ವಿಮಾನ ನಿಲ್ದಾಣ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ: ವಿವಿ ರಾವ್
Team Udayavani, Jan 11, 2018, 3:46 PM IST
ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ವಿವಿ ರಾವ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ ಎಂದು ಎಎನ್ಐ ವರದಿ ಮಾಡಿತ್ತು.
ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ ವಿಮಾನವೊಂದು ಟೇಕಾಫ್ ಆಗುತ್ತಿತ್ತು. ಇದು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಎಟಿಎಸ್ ಸಿಬ್ಬಂದಿ ಕೂಡಲೇ ವಿಮಾನದ ಪೈಲಟ್ ಗೆ ಸಂದೇಶ ರವಾನಿಸಿದ್ದಾರೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ವರದಿ ವಿವರಿಸಿತ್ತು.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿರ್ದೇಶಕರು, ವಿಮಾನ ಟೇಕಾಫ್ ಆಗುವ ವೇಳೆ ರನ್ ವೇ ಯಲ್ಲಿ ಯಾವುದೇ ಟ್ರ್ಯಾಕ್ಟರ್ ಆಗಲಿ ವಸ್ತುವಾಗಲಿ ಇರಲಿಲ್ಲವಾಗಿತ್ತು. ವಿಮಾನ ಟೇಕ್ ಆಫ್ ಆಗುವ ಮುನ್ನವೇ ರನ್ ವೇ ಗಿಂತ ತುಂಬಾ ದೂರದಲ್ಲಿ ಟ್ರ್ಯಾಕ್ಟರ್ ಇದ್ದಿರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಕೂಡಲೇ ಟ್ರ್ಯಾಕ್ಟರ್ ಅನ್ನು ತೆಗೆಯಿಸಿದ ಬಳಿಕ ವಿಮಾನ ಸುರಕ್ಷಿತವಾಗಿ ಟೇಕಾಫ್ ಆಗಿದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ