ಬೆಳ್ತಂಗಡಿ ತಾ| ಸ್ತ್ರೀ ಶಕ್ತಿ ಭವನ ಕಾಮಗಾರಿ ಬಹುತೇಕ ಪೂರ್ಣ


Team Udayavani, Jul 29, 2018, 10:27 AM IST

29-july-3.jpg

ಬೆಳ್ತಂಗಡಿ: ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಾಲೂಕು ಸ್ತ್ರೀಶಕ್ತಿ ಬ್ಲಾಕ್‌ ಸೊಸೈಟಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ತ್ರೀಶಕ್ತಿ ಭವನಗಳನ್ನು ನಿರ್ಮಿಸುತ್ತಿದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಸ್ತ್ರೀಶಕ್ತಿ ಭವನದ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ತಿಂಗಳೊಳಗೆ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ಬಿ.ಎಸ್‌. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ 2008ರ ಬಜೆಟ್‌ನಲ್ಲಿ ಪ್ರತಿ ತಾಲೂಕು ಕೇಂದ್ರದಲ್ಲಿ ಸ್ತ್ರೀಶಕ್ತಿ ಭವನ ನಿರ್ಮಿಸುವುದಾಗಿ ಘೋಷಿಸಿದ್ದರು. ದ.ಕ. ಜಿಲ್ಲೆಯ ಎಲ್ಲೆಡೆ ಸ್ತ್ರೀಶಕ್ತಿ ಭವನಗಳು ನಿರ್ಮಾಣವಾಗಿದ್ದರೂ ಬೆಳ್ತಂಗಡಿಯಲ್ಲಿ ಬಾಕಿ ಇತ್ತು. ಬೆಳ್ತಂಗಡಿ ನಗರದಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರ ಕಚೇರಿಗೆ ತಾಗಿಕೊಂಡು ಸ್ತ್ರೀಶಕ್ತಿ ಭವನ ನಿರ್ಮಿಸಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. 22 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಪೈಂಟಿಂಗ್‌, ಪೀಠೊಪಕರಣ ಜೋಡಣೆ ಬಾಕಿ ಇದೆ.

ಸ್ತ್ರೀಶಕ್ತಿ ಭವನ ಯಾಕೆ?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸ್ತ್ರೀಶಕ್ತಿ ಗುಂಪುಗಳಿಗೆ ತಾಲೂಕು ಮಟ್ಟದಲ್ಲಿ ತಾ| ಸ್ತ್ರೀಶಕ್ತಿ ಬ್ಲಾಕ್‌ ಸೊಸೈಟಿಗಳು ಕಾರ್ಯಾಚರಿಸುತ್ತಿರುತ್ತವೆ. ಅವರಿಗೆ ಪ್ರತಿ ತಿಂಗಳು ಸಭೆ, ಇನ್ನಿತರ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸ್ತ್ರೀಶಕ್ತಿ ಭವನಗಳನ್ನು ನಿರ್ಮಾಣ ಮಾಡಲಾಗಿದೆ.

ತಾಲೂಕಿನಲ್ಲಿ ಸ್ತ್ರೀಶಕ್ತಿ ಭವನ ನಿರ್ಮಾಣವಾಗದೆ ಸಿಡಿಪಿಒ ಕಚೇರಿಯಲ್ಲೇ ತಿಂಗಳ ಸಭೆ ನಡೆಯುತ್ತಿತ್ತು. ಮಳೆಯ ತೀವ್ರತೆ ಹೆಚ್ಚಿರುವುದರಿಂದ ಪೈಂಟಿಂಗ್‌ ಕಾಮಗಾರಿ ಕಷ್ಟವಾಗಿದೆ. ಸಂಬಂಧಪಟ್ಟ ಅಧಿಕಾರಿ ಗಳು, ಜನಪ್ರತಿನಿಧಿಗಳ ದಿನಾಂಕ ನಿಗದಿ ಮಾಡಿಕೊಂಡು ಉಪನಿರ್ದೇಶಕರ ಮಾರ್ಗದರ್ಶನದಂತೆ ಭವನ ಉದ್ಘಾಟಿಸಲಾಗುವುದು ಎಂದು ಸಿಡಿಪಿಒ ಪ್ರಿಯಾ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ 324 ಅಂಗನವಾಡಿ ಕೇಂದ್ರಗಳನ್ನು 12 ವಲಯಗಳನ್ನಾಗಿ ವಿಂಗಡಿಸಿ, ಒಟ್ಟು 525 ಸ್ತ್ರೀಶಕ್ತಿ ಗುಂಪುಗಳು ಕಾರ್ಯಾಚರಿಸುತ್ತಿವೆ. ತಾಲೂಕಿನಲ್ಲಿ ಪ್ರಸ್ತುತ 1,000 ರೂ.ನಂತೆ ಶುಲ್ಕ ನೀಡಿರುವ 1,010 ಮಂದಿ ಅಜೀವ ಸದಸ್ಯರು ತಾಲೂಕು ಸ್ತ್ರೀಶಕ್ತಿ ಬ್ಲಾಕ್‌ ಸೊಸೈಟಿಯಲ್ಲಿದ್ದಾರೆ. 

ಇವರ ಶುಲ್ಕದ ಮೊತ್ತವನ್ನು ಬ್ಯಾಂಕಿನಲ್ಲಿ ಇರಿಸಲಾಗಿದ್ದು, ಅದರ ಬಡ್ಡಿಯ ಮೊತ್ತವನ್ನು ವಾರ್ಷಿಕ ಖರ್ಚುವೆಚ್ಚಗಳನ್ನು ನಡೆಸಲಾಗುತ್ತದೆ. ಪ್ರತಿವರ್ಷ ಬ್ಲಾಕ್‌ ಸೊಸೈಟಿಯ ಮಹಾಸಭೆ ನಡೆದು 10 ಮಂದಿ ಸದಸ್ಯರನ್ನು ಸಮಿತಿಗೆ ಆಯ್ಕೆಮಾಡಿ ಅದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಕೋಶಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದ್ದು, ಕಾರ್ಯದರ್ಶಿ ಇಲಾಖೆಯವರಾಗಿರುತ್ತಾರೆ. ಆದರೆ ಈ ಬಾರಿ ಕಾರ್ಯದರ್ಶಿಯೂ ಅಜೀವ ಸದಸ್ಯರಾಗಿರುತ್ತಾರೆ. 11 ಮಂದಿ ಅಜೀವ ಸದಸ್ಯರನ್ನು ಸಮಿತಿಯ ಆರಿಸಲಾಗುತ್ತದೆ.

ಈ ಹಿಂದೆ ಬೆಳ್ತಂಗಡಿ ತಾಲೂಕಿನ ಬ್ಲಾಕ್‌ ಸೊಸೈಟಿಯು ರಾಜ್ಯದಲ್ಲಿ 2ನೇ ಉತ್ತಮ ಸೊಸೈಟಿ ಎಂಬ ಗೌರವಕ್ಕೆ ಪಾತ್ರವಾಗಿದ್ದು, 70 ಸಾವಿರ ರೂ. ಮೊತ್ತವೂ ಲಭಿಸಿರುತ್ತದೆ. ಪ್ರಸ್ತುತ ಅದೇ ಹಣದಿಂದ ಸ್ತ್ರೀಶಕ್ತಿ ಭವನಕ್ಕೆ ಪೀಠೊಪಕರಣಗಳನ್ನು ಖರೀದಿಸಲಾಗುತ್ತದೆ ಎಂದು ಹಿರಿಯ ಮೇಲ್ವಿಚಾರಕಿ ಸುಧಾ ತಿಳಿಸಿದ್ದಾರೆ.

ತಿಂಗಳೊಳಗೆ ಉದ್ಘಾಟನೆ
ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಸ್ತ್ರೀಶಕ್ತಿ ಭವನ ನಿರ್ಮಾಣವಾಗಿದ್ದು, ಬೆಳ್ತಂಗಡಿಯಲ್ಲಿ ಕೊನೆಯದಾಗಿ ಭವನ ನಿರ್ಮಾಣವಾಗಿದೆ. ಪ್ರಸ್ತುತ ಅದರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೈಂಟಿಂಗ್‌ ಬಾಕಿ ಇದೆ. ಅದನ್ನು ಪೂರ್ತಿಗೊಳಿಸಿ ತಿಂಗಳೊಳಗೆ ಭವನವನ್ನು ಉದ್ಘಾಟಿಸುವ ಯೋಚನೆ ಇದೆ.
– ಸುಂದರ ಪೂಜಾರಿ
ಉಪನಿರ್ದೇಶಕರು, ಮಹಿಳಾ ಮತ್ತು
ಮಕ್ಕಳ ಕಲ್ಯಾಣ ಇಲಾಖೆ, ದ.ಕ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.