ನಿರಂತರ ತರಬೇತಿಯಿಂದ ಉತ್ತಮ ಕ್ರೀಡಾಪಟುವಾಗಲು ಸಾಧ್ಯ: ತ್ಯಾಗಮ್ ಹರೇಕಳ
Team Udayavani, Apr 28, 2023, 7:01 PM IST
ಉಳ್ಳಾಲ: ಕ್ರೀಡೆಯಲ್ಲಿ ಎಲ್ಲರೂ ಸಾಧಕರಾಗಲು ಸಾಧ್ಯವಿಲ್ಲ ಆದರೆ ಉತ್ತಮ, ನಿರಂತರ ತರಬೇತಿಯಿಂದ ಖಂಡಿತವಾಗಿಯೂ
ಅತ್ಯುತ್ತಮ ಕ್ರೀಡಾಪಟುವಾಗುವುದರಲ್ಲಿ ಸಂಶಯವಿಲ್ಲ. ವಿದ್ಯಾರ್ಥಿಗಳು ಮೊದಲು ಯಾವುದೇ ಒಂದು ಕ್ರೀಡೆಯನ್ನು ಆಯ್ಕೆ
ಮಾಡಿ ಕ್ರೀಡೆಯ ಎಲ್ಲ ಕೌಶಲಗಳನ್ನು ತರಬೇತುದಾರರಿಂದ ಕಲಿತುಕೊಂಡು ಪ್ರತಿನಿತ್ಯ ಅಭ್ಯಾಸ ಮಾಡುವುದರಿಂದ
ಮುಂದೊಂದು ದಿನ ಕ್ರೀಡಾ ಸಾಧಕರಾಗಿ ಮೂಡಿಬರಲು ಸಾಧ್ಯ ಎಂದು ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ತ್ಯಾಗಂ ಹರೇಕಳ ಅಭಿಪ್ರಾಯಪಟ್ಟರು.
ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಶಾರೀರಿಕ ಶಿಕ್ಷಣ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಮತ್ತು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಇವುಗಳ ಸಂಯುಕ್ತ ಆಶಯದಲ್ಲಿ ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲಾ ಮೈದಾನದಲ್ಲಿ 15 ದಿನಗಳ ಕಾಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ಉಚಿತ ವಾಲಿಬಾಲ್ ತರಬೇತಿ ಶಿಬಿರದ ಅಧ್ಯಕ್ಷತೆ
ವಹಿಸಿ ಮಾತನಾಡಿದರು.
ಶಿಬಿರವನ್ನು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಕಡೆಂಜ ಸೋಮಶೇಖರ್ ಚೌಟ ಉದ್ಘಾಟಿಸಿದರು ಅತಿಥಿಗಳಾಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾವೂರು ಮುಖ್ಯೋಪಾಧ್ಯಾಯ ರಾಧಾಕೃಷ್ಣ ರೈ
ಹರೇಕಳ, ಹಿರಿಯ ಶಿಕ್ಷಕಿ ಮೋಹಿನಿ, ಕೈರಂಗಳ ಶಾರದಾ ವಿದ್ಯಾ ಗಣಪತಿ ಕೇಂದ್ರದ ಶಿಕ್ಷಕ ಗಣೇಶ್ ಉಪಸ್ಥಿತರಿದ್ದರು.
ಉಳ್ಳಾಲ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಕಾರ್ಯದರ್ಶಿ ಸುರೇಖಾ ಎಚ್. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಪದಾಧಿಕಾರಿ ಅರುಣಾ ಪಿಂಟೊ ಸ್ವಾಗತಿಸಿದರು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಕೋಟೆಕಾರ್ ವಂದಿಸಿದರು. ಶಿಬಿರದಲ್ಲಿ ಅಸೋಸಿಯೇಶನ್ ಪದಾಧಿಕಾರಿಗಳು, ಸ್ಥಳೀಯ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿದ್ದರು.
ಸರ್ವತೋಮುಖ ಅಭಿವೃದ್ಧಿ ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ಅಧ್ಯಕ್ಷ ಡಾ| ನರಸಿಂಹಯ್ಯ ಮಾತನಾಡಿ, ಪ್ರತಿದಿನ ಕೀಡಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವುದರಿಂದ ಕ್ರಿಯಾಶೀಲರಾಗಿರಲು ಸಾಧ್ಯ. ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿಯಾಗುತ್ತದೆ ಸದೃಢ ದೇಹದಿಂದ ಸದೃಢ ಆರೋಗ್ಯ ಎಂಬಂತೆ, ಉತ್ತಮ ಆರೋಗ್ಯ ವಂತರಾಗಬೇಕಾದರೆ ಕ್ರೀಡೆ ಪ್ರಮುಖ ಪಾತ್ರವನ್ನು ವಹಿಸುತ್ತದೆ ಹಾಗಾಗಿ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಬಹಳ ಸಹಕಾರಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ