒಟ್ಟು 257 ಮನೆಗಳು ಹಾನಿಗೀಡಾಗಿದ್ದು, 250 ಮಂದಿಗೆ ಆದೇಶಪತ್ರ ನೀಡಲಾಯಿತು. ಇದರಲ್ಲಿ ಸಂಪೂರ್ಣ ಹಾನಿಯ 170, ಗಂಭೀರ ಹಾನಿಯ 54, ಭಾಗಶಃ ಹಾನಿಯ 33 ಮನೆಗಳು ಸೇರಿವೆ.

ಮನೆ ನಿರ್ಮಾಣಕ್ಕೆ ಕಾಳಜಿ ರಿಲೀಫ್‌ ಫಂಡ್‌ ವಿನಿಯೋಗ ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್‌ಗೆ ದಾನಿಗಳು ಮತ್ತು ಉದ್ಯಮಿಗಳು ನೀಡಿದ ಆರ್ಥಿಕ ಸಹಾಯವನ್ನು ಮನೆ ನಿರ್ಮಾಣಕ್ಕಾಗಿ ಸಂಪೂರ್ಣ ವಿನಿಯೋಗಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.