ಬೆಳ್ತಂಗಡಿ: ಕಚೇರಿಯಲ್ಲೇ ಹೃದಯಾಘಾತ; ಕರ್ತವ್ಯನಿರತ ಗ್ರಾಮ ಸಹಾಯಕ ನಿಧನ
Team Udayavani, Jun 7, 2022, 3:14 PM IST
ಬೆಳ್ತಂಗಡಿ: ತಾಲೂಕಿನ ಮೇಲಂತಬೆಟ್ಟು ಗ್ರಾಮ ಪಂಚಾಯತ್ನ ಗ್ರಾಮ ಸಹಾಯಕರೊಬ್ಬರು ಕರ್ತವ್ಯದಲ್ಲಿದ್ದಾಗ ಕಚೇರಿಯಲ್ಲೇ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೇಲಂತಬೆಟ್ಟು ಗ್ರಾಮದ ಗ್ರಾಮ ಸಹಾಯನಾಗಿದ್ದ ಉರುವಾಲು ಗ್ರಾಮದ ಬೇಂಗಾಯಿ ನಿವಾಸಿ ಸುಂದರ್ ಗೌಡ (45) ಮೃತಪಟ್ಟ ವ್ಯಕ್ತಿ.
ಮಂಗಳವಾರ ಮೇಲಂತಬೆಟ್ಟು ಗ್ರಾಮಲೆಕ್ಕಿಗ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ, ಸುಂದರಗೌಡ ಕರ್ತವ್ಯದಲ್ಲಿದ್ದರು. ಮಧ್ಯಾಹ್ನ ವೇಳೆ ಮತ್ತೋರ್ವ ಗ್ರಾಮಲೆಕ್ಕಿಗ ಶಿವಕುಮಾರ್ ಅವರು ಹಾಗೂ ಮುಂಡೂರು ಗ್ರಾ.ಪಂ. ಸದಸ್ಯ ಸಂತೋಷ್ ಮುಂಡೂರು ಅವರೊಂದಿಗೆ ಚಹಾ ಸೇವಿಸಿ ಕಚೇರಿಗೆ ತೆರಳಿದ್ದರು. ಈ ವೇಳೆಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಉಡುಪಿಯಲ್ಲಿ ಭಾರಿ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ
ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕು ಕಚೇರಿ ಸಿಬಂದಿ, ಗ್ರಾಮಲೆಕ್ಕಿಗರು, ಗ್ರಾಮಸಹಾಯಕರು, ಸ್ನೇಹಿತರು ಬಂದು ಮೃತರ ಅಂತಿಮ ದರ್ಶನ ಪಡೆದರು. ಮೃತ ಸುಂದರ ಗೌಡ ಬೇಂಗಾಯಿ ತಾಯಿ, ಪತ್ನಿ ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು