ಮೂಡುಬಿದಿರೆ ಗಂಟಾಲ್ಕಟ್ಟೆಯಲ್ಲಿ ಬೈಕ್ -ಸ್ಕೂಟರ್ ಢಿಕ್ಕಿ: ಓರ್ವ ಸಾವು
Team Udayavani, Apr 19, 2022, 12:42 PM IST
ಮೂಡುಬಿದಿರೆ: ಅಪಘಾತ ವಲಯವೆಂದೇ ಪರಿಚಿತವಾಗಿರುವ ಮೂಡುಬಿದಿರೆ ಹೊರವಲಯದ ಕಲ್ಲಬೆಟ್ಟು ಗ್ರಾಮದ ಗಂಟಾಲ್ಕಟ್ಟೆಯಲ್ಲಿ ಸ್ಕೂಟಿಗೆ ಬೈಕ್ ಢಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತ ಪಟ್ಟ ದುರ್ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಶಿರ್ತಾಡಿ ವಾಲ್ಪಾಡಿ ಪುನ್ಕೆದಡಿ ನಿವಾಸಿ ರಮೇಶ (38) ಸ್ಥಳದಲ್ಲೇ ಮೃತ ಪಟ್ಟ ದುರ್ಧೈವಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದರು.
ಗಂಟಾಲ್ಕಟ್ಟೆಯ ಹೋಟೆಲ್ ನಲ್ಲಿ ಚಹಾ ಸೇವಿಸಿ ಜತೆಗಾರನೊಂದಿಗೆ ಹೋಟೆಲ್ ನಿಂದ ಹೊರಟು ಸ್ಕೂಟಿಯಲ್ಲಿ ರಸ್ತೆ ತಲುಪುವಷ್ಟರಲ್ಲಿ ವೇಣೂರು ಕಡೆಯಿಂದ ಬಂದ ಬೈಕ್ ಸ್ಕೂಟಿಗೆ ಬಡಿದ ಪರಿಣಾಮ ಸ್ಕೂಟಿ ಮಗುಚಿ ಬಿತ್ತು. ತಲೆಗೆ ತೀವ್ರ ಏಟು ತಗಲಿದ ರಮೇಶ ಸ್ಥಳದಲ್ಲೇ ಮೃತಪಟ್ಟರು.
ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಡುಪಿ: ಸಂತೋಷ್ ಆತ್ಮಹತ್ಯೆ ಮಾಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕನ ಆತ್ಮಹತ್ಯೆ!