Belthangady ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿಗಳ ಬಂಧನ
Team Udayavani, Apr 8, 2024, 9:42 PM IST
ಬೆಳ್ತಂಗಡಿ: ಮರಳು ಅಕ್ರಮ ಸಾಗಾಟದ ಎರಡು ಪಿಕಪ್ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ ಎ. 7ರಂದು ರಾತ್ರಿ ವೇಣೂರು ಮಾಹಿತಿ ಬಂದ ಮೇರೆಗೆ, ಪಿಎಸ್ಐ ಶ್ರೀಶೈಲ ಡಿ. ಮುರಗೋಡ್, ಸಿಬಂದಿಗಳೊಂದಿಗೆ ಸ್ಥಳಕ್ಕೆ ಹೋದಾಗ, ವೇಣೂರು ಡ್ಯಾಂ ಬಳಿ ಕರಿಮಣೇಲು ಗ್ರಾಮದ ನಿವಾಸಿ ಸತೀಶ್ (44) ಮತ್ತು ಮೂಡುಕೋಡಿ ಗ್ರಾಮದ ನವೀನ್ (35) ಎರಡು ಪಿಕಪ್ಗಳಲ್ಲಿ ತಲಾ 30 ಬುಟ್ಟಿಗಳಷ್ಟು ಮರಳನ್ನು ತುಂಬಿಸಿರುವುದು ಕಂಡುಬಂದಿತ್ತು.
ಆರೋಪಿಗಳು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಅನಧಿಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿರುವುದು ದೃಢಪಟ್ಟಿದ್ದು, ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ