ಬೆಳ್ತಂಗಡಿ: ತಾಲೂಕಿನಲ್ಲಿ ಸದ್ಯಕ್ಕಿಲ್ಲ ನೀರಿನ ತೊಂದರೆ


Team Udayavani, Jan 25, 2019, 12:50 AM IST

beltangady.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲವಾದರೂ ಮುಂದಿನ ದಿನಗಳಲ್ಲೂ ಇದೇ ಪರಿಸ್ಥಿತಿ ಇರಬಹುದು ಎನ್ನುವಂತಿಲ್ಲ. ಅಂದರೆ ಬಹುತೇಕ ಕಡೆಗಳಲ್ಲಿ ಕೊಳವೆಬಾವಿಯನ್ನೇ ನಂಬಿರುವುದರಿಂದ ಮಾರ್ಚ್‌-ಎಪ್ರಿಲ್‌ನಲ್ಲಿ ಇದ್ದಕ್ಕಿದ್ದಂತೆ ಕೊಳವೆಬಾವಿಗಳು ಕೈಕೊಟ್ಟರೆ ನೀರಿಗೆ ಹಾಹಾಕಾರ ನಿರ್ಮಾಣವಾಗಬಹುದು.

ತಾಲೂಕಿನಲ್ಲಿ ಈ ವರ್ಷ ಕಳೆದ ಬಾರಿಗಿಂತ ಹೆಚ್ಚಿನ ಮಳೆಯಾದರೂ ಅದು ಅಂತರ್ಜಲದ ಮೇಲೆ ದೊಡ್ಡ ಪರಿಣಾಮ ಬೀರಿಲ್ಲ ಎನ್ನು ತ್ತಾರೆ ತಜ್ಞರು. ಕಳೆದ ವರ್ಷ ನೀರಿನ ಅಭಾವ ಗಂಭೀರ ಎನ್ನುವಷ್ಟರ ಮಟ್ಟಿಗೆ ತಲೆದೋರಿರ ಲಿಲ್ಲ. ಆದರೆ ಪಂಪ್‌, ವಿದ್ಯುತ್‌ ಕೈಕೊಟ್ಟು, ಕೊಳವೆಬಾವಿ ನಿಷ್ಕ್ರಿಯ ವಾಗಿ ತೊಂದರೆಯಾಗಿತ್ತು ಎನ್ನುತ್ತದೆ ತಾಲೂಕು ಆಡಳಿತ.

75 ಕೊಳವೆಬಾವಿ ಬೇಡಿಕೆ
ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ 75 ಕೊಳವೆಬಾವಿ ಗಳ ಬೇಡಿಕೆ ಇದೆ. ಸಾಮಾನ್ಯವಾಗಿ ಒಂದು ಕೊಳವೆಬಾವಿಗೆ ಒಂದು ಲಕ್ಷ ರೂ. ಅನುದಾನವಾಗಿದ್ದರೆ, 1.25 ಲಕ್ಷ ರೂ. ವರೆಗೆ ಉಪಯೋಗಿಸಬಹುದಾಗಿದೆ. ಆದರೆ 700 ಅಡಿ ಕೊರೆದರೆ 1.50 ಲಕ್ಷ ರೂ. ಬೇಕಾಗುತ್ತದೆ. ಅಷ್ಟು ಖರ್ಚು ಮಾಡಿ ಕೊರೆಸಿದರೂ ನೀರು ಸಿಗುತ್ತದೆ ಎಂಬ ದೃಢ ವಿಶ್ವಾಸ ಇಲ್ಲ  ಎನ್ನುತ್ತಾರೆ ಅಧಿಕಾರಿಗಳು.

ಶಾಶ್ವತ ಯೋಜನೆ: ಪ್ರಸ್ತಾವನೆ
ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕೊಳವೆಬಾವಿಗಳನ್ನೇ ನಂಬಿ ಕೂತರೆ ಆಗದು ಎಂದು ಈಗಾಗಲೇ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ಕುಡಿಯುವ ನೀರಿನ ಶಾಶ್ವತ ಯೋಜನೆಗಾಗಿ ಮೂರು ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಆದರೆ ಡಿಪಿಆರ್‌ ಸಿದ್ಧಪಡಿಸುವಂತೆ ಸರಕಾರದಿಂದ ನಿರ್ದೇಶನ ಬಂದಿಲ್ಲ.

ನಗರಕ್ಕೆ ನೀರು ಲಭ್ಯ
ಬೆಳ್ತಂಗಡಿ ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ಈಗಾ ಗಲೇ ಸೋಮಾವತಿ ನದಿಗೆ ತಾತ್ಕಾಲಿಕ ಕಟ್ಟ ನಿರ್ಮಿಸ ಲಾಗಿದೆ. ಜತೆಗೆ 9 ಕೊಳವೆಬಾವಿಯಿಂದ ನೀರು ಉಪಯೋಗಿಸ ಲಾಗುತ್ತದೆ. ಒಂದು ವೇಳೆ ಕೊಳವೆಬಾವಿಯಲ್ಲಿ ನೀರಿನ ಕೊರತೆ ಕಂಡುಬಂದರೂ ನದಿಯ ನೀರನ್ನೇ ಪೂರೈಸಲು ಟ್ಯಾಂಕ್‌ಗಳ ವ್ಯವಸ್ಥೆ ಇದೆ. ಪ್ರತಿನಿತ್ಯ 1.05 ಎಂಎಲ್‌ಡಿ ನೀರಿನ ಬೇಡಿಕೆ ಇದ್ದು, 0.6 ಎಂಎಲ್‌ಡಿಯಷ್ಟು ನದಿ ನೀರನ್ನೇ ಬಳಸಲಾಗುತ್ತಿದೆ.

ಸಾಧ್ಯತೆಗಳು
ಬಂಟ್ವಾಳ ತಾಲೂಕಿನ ಎಎಂಆರ್‌ ಡ್ಯಾಮ್‌ನ ಹಿನ್ನೀರನ್ನು ಉಪಯೋಗಿಸಿಕೊಂಡು ತೆಕ್ಕಾರು ಗ್ರಾ.ಪಂ.ನ ವ್ಯಾಪ್ತಿಗೆ ಕುಡಿಯುವ ನೀರಿನ ಯೋಜನೆ ರೂಪಿಸುವುದಕ್ಕೆ 40 ಕೋ.ರೂ. ಪ್ರಸ್ತಾವನೆ ಹೋಗಿದೆ. ಇದು ಕಾರ್ಯಗತವಾದರೆ ಪರಿಸರದ 11 ಗ್ರಾಮಗಳಿಗೆ ಅನುಕೂಲವಾಗುತ್ತದೆ. ಬೆಳಾಲಿನಲ್ಲಿ ನೇತ್ರಾವತಿಗೆ ಸಣ್ಣ ಅಣೆಕಟ್ಟು ನಿರ್ಮಿಸಿದರೆ 6 ಗ್ರಾ.ಪಂ.ಗಳಿಗೆ ನೀರುಣಿಸಬಹುದು. ಇದಕ್ಕಾಗಿ 17 ಕೋ.ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಮೇಲಂತಬೆಟ್ಟು ಗ್ರಾ.ಪಂ.ನ್ನು ದೃಷ್ಟಿಯಲ್ಲಿರಿಸಿ ಅಳದಂಗಡಿಯಲ್ಲಿ ಶಾಶ್ವತ ಯೋಜನೆ ರೂಪಿಸಲು 16 ಕೋ.ರೂ. ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ಅಲ್ಲಿ ಅಗತ್ಯಕ್ಕೆ ತಕ್ಕಷ್ಟು ನೀರು ಸಿಗದಿರುವ ಆತಂಕವೂ ಇದೆ.

– ಚೆನ್ನಪ್ಪ ಮೊಲಿ, ಎಇಇ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ

ಸದ್ಯ ತೊಂದರೆಯಿಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಗ್ರಾ.ಪಂ.ನಿಂದ ನೀರಿನ ಕೊರತೆಯ ಕುರಿತು ಗಂಭೀರ ದೂರುಗಳು ಬಂದಿಲ್ಲ. ಮೇಲಂತಬೆಟ್ಟಿನ ಹಿರಿಯಾಜೆಯಲ್ಲಿದ್ದ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ. ನೀರಿನ ಕೊರತೆ ನಿವಾರಣೆಗೆ 14ನೇ ಹಣಕಾಸಿನ ಯೋಜನೆಯ ಅನುದಾನ ಉಪಯೋಗಿಸುವಂತೆ ಸರಕಾರ ನಿರ್ದೇಶನ ನೀಡಿದೆ. ಮುಂದಿನ 2 ತಿಂಗಳಲ್ಲಿ  ಮಳೆಯಾಗದಿದ್ದರೆ ಸಮಸ್ಯೆ ಎದುರಾಗಬಹುದು.
– ಕುಸುಮಾಧರ ಬಿ., ಇಒ, ಬೆಳ್ತಂಗಡಿ ತಾ.ಪಂ.

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.