ತಾತ್ಕಾಲಿಕ ಕಟ್ಟ ನಿರ್ಮಿಸಿದರೂ ಮಳೆಗೆ ಕೊಚ್ಚಿ ಹೋಗುವ ಭೀತಿ


Team Udayavani, Sep 21, 2018, 10:00 AM IST

21-sepctember-1.jpg

ಬೆಳ್ತಂಗಡಿ: ಬೆಳ್ತಂಗಡಿಯ ಜನತೆ ಕುಡಿಯುವುದಕ್ಕಾಗಿ ನಗರದ ಹತ್ತಿರದಲ್ಲಿ ಹರಿಯುತ್ತಿರುವ ಸೋಮಾವತಿ ನದಿಯ ನೀರನ್ನೇ ಆಶ್ರಯಿಸಿದ್ದು, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾದಾಗ ಇಲ್ಲಿನ ಪ.ಪಂ. ತಾತ್ಕಾಲಿಕ ಕಟ್ಟ ನಿರ್ಮಿಸಿ ನಗರಕ್ಕೆ ನೀರು ನೀಡುತ್ತದೆ.

ಆದರೆ ಪ್ರಸ್ತುತ ಏಕಾಏಕಿ ನದಿ ನೀರು ಕಡಿಮೆಯಾಗಿದ್ದು, ಕಟ್ಟ ನಿರ್ಮಿಸಲೂ ಆತಂಕದ ಸ್ಥಿತಿ ಇದೆ. ಮತ್ತೆ ಮಳೆ ಬಂದು ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಕಟ್ಟ ನೀರು ಪಾಲಾಗುತ್ತದೆ. ಹೀಗಾಗಿ ನೀರು ಕಡಿಮೆಯಾದರೂ ಮಳೆಗಾಲ ಮುಗಿಯದೆ ಕಟ್ಟ ಹಾಕುವಂತಿಲ್ಲ.!

ನದಿಯಲ್ಲಿ ಜಾಕ್‌ವೆಲ್‌ ನಿರ್ಮಿಸಿ ಪಂ. ಕುಡಿಯುವ ನೀರನ್ನು ಪೂರೈಕೆ ಮಾಡುತ್ತದೆ. ನೀರು ಕಡಿಮೆಯಾಗುತ್ತಾ ಬಂದಂತೆ ಸುಮಾರು 1.05 ಲಕ್ಷ ರೂ. ಖರ್ಚು ಮಾಡಿ ತಾತ್ಕಾಲಿಕ ಕಟ್ಟ ನಿರ್ಮಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕಟ್ಟ ನಿರ್ಮಿಸುವ ಸ್ಥಿತಿ ಬರುತ್ತದೆ. ಆದರೆ ಕಳೆದ ವರ್ಷ ಕೊನೆಯ ಅವಧಿಯಲ್ಲಿ ಹೆಚ್ಚು ಮಳೆಯಾದ ಪರಿಣಾಮ ಫೆಬ್ರವರಿಯಲ್ಲಿ ಕಟ್ಟ ಹಾಕಲಾಗಿತ್ತು.

ಆದರೆ ಸದ್ಯ ನದಿಯಲ್ಲಿ ನೀರಿನ ಮಟ್ಟದಲ್ಲಿ ಇಳಿಕೆಯಾಗಿದ್ದು, ಅವಧಿಗಿಂತ ಮೊದಲೇ ಕಟ್ಟ ಹಾಕಬೇಕಾದ ಸ್ಥಿತಿ ಇದೆ. ಆದರೆ ನೀರು ಕಡಿಮೆಯಾಯಿತೆಂದು ಕಟ್ಟ ಹಾಕಿದರೆ ಮಳೆಗೆ ಅದು ನಾಶವಾಗುವ ಭೀತಿ ಇದೆ. ಮಳೆ ಆರಂಭಗೊಂಡರೆ ಕಳೆದ ವರ್ಷ ದಂತೆ ಕಟ್ಟ ವಿಳಂಬವಾಗಿ ಹಾಕಿದರೂ ತೊಂದರೆಯಾಗದು.

1.05 ಎಂಎಲ್‌ಡಿ ಬೇಡಿಕೆ
ಬೆಳ್ತಂಗಡಿ ನಗರಕ್ಕೆ ಪ್ರತಿನಿತ್ಯ ಸುಮಾರು 1.05 ಎಂಎಲ್‌ಡಿ ನೀರಿನ ಬೇಡಿಕೆ ಇದೆ. 0.6 ಎಂಎಲ್‌ಡಿ ನೀರನ್ನು ನದಿಯಿಂದ ಪಡೆಯಲಾಗುತ್ತಿದ್ದು, 0.45 ಎಂಎಲ್‌ಡಿ ನೀರನ್ನು 9 ಕೊಳವೆಬಾವಿಗಳಿಂದ ಪಡೆಯಲಾಗುತ್ತದೆ. ಪ.ಪಂ. ವ್ಯಾಪ್ತಿ ಯಲ್ಲಿ ಒಟ್ಟು 1,415 ನೀರಿನ ಕನೆಕ್ಷನ್‌ಗಳಿವೆ. ನದಿಯಲ್ಲಿ ನೀರಿದ್ದರೆ ನಗರಕ್ಕೆ ನೀರಿನ ತೊಂದರೆಯಾಗದು. ಅಂದರೆ ಬೆಳ್ತಂಗಡಿಯಲ್ಲಿ ಈವರೆಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ ಎಂದು ಅಧಿಕಾರಿ ಹೇಳುತ್ತಾರೆ. ಒಂದು ವೇಳೆ ಕೊಳವೆಬಾವಿಗಳಲ್ಲಿ ನೀರಿ ಬತ್ತಿದರೂ ಅಲ್ಲಲ್ಲಿ ನಿರ್ಮಿಸಲಾಗಿರುವ ಓವರ್‌ ಹೆಡ್‌ ಟ್ಯಾಂಕ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಕಳೆದ ವರ್ಷ ಸುಮಾರು 13 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆಯನ್ನು ಅಂದಿನ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಅದರಲ್ಲಿ ಕಲ್ಲಗುಡ್ಡೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯದ ಮಾಸ್ಟರ್‌ಟ್ಯಾಂಕ್‌, ಟ್ರೀಟ್‌ ಮೆಂಟ್‌ ಪ್ಲ್ರಾಂಟ್‌, ಜ್ಯಾಕ್‌ವೆಲ್‌ ಹಾಗೂ 2 ಓವರ್‌ಹೆಡ್‌ ಟ್ಯಾಂಕ್‌ಗಳು ನಿರ್ಮಾಣಗೊಂಡಿದ್ದವು.

ಚೆಕ್‌ಡ್ಯಾಮ್‌ ನಿರ್ಮಾಣ
ಪ.ಪಂ. ಪ್ರತಿವರ್ಷ ತಾತ್ಕಾಲಿಕ ಕಟ್ಟ ನಿರ್ಮಿಸುವುದಕ್ಕೆ 1.05 ಲಕ್ಷ ರೂ. ಖರ್ಚು ಮಾಡುತ್ತದೆ. ಹೀಗಾಗಿ ಅದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವುದು ಅನಿವಾರ್ಯವಾಗಿದೆ. ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡುವುದಕ್ಕೆ ಚೆಕ್‌ಡ್ಯಾಮ್‌ ನಿರ್ಮಿಸುವುದಕ್ಕಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ 80 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಅದನ್ನು ಸಣ್ಣ ನೀರಾವರಿ ಇಲಾಖೆಯವರೇ ನಿರ್ಮಿಸಲಿದ್ದಾರೆ.

ಆತಂಕ ಸೃಷ್ಟಿ
ಸದ್ಯಕ್ಕೆ ನೀರು ಕಡಿಮೆಯಾದರೂ ಕಟ್ಟ ನಿರ್ಮಿಸುವಂತಿಲ್ಲ. ಮತ್ತೆ ನದಿಯಲ್ಲಿ ನೀರು ಹೆಚ್ಚಾದರೆ ಅದು ಕೊಚ್ಚಿಕೊಂಡು ಹೋಗುತ್ತದೆ. ನಗರಕ್ಕೆ ಈ ತನಕ ನೀರಿನ ಸಮಸ್ಯೆಯಾಗಿಲ್ಲ. ಆದರೆ ಈ ಬಾರಿ ನದಿಯಲ್ಲಿ ನೀರು ಕಡಿಮೆಯಿದ್ದು, ಆತಂಕ ಸೃಷ್ಟಿಸಿದೆ. ನದಿಯಲ್ಲಿ ನೀರಿದ್ದರೆ ಕೊಳವೆಬಾವಿಗಳು ಬತ್ತಿದರೂ ಯಾವುದೇ ಸಮಸ್ಯೆಯಾಗದ ವ್ಯವಸ್ಥೆ ಇದೆ. ಹೀಗಾಗಿ ಜನತೆ ನೀರಿನ ಮಿತ ಬಳಕೆಗೆ ಒತ್ತು ನೀಡಬೇಕು.
ಮಹಾವೀರ ಆರಿಗ
  ಕಿರಿಯ ಎಂಜಿನಿಯರ್‌, ಪ.ಪಂ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.