ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆ; ಸಾಯುವ ಮೊದಲು ಆಪ್ತರೋರ್ವರಿಗೆ ಕರೆ

ಕೊಲೆ ಅನುಮಾನ ವ್ಯಕ್ತಪಡಿಸಿದ ಮನೆಮಂದಿ

Team Udayavani, Dec 1, 2022, 1:15 AM IST

ಆಟೋ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆ; ಸಾಯುವ ಮೊದಲು ಆಪ್ತರೋರ್ವರಿಗೆ ಕರೆ

ಬೆಳ್ತಂಗಡಿ: ಮೆಹಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವ್ಯಕ್ತಿ ಮನೆಗೆ ಹಿಂದಿರುಗದೆ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ ಕೆರೆಯಲ್ಲಿ ಮುಳುಗಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನ. 30ರಂದು ನಡೆದಿದೆ.

ಕುವೆಟ್ಟು ಗ್ರಾಮದ ಶಿವಾಜಿನಗರ ಮನೆ ನಿವಾಸಿ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಪ್ರವೀಣ್‌ ಪಿಂಟೋ (37) ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದ ವ್ಯಕ್ತಿ.

ಪ್ರವೀಣ್‌ ಪಿಂಟೊ ಅವರು ನ. 29ರಂದು ರಾತ್ರಿ ಓಡಿಲಾ°ಳ ಗ್ರಾಮದ ಅಮರ್‌ ಜಾಲ್‌ ಸಮೀಪ ಮೆಹಂದಿ ಕಾರ್ಯಕ್ರಮಕ್ಕೆಂದು ಪತ್ನಿಯಲ್ಲಿ ಹೇಳಿ ತೆರಳಿದ್ದರು. ರಾತ್ರಿ 1.39ಕ್ಕೆ ಪತ್ನಿ ಕರೆ ಮಾಡಿದಾಗ ಈಗ ಬರುತ್ತೇನೆ ಎಂದು ತಿಳಿಸಿದವರು ಮನೆಗೆ ಬಾರದೇ ನ. 30 ರಂದು ಪ್ರವೀಣ್‌ ಅವರ ಚಾಲನ ಪರವಾನಿಗೆ ಪತ್ರ ಹಾಗೂ ಇನ್ನಿತರ ದಾಖಲೆಗಳು ಗುರುವಾಯನ ಕೆರೆಯ ಬಳಿ ಸಿಕ್ಕಿತ್ತು.

ಮೃತದೇಹ ಪತ್ತೆ ಕಾರ್ಯ
ಗುರುವಾಯನಕೆರೆಯ ದಡದಲ್ಲಿ ಪ್ರವೀಣ್‌ ಅವರ ಚಪ್ಪಲಿ ಹಾಗೂ ದಾಖಲೆಗಳು ಸಿಕ್ಕಿದ ಕಾರಣ ಆತ್ಮಹತ್ಯೆ ವದಂತಿಯಿಂದ ಬೆಳ್ತಂಗಡಿ ಪೊಲೀಸರು ಅಗ್ನಿ ಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣ ಘಟಕದ ಸ್ವಯಂಸೇವಕರು, ಸ್ಥಳೀಯರು ಸೇರಿ ಬೆಳಗ್ಗಿನಿಂದಲೇ ಹುಡುಕಾಟ ಆರಂಭಿಸಿದ್ದರು. ಆ ಬಳಿಕ ಮುಳುಗು ತಜ್ಞರು ಆಗಮಿಸಿ ಮಧ್ಯಾಹ್ನ 2 ಗಂಟೆಗೆ ಮೃತದೇಹ ಮೇಲಕ್ಕೆ ಎತ್ತಲಾಯಿತು.

ಮೃತರ ಮನೆಯವರು ಒಟ್ಟು ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮೃತ ಪ್ರವೀಣ್‌ 7 ತಿಂಗಳ ಗರ್ಭಿಣಿ ಪತ್ನಿ ಮತ್ತು ಆರು ವರ್ಷದ ಪುತ್ರನನ್ನು ಅಗಲಿದ್ದಾರೆ.ಪೊಲೀಸರ ಮಾಹಿತಿಯಂತೆ ಪ್ರವೀಣ್‌ ಸಾಯುವುದಕ್ಕೆ ಮೊದಲು ತನ್ನ ಆಪ್ತರೋರ್ವರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ ಎನ್ನಲಾಗಿದೆ. ಸೂಕ್ತ ತನಿಖೆಯಿಂದಷ್ಟೇ ಸಾವಿಗೆ ಕಾರಣಗಳೇನು ಎಂಬುದು ತಿಳಿಯಬಹುದು.

ಪತ್ನಿಯಿಂದ ದೂರು
ಮೆಹಂದಿ ಮನೆಯಲ್ಲಿ ಪ್ರವೀಣ್‌ ಹಾಗೂ ಪ್ರದೀಪ್‌ ಶೆಟ್ಟಿ ಎಂಬವರಿಗೆ ಮಾತಿನ ಚಕಮಕಿಯಾಗಿ ಹೊಡೆದಾಟ ನಡೆದಿರುವ ವಿಚಾರ ತಿಳಿದುಬಂದಿದೆ. ಮಧ್ಯ ರಾತ್ರಿ 3 ಗಂಟೆ ಸುಮಾರಿಗೆ ಕಾರೊಂದು ಮೃತ ಪ್ರವೀಣ್‌ ಮನೆಯ ಬಳಿ ಬಂದಿದೆ. ಪ್ರವೀಣ್‌ ಧರಿಸಿದ್ದ ಕೆಂಪು ಟೀ ಶರ್ಟ್‌ ಕಾಣೆಯಾಗಿರುವುದರಿಂದ ಪತಿ ಸಾವಿನ ಬಗ್ಗೆ ಸಂಶಯವಿದೆ. ಹೀಗಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಪತ್ನಿ ರೇಷ್ಮಾ ಜೂಲಿಯೆಟ್‌ ಲೋಬೋ ಅವರು ಬೆಳ್ತಂಗಡಿ ಠಾಣೆಗೆ ದೂರು ದಾಖಲಿಸಿರುವಂತೆ ಪ್ರಕರಣ ದಾಖಲಿಸಲಾಗಿದೆ.

ಶೌರ್ಯ ವಿಪತ್ತು ನಿರ್ವಹಣೆ ತಂಡದಿಂದ ಕಾರ್ಯಾಚರಣೆ
ಆಟೋ ಚಾಲಕನ ಮೃತದೇಹ ಪತ್ತೆಕಾರ್ಯದಲ್ಲಿ ಅಗ್ನಿಶಾಮಕ ದಳ ನಿರಂತರ ಪ್ರಯತ್ನದ ನಡುವೆಯೂ ವಿಫಲವಾದ ಹಿನ್ನೆಲೆ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ತಂಡದ ಸ್ವಯಂಸೇವಕರು ನಿರಂತರ ಹುಡುಕಾಟ ನಡೆಸಿದರು. ಬಳಿಕ ಮುಳುಗು ತಜ್ಞ ಮಂಗಳೂರಿನ ಈಶ್ವರ ಮಲ್ಪೆಯವರನ್ನು ಕರೆಸಿ ಆಕ್ಸಿಜನ್‌ ಸಹಾಯದಿಂದ ಶೋಧ ನಡೆಸಿದರು. ಇವರಿಗೆ ಶೌರ್ಯ ತಂಡದ ಹರೀಶ್‌ ಕೂಡಿಗೆ, ಸಂತೋಷ್‌, ಮಾಸ್ಟರ್‌ ಸ್ನೇಕ್‌ ಪ್ರಕಾಶ್‌ ಸಹಕರಿಸಿದರು. ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿ.ಪಾçಸ್‌, ವಿಪತ್ತು ನಿರ್ವಹಣೆ ತಂಡದ ಯೋಜನಾಧಿಕಾರಿ ಜೈವಂತ್‌ ಪಟಗಾರ್‌ ಇದ್ದರು.

ತಡೆಬೇಲಿ ಇಲ್ಲದ ಕೆರೆ
ಗುರುವಾಯನಕೆರೆಯಿಂದ ನಾರಾವಿ, ಮೂಡುಬಿದಿರೆಗೆ ಸಾಗುವ ಹೆದ್ದಾರಿ ಬದಿ ಕೆರೆಯಿದ್ದು ಅಪಘಾತವಾಗಿ ಕೆರೆಗೆ ಬೀಳದಂತೆ ಸೂಕ್ತ ತಡೆಬೇಲಿ ರಕ್ಷಣೆ ಇಲ್ಲಿಲ್ಲ. ಈ ಹಿಂದೆ ಮೂಡಿಗೆರೆ ಮೂಲದ ಚಾಲಕನೋರ್ವ ಇದೇ ಕೆರೆಗೆ ಬಿದ್ದು ಮೃತಪಟ್ಟಿದ್ದ. ಕಳೆದ ಕೆಲವು ತಿಂಗಳ ಹಿಂದೆ ಈ ಕೆರೆಗೆ ವಿಷಯುಕ್ತ ನೀರು ಸೇರಿ ಜಲಚರದ ಮಾರಣಹೋಮ ಸಂಭವಿಸಿತ್ತು. ಆದರೂ ಸ್ಥಳೀಯಾಡಳಿತ ಸಹಿತ ತಾಲೂಕು ಆಡಳಿತ ಕೆರೆ ಸುತ್ತ ಅಥವಾ ಅಪಾಯದ ಸ್ಥಳಗಳಲ್ಲಿ ತಡೆಬೇಲಿ ರಚಿಸಿಲ್ಲ. ಇನ್ನಾದರೂ ಸೂಕ್ತ ಕ್ರಮಕ್ಕೆ ಮುಂದಾಗದಿದ್ದಲ್ಲಿ ಮತ್ತಷ್ಟು ಅಪಾಯಕ್ಕೆ ಕಾರಣವಾಗಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.