ಹೂಳು ತುಂಬಿದ ಪುತ್ತೂರಿನ ಬಿದಿರಹಳ್ಳ ಕಾಲುವೆ

ಸೊಳ್ಳೆ ಉತ್ಪತ್ತಿ ಕೇಂದ್ರವಾಗಿದೆ; ಮಳೆಗಾಲಕ್ಕೆ ತೊಂದರೆ

Team Udayavani, May 13, 2019, 6:00 AM IST

1205RJH6

ನಗರ : ಇನ್ನೇನು ಮಳೆಗಾಲ ಆರಂಭಗೊಳ್ಳುತ್ತದೆ. ಆದರೆ ಪುತ್ತೂರು ನಗರದ ಪಾಲಿಗೆ ರಾಜಕಾಲುವೆ ಎನಿಸಿರುವ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸುತ್ತ ಹರಿಯುವ ಕಾಲುವೆಯ ಕಳೆಯನ್ನು ತೆಗೆದಿದ್ದಾರೆಯೇ ವಿನಾ ಸಮರ್ಪಕವಾಗಿ ಹೂಳೆತ್ತಿಲ್ಲ. ಇದರ ಪರಿಣಾಮ ಸೊಳ್ಳೆ ಉತ್ಪತ್ತಿಯ ಕೇಂದ್ರವಾಗಿ ಈ ಕಾಲುವೆ ಕಾಣಿಸುತ್ತಿದೆ.

ಮಳೆಗಾಲ ಬಂತೆಂದರೆ ಸಾಕು ಸೊಳ್ಳೆಗಳ ಸಾಮ್ರಾಜ್ಯ ನಿರ್ಮಾಣವಾಗುತ್ತದೆ. ಇದಕ್ಕೆ ಪ್ರಮುಖ ಕಾರಣವೆನಿಸುವುದು ನಗರವನ್ನು ಸುತ್ತುವರಿದು ಹರಿಯುವ ಬಿದಿರಹಳ್ಳ ಎನ್ನುವ ರಾಜಕಾಲುವೆ. ಈ ಕಾಲುವೆ ನಗರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಿಂದ ಹಾದು ಹೋಗಿ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ತನಕ ಗಮನಿಸಿದರೆ ಇದರಲ್ಲಿ ಉತ್ಪಾದಿತವಾಗುವ ಸೊಳ್ಳೆಗಳು ಸಾಂಕ್ರಾಮಿಕ ರೋಗ ಹರಡುವಷ್ಟು ಮಟ್ಟಿಗೆ ಕೊಳಚೆ ತುಂಬಿ ಹರಿಯುತ್ತಿದೆ. ನಗರದ ಹೊಟೇಲ್ಗಳ ತ್ಯಾಜ್ಯವೇ ಹೂಳು ತುಂಬಿರುವುದಕ್ಕೆ ಪ್ರಮುಖ ಕಾರಣವಾಗಿದೆ. ಉಳಿದಂತೆ ಸ್ಥಳೀಯ ಮನೆ, ಅಂಗಡಿಗಳ ತ್ಯಾಜ್ಯ ಈ ಕಾಲುವೆಯನ್ನು ಪ್ರತಿನಿತ್ಯ ಸೇರುತ್ತದೆ.

ಈ ರಾಜಕಾಲುವೆ ಹರಿಯುವ ಭಾಗದಲ್ಲಿ ನೂರಾರು ಅಂಗಡಿಗಳು ಮತ್ತು ಮನೆಗಳು ಇದ್ದು, ದಿನವೂ ಮೂಗು ಮುಚ್ಚಿಕೊಂಡು ಬದುಕು ಸಾಗಿಸುವ ಸ್ಥಿತಿ ನಿರ್ಮಾಣವಾಗಿದೆ. ಬೊಳುವಾರು ಬಳಿಯಲ್ಲಿ ಕೊಳಚೆ ವಾಸನೆ ರಸ್ತೆಯಲ್ಲಿ ಹೋಗುವವರಿಗೂ ರಾಚುತ್ತಿದೆ. ಹಾಗಿದ್ದರೂ ಅಧಿಕಾರಿಗಳಿಗೆ ಮಾತ್ರ ಇನ್ನೂ ಕೊಳಚೆ ವಾಸನೆ ಮುಟ್ಟಿಲ್ಲ. ಹಾಗಾಗಿ ಸ್ವಚ್ಛತೆ ನಡೆಸುವ ಗುತ್ತಿಗೆದಾರರಿಗೂ ಸಮಸ್ಯೆ ಮುಟ್ಟಿಲ್ಲ.

ಕೃತಕ ನೆರೆಯಾದರೆ?
ಈ ಬಿದಿರಹಳ್ಳ ರಾಜ ಕಾಲುವೆಯ ಹೂಳೆತ್ತದೆ ಇದ್ದರೆ ಈ ಬಾರಿ ಮಳೆಗಾಲ ದಲ್ಲಿ ನಗರದಲ್ಲಿ ಕೃತಕ ನೆರೆ ಉಂಟು ಮಾಡುವುದರಲ್ಲಿ ಯಾವುದೇ ಸಂದೇಹ ಇಲ್ಲ. ಅಷ್ಟೊಂದು ಹೂಳು ತುಂಬಿಕೊಂಡಿದೆ. ಜತೆಗೆ ಈ ರಾಜಕಾಲುವೆ ಯಲ್ಲಿ ಅಂಗಡಿ ಮತ್ತು ಮನೆಗಳ ಕಸ, ಪುತ್ತೂರಿನ ವಿವಿಧ ಹೊಟೇಲ್ಗಳ ತ್ಯಾಜ್ಯ ತುಂಬಿಕೊಂಡಿದೆ. ಸಾಂಕ್ರಾಮಿಕ ರೋಗಗಳ ಕೊಡುಗೆ ನೀಡಲು ಈ ರಾಜಕಾಲುವೆ ಸಾಕು ಎನ್ನುವುದು ಈ ರಾಜಕಾಲುವೆಯ ಪಕ್ಕದಲ್ಲಿ ವಾಸ ಮಾಡುವ ಸ್ಥಳೀಯರ ಅಭಿಪ್ರಾಯ.

ನಗರಸಭೆ 30 ಲಕ್ಷ ರೂ. ಅನುದಾನದಲ್ಲಿ ತೋಡುಗಳ ಹಾಗೂ ಚರಂಡಿಗಳ ಹೂಳೆತ್ತಲು ಯೋಜನೆ ಹಮ್ಮಿಕೊಂಡು ಕಾಮಗಾರಿ ಆರಂಭಿಸಿತ್ತು. ಆದರೆ ಈ ರಾಜ ಕಾಲುವೆಯ ಸಂಪೂರ್ಣ ಸ್ವಚ್ಛತೆಯ ಕುರಿತು ಗಂಭೀರ ಯೋಚನೆಯೇ ಮಾಡಿಲ್ಲ. ಬಿದಿರ ಹಳ್ಳ ರಾಜಕಾಲುವೆಯಲ್ಲಿ ತುಂಬಿರುವ ಹೂಳು ಮತ್ತು ಕೊಳಚೆ ಸ್ವಚ್ಛ ಮಾಡುವುದು ನಗರಸಭೆಯ ಪ್ರಮುಖ ಆದ್ಯತೆ ಆಗಬೇಕಾಗಿದೆ.

ಆದ್ಯತೆಯಾಗಲಿ

ನಗರಸಭೆ 30 ಲಕ್ಷ ರೂ. ಅನುದಾನದಲ್ಲಿ ತೋಡುಗಳ ಹಾಗೂ ಚರಂಡಿಗಳ ಹೂಳೆತ್ತಲು ಯೋಜನೆ ಹಮ್ಮಿಕೊಂಡು ಕಾಮಗಾರಿ ಆರಂಭಿಸಿತ್ತು. ಆದರೆ ಈ ರಾಜ ಕಾಲುವೆಯ ಸಂಪೂರ್ಣ ಸ್ವಚ್ಛತೆಯ ಕುರಿತು ಗಂಭೀರ ಯೋಚನೆಯೇ ಮಾಡಿಲ್ಲ. ಬಿದಿರ ಹಳ್ಳ ರಾಜಕಾಲುವೆಯಲ್ಲಿ ತುಂಬಿರುವ ಹೂಳು ಮತ್ತು ಕೊಳಚೆ ಸ್ವಚ್ಛ ಮಾಡುವುದು ನಗರಸಭೆಯ ಪ್ರಮುಖ ಆದ್ಯತೆ ಆಗಬೇಕಾಗಿದೆ.

ಕೃತಕ ನೆರೆಯ ಭೀತಿ

ಬಿದಿರಹಳ್ಳ ಕಾಲುವೆಯ ಹೂಳೆತ್ತುವ ಕೆಲಸಕ್ಕೆ ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಈಗಾಗಲೇ ತುಂಬಿರುವ ತ್ಯಾಜ್ಯದಿಂದಾಗಿ ಕಾಲುವೆ ಬ್ಲಾಕ್‌ ಆಗಿ ಸ್ಥಳೀಯ ಮನೆ, ರಸ್ತೆಗಳಿಗೆ ಕೃತಕ ನೆರೆ ಬರುವ ಸಂಭವವಿದೆ.
-ಲೋಕೇಶ್‌ ಅಲುಂಬುಡ ಸಾಮಾಜಿಕ ಕಾರ್ಯಕರ್ತ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.