ಅಕ್ರಮ ಗೋ ಹತ್ಯೆ ಮಾಡಿದವನನ್ನು ಜೈಲಿಗೆ ತಳ್ಳಿ: ಪೊಲೀಸರಿಗೆ ಡಾ.ಭರತ್ ಶೆಟ್ಟಿ ವೈ ತಾಕೀತು
Team Udayavani, Jul 3, 2022, 4:35 PM IST
ಅಡ್ಯಾರ್: ರಾಷ್ಟ್ರೀಯ ಪಕ್ಷ ಎಂದು ಬಿಂಬಿಸಿಕೊಳ್ಳುತ್ತಿರುವ ಪಕ್ಷದ ಕಾರ್ಯಕರ್ತನ ಸಾಚಾತನ ಬಯಲಾಗಿದ್ದು,ಅಡ್ಯಾರ್ ನ ತನ್ಮದೇ ಮನೆಯಲ್ಲಿ ಗೋ ಹತ್ಯೆ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನೂತನ ಗೋ ಹತ್ಯಾ ನಿಷೇಧ ಕಾನೂನಿನ ಪ್ರಕಾರ ಕ್ರಮ ಕೈಗೊಂಡು ಬಂಧಿಸಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸರಿಗೆ ತಾಕೀತು ಮಾಡಿದ್ದಾರೆ.
ಅಡ್ಯಾರ್ ನ ಮನೆಯೊಂದರಲ್ಲಿ ಗೋವನ್ನು ಕಡಿದು ಮಾಂಸ ಮಾರಾಟ ಮಾಡುವ ದಂಧೆಯನ್ನು ಪೊಲೀಸರು ಬಯಲು ಮಾಡಿದ್ದಾರೆ.
ಹಟ್ಟಿಯಿಂದ ಕದ್ದ ಗೋವುಗಳು, ಬೀಡಾಡಿ ಗೋವುಗಳನ್ನು ಕಳ್ಳತನ ಮಾಡಿ ಮನೆಯಲ್ಲಿಯೇ ವಧಿಸುವ ಜಾಲ ಸಕ್ರಿಯವಾಗಿರುವ ಸಂಶಯವಿದೆ. ಇಂತಹ ಕೃತ್ಯಗಳಿಂದ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಯಿದ್ದು, ಸರಕಾರ ಜಾರಿ ಮಾಡಿರುವ ಗೋ ಹತ್ಯೆ ಕಾಯಿದೆಯನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು.ಕ್ಷೇತ್ರದ ವಿವಿಧೆಡೆ ಮಾಹಿತಿ ಲಭ್ಯವಿರುವ ಅಕ್ರಮ ಗೋ ವಧಾ ಕೇಂದ್ರದ ಮೇಲೆ ನಿಗಾ ಇರಿಸಿ ಪೊಲೀಸ್ ಇಲಾಖೆ ಕ್ರಮ ಜರುಗಿಸಬೇಕೆಂದು ಈಗಾಗಲೇ ಗೃಹ ಸಚಿವರು ಆದೇಶ ನೀಡಿದ್ದು ಪಾಲನೆಯಾಗಬೇಕಿದೆ ಎಂದು ಶಾಸಕರು ತಿಳಿಸಿದ್ದಾರೆ.
ಇದನ್ನೂ ಓದಿ :ಯುಪಿ: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ಗ್ಯಾಂಗ್ ರೇಪ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ