ಭಾರತದ ಸಮುದ್ರದ ತಾಕತ್ತಿನ ವಿಚಾರದಲ್ಲಿ ಇಂದು ದೊಡ್ಡ ದಿನ : ಪ್ರಧಾನಿ ನರೇಂದ್ರ ಮೋದಿ


Team Udayavani, Sep 2, 2022, 3:27 PM IST

1-asdada

ಮಂಗಳೂರು : ಭಾರತದ ಸಮುದ್ರದ ತಾಕತ್ತಿನ ವಿಚಾರದಲ್ಲಿ ದೊಡ್ಡ ದಿನವಾಗಿದೆ. ಸೈನ್ಯ ಮತ್ತು ಆರ್ಥಿಕ ವಿಚಾರದಲ್ಲಿ ದೇಶ ಇಂದು ದೊಡ್ಡ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೊಚ್ಚಿಯಲ್ಲಿ ಇಂದು ದೇಶದ ಮೊದಲ ವಿಮಾನ ವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿರುವುದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯಾಗಿದೆ ಎಂದರು.

ಮೀನುಗಾರರ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವುದು ಇನ್ನಷ್ಟು ಸುಲಭವಾಗಿದೆ. ವಿಕಸಿತ ಭಾರತ ನಿರ್ಮಾಣಕ್ಕೆ ಮೇಕ್ ಇನ್ ಇಂಡಿಯಾ ಅತ್ಯಂತ ಅಗತ್ಯ ಎಂದರು.

ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, ಉತ್ಪಾದನಾ ವಲಯವನ್ನು ವಿಸ್ತರಿಸುವುದು ಮತ್ತು ಮೇಕ್ ಇನ್ ಇಂಡಿಯಾವನ್ನು ವಿಸ್ತರಿಸುವುದು ಬಹಳ ಮುಖ್ಯ.ಇದಲ್ಲದೆ, ನಾವು ರಫ್ತು ಹೆಚ್ಚಿಸಬೇಕು ಮತ್ತು ಉತ್ಪನ್ನಗಳ ವೆಚ್ಚವನ್ನು ಸ್ಪರ್ಧಾತ್ಮಕವಾಗಿಸಬೇಕು ಎಂದರು.

ಕಳೆದ ವರ್ಷಗಳಲ್ಲಿ, ರಾಷ್ಟ್ರವು ಬಂದರು ನೇತೃತ್ವದ ಅಭಿವೃದ್ಧಿಯನ್ನು ಪ್ರಮುಖ ಮಂತ್ರವನ್ನಾಗಿ ಮಾಡಿದೆ. ಈ ಪ್ರಯತ್ನಗಳ ಫಲವಾಗಿ ಕಳೆದ 8 ವರ್ಷಗಳಲ್ಲಿ ಭಾರತೀಯ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದರು.

ಸಾಗರ ಮಾಲಾ ಯೋಜನೆಯ ಅತೀ ಹೆಚ್ಚು ಪ್ರಯೋಜನವನ್ನು ಕರ್ನಾಟಕ ಪಡೆದುಕೊಂಡಿದೆ.ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, 2014 ರ ನಂತರ 4 ಪಟ್ಟು ಹೆಚ್ಚು ರೈಲ್ವೆ ಯೋಜನೆಗಳ ಅನುದಾನ ಕರ್ನಾಟಕ ಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಲ್ಲಿ 70,000 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು ಚಾಲನೆಯಲ್ಲಿವೆ ಎಂದರು.

ಬಡವನಿಗೆ ಸಂಕಟ ಬಂದರೆ ಇಡೀ ಕುಟುಂಬ ಸಂಕಟಕ್ಕೆ ಗುರಿಯಾಗುತ್ತದೆ. ಆಯುಷ್ಮಾನ್ ಭಾರತ ಯೋಜನೆ ನಾಲ್ಕು ಕೋಟಿ ಬಡವರಿಗೆ ನೆರವಾಗಿಗೆ, ಕರ್ನಾಟಕದ 30 ಲಕ್ಷ ಮಂದಿಗೆ ನೆರವಾಗಿದೆ.ಕೋಟ್ಯಂತರ ಬಡವರಿಗೆ ವಿಕಾಸದ ಲಾಭ ಸಿಗಲು ಸಾಧ್ಯವಾಗಿದೆ ಎಂದರು.

ಮತ್ಸ್ಯ ಸಂಪದ ಯೋಜನೆ ಮೂಲಕ ಕರ್ನಾಟಕದ ಮೀನುಗಾರರ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರವಾಸೋದ್ಯಮ ಅಭಿವೃದ್ಧಿಗೆ ಅತ್ಯುತ್ತಮ ಸ್ಥಳಗಳಾಗಿವೆ. ಪ್ರವಾಸೋದ್ಯಮ ಅಭಿವೃದ್ಧಿ ಸಮಾಜದ ಹಲವರಿಗೆ ಲಾಭವಾಗುತ್ತದೆ. ಕ್ರೂಸ್ ಟೂರಿಸಂ ಇಲ್ಲಿ ಅಭಿವೃದ್ಧಿಯಾಗಬೇಕು ಎಂದರು.

ಡಬಲ್ ಇಂಜಿನ್ ಸರಕಾರ ಹಗಲು ರಾತ್ರಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಕೆಲಸಮಾಡುತ್ತಿದೆ. ಕಳೆದ 8 ವರ್ಷಗಳಲ್ಲಿ ಮೆಟ್ರೋ ಸಂಪರ್ಕ ಹೊಂದಿದ ನಗರಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದರು.

ಕ್ಲೀನ್ ಎಕಾನಮಿ ಮೂಲಕ ಆನ್ಲೈನ್ ಪೇಮೆಂಟ್ ಇಂದು ಮೇಲ್ಮಟ್ಟದಲ್ಲಿ ನಡೆಯುತ್ತಿದೆ. ಭೀಮ್ ಸೇರಿ ವಿವಿಧ ಯಾಪ್ ಗಳು ಜಗತ್ತಿನ ಗಮನ ಸೆಳೆಯುತ್ತಿದೆ ಎಂದರು.

ಭಾರತದ ದೊಡ್ಡ ಉದ್ಯಮಿಗಳು ಕರ್ನಾಟಕದವರೇ ಆಗಿದ್ದಾರೆ. ರಾಣಿ, ಅಬ್ಬಕ್ಕ ಅವರನ್ನು ನೆನಪಿಸಿಕೊಳ್ಳುತ್ತೇನೆ. ವೀರ ಮಹಿಳೆ ದೊಡ್ಡ ಪ್ರೇರಣೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.