ಭಜನೆ, ಯಕ್ಷಗಾನಕ್ಕೆ ಪೊಲೀಸರಿಂದ ಅಡ್ಡಿಯಾಗದು: ಆಯುಕ್ತರ ಭರವಸೆ
Team Udayavani, Mar 7, 2019, 12:30 AM IST
ಕಾವೂರು: ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಭಜನೆ, ಯಕ್ಷಗಾನ ಆಗುತ್ತಿದ್ದ ಸಂದರ್ಭ ಕಾವೂರು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಆರ್. ನಾಯಕ್ ಅವರು ಏಕಾಏಕಿ ಆಗಮಿಸಿ ಭಜನೆ ನಿಲ್ಲಿಸಿದ, ಯಕ್ಷಗಾ ನದ ಸೌಂಡ್ ಸಿಸ್ಟಮ್ ಶಬ್ದ ತಗ್ಗಿಸಲು ತಾಕೀತು ಮಾಡಿದ ಘಟನೆ ಕುರಿತಂತೆ ಶಾಸಕ ಡಾ| ಭರತ್ ಶೆಟ್ಟಿ ನೇತೃತ್ವದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜತೆ ಚರ್ಚಿಸಿತು.
ಘಟನೆ ಕುರಿತಂತೆ ಶಾಸಕರು ಮಾಹಿತಿ ನೀಡಿ ಶ್ರದ್ಧಾ ಕೇಂದ್ರದ ಭಕ್ತರಿಗೆ ಘಟನೆಯಿಂದ ನೋವಾಗಿದೆ. ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ ಸ್ಥಳೀಯರಿಗೆ ಗ್ರಾಮದ ದೇವಾಲಯ. ಹೀಗಾಗಿ ಇದು ಧಾರ್ಮಿಕ, ಸಾಂಸ್ಕೃತಿಕ ಕೇಂದ್ರ ವಾಗಿದ್ದು, ವಿವಿಧ ಕಾರ್ಯಕ್ರಮ ನಡೆಯುತ್ತದೆ. ಸೋಮವಾರ ನಡೆದ ಘಟನೆ ಮರುಕಳಿಸದಂತೆ ನೋಡಿ ಕೊಳ್ಳಬೇಕು. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರಗಿಸಬೇಕು ಎಂದು ಮನವಿ ಮಾಡಿದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಇಂತಹ ಸಮಸ್ಯೆ ಭವಿಷ್ಯದಲ್ಲಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಕಾವೂರು ಘಟನೆ ನನ್ನ ಗಮನಕ್ಕೆ ಬಂದಿರಲಿಲ್ಲ. ಇತರೆಡೆ ಧಾರ್ಮಿಕ ಕಾರ್ಯಕ್ರಮ, ಯಕ್ಷಗಾನ, ನೇಮ ನಿರಾತಂಕವಾಗಿ ನಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯು ಕ್ತರು ಭರವಸೆ ನೀಡಿದರು.
ವ್ಯವಸ್ಥಾಪನ ಸಮಿತಿ ರಾಮಣ್ಣ ಶೆಟ್ಟಿ ಮುಗಿಪು, ಪ್ರಧಾನ ಅರ್ಚಕ ಶ್ರೀನಿವಾಸ ಭಟ್, ಕಾರ್ಪೊರೇಟರ್ ದೀಪಕ್ ಪೂಜಾರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಸದಾಶಿವ ಶೆಟ್ಟಿ, ಮೋಹನ್ ಪ್ರಭು, ತುಕಾರಾಂ ಸನಿಲ್, ಸುಧಾಕರ್, ಹರಿಶ್ಚಂದ್ರ, ಭರತ್ ಕಾವೂರು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?