Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
ಸ್ಕೂಟರ್ ಸವಾರೆ ಸ್ಥಿತಿ ಗಂಭೀರ
Team Udayavani, Mar 28, 2024, 11:15 PM IST
ಬೆಳ್ತಂಗಡಿ : ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬೆಳ್ತಂಗಡಿ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಯುವತಿ ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಕೂಟರ್ ಸವಾರೆ ಬೆಳ್ತಂಗಡಿ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮೃತ ದುರ್ದೈವಿ ಶೇಖರ್ ಬಂಗೇರ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿಯಾಗಿದ್ದು, ಮುಗ್ಗ ಗುತ್ತು ಮನೆತನ ಟ್ರಸ್ಟ್ ಕೋಶಾಧಿಕಾರಿ, ಲಾಯಿಲ ರಾಘವೇಂದ್ರ ಮಠದ ಕೋಶಾಧಿಕಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ