ಶಸ್ತ್ರಾಸ್ತ್ರ ಹೊಂದಿದ್ದ ಆರೋಪಿಗಳ ಬಂಧನ ಪ್ರಕರಣಕ್ಕೆ ತಿರುವು
Team Udayavani, Mar 31, 2018, 10:10 AM IST
ಮಂಗಳೂರು: ಕಿನ್ನಿಗೋಳಿ ಶಿಬರೂರು ಬಳಿ ಕಾರಿನಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಮೂವರು ಆರೋಪಿಗಳನ್ನು ಮಾ.28ರಂದು ಬಂಧಿಸಿರುವ ಪ್ರಕರಣ ವಿಭಿನ್ನ ತಿರುವು ಪಡೆದುಕೊಂಡಿದೆ. ಈ ತಂಡ ಬಿಜೆಪಿ ಮುಖಂಡ ಜಿ.ಪಂ.ಮಾಜಿ ಸದಸ್ಯ ಈಶ್ವರ್ ಕಟೀಲು ಅವರ ಹತ್ಯೆಗೆ ಸಂಚು ರೂಪಿಸಿತ್ತು ಎಂಬ ಮಾತುಗಳು ಕೇಳಿಬಂದಿವೆ.
ಶ್ರೀಮಂತ ವ್ಯಕ್ತಿಗಳ ದರೋಡೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ದಿನೇಶ್ ಬೆಳ್ಚಡ (23), ಪ್ರದೀಪ್ ಪೂಜಾರಿ (24) ಹಾಗೂ ಶಿವಪ್ರಸಾದ್ (28)ನನ್ನು ಶಿಬರೂರು ಬಳಿ ಮಾ.28ರಂದು ಮಂಗಳೂರು ಉತ್ತರ ರೌಡಿ ನಿಗ್ರಹ ದಳ ಪೊಲೀಸರು ಬಂಧಿಸಿದ್ದರು. ಈ ವೇಳೆ ಇನ್ನಿಬ್ಬರು ಆರೋಪಿಗಳಾದ ನವೀನ್ ಕಟೀಲು ಹಾಗೂ ಆಕಾಶ್ ಗಾಣಿಗ ಸ್ಥಳದಿಂದ ಪರಾರಿಯಾಗಿದ್ದರು. ಬಿಜೆಪಿ ಮುಖಂಡನ ಕೊಲೆಗೆ ಸ್ಕೆಚ್ ರೂಪಿಸಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಇದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.
‘ಶಿಬರೂರು ಸಮೀಪ ಮಾ.28ರಂದು ದುಷ್ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳು ರೌಡಿಶೀಟರ್ಗಳಾಗಿದ್ದು, ಕ್ರಿಮಿನಲ್ ಹಿನ್ನೆಲೆಯುಳ್ಳವರು. ಪೊಲೀಸರು ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಇವರನ್ನು ಬಂಧಿಸಲಾಗಿದೆ. ಬಂಧಿತರು ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ ತನಿಖೆಯಿಂದ ಮಾಹಿತಿ ಲಭಿಸಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’