ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ
Team Udayavani, Sep 21, 2020, 3:13 PM IST
ಮಂಡ್ಯ: ಟಿಪ್ಪರ್ ಲಾರಿ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿಂದು ಮದ್ಯಾಹ್ನ ನಡೆದಿದೆ.
ಹಾಡ್ಯಗ್ರಾಮದ ಶಶಿಕಲಾ (35), ಲಾವಣ್ಯ (4), ಮೃತಪಟ್ಟ ದುರ್ದೈವಿಗಳಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪತಿ ದೇವರಾಜು (45) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ವಿವರ: ಮಂಡ್ಯ ತಾಲಕಿನ ಹಾಡ್ಯ ಗ್ರಾಮದ ದೇವರಾಜು ಅವರು ಇಂದು ಬೆಳಗ್ಗೆ ಅನಾರೋಗ್ಯದ ನಿಮಿತ್ತ ಮಗಳು ಲಾವಣ್ಯಳಿಗೆ ಚಿಕಿತ್ಸೆ ಕೊಡಿಸಲು ತಮ್ಮ ಟಿವಿಎಸ್ ಸ್ಕೂಟರ್ ನಲ್ಲಿ ಮಂಡ್ಯದ ಖಾಸಗಿ ಆಸ್ಪತ್ರೆಗೆ ಪತ್ನಿ ಶಶಿಕಲಾ ಜೊತೆ ಬಂದಿದ್ದರು, ಮಗು ವಿನ ಚಿಕಿತ್ಸೆ ಬಳಿಕ ಸ್ವಗ್ರಾಮಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಹೊಳಲು ಗ್ರಾಮದ ಸರ್ಕಲ್ ನಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಟಿವಿಎಸ್ ಗೆ ಢಿಕ್ಕಿಹೊಡೆದಿದೆ. ಕೆಳಕ್ಕೆ ಬಿದ್ದ ತಾಯಿ, ಮಗು ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪವಾಡ ಸದೃಶ ರೀತಿಯಲ್ಲಿ ದೇವರಾಜು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!
ಸುದ್ದಿ ತಿಳಿದ ಗ್ರಾಮಾಂತರ ಠಾಣಾ ಪಿಎಸ್ಐ ಸಿದ್ದರಾಜು ನೇತೃತ್ವದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಂಬುಲೆನ್ಸ್ ನಲ್ಲಿ ಶವಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್