ಬೈಕ್‌ ಸ್ಕಿಡ್‌: ಕೊಯಿಲದ ಯುವಕ ಸಕಲೇಶಪುರದಲ್ಲಿ ಸಾವು


Team Udayavani, Nov 2, 2018, 10:56 AM IST

koila.jpg

ಆಲಂಕಾರು: ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕ, ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಉಜ್ವಲ್‌ ಮಂಜುನಾಥ್‌ (22) ಅವರು ಶುಕ್ರವಾರ ಮುಂಜಾನೆ ಸಕಲೇಶಪುರ ಠಾಣಾ ವ್ಯಾಪ್ತಿಯ ಬಾಳುಪೇಟೆ ಬಳಿಯ ಕೊಂಬಾರುಗಟ್ಟೆ ಎಡೆಹಳ್ಳಿ ಕ್ರಾಸನಲ್ಲಿ  ಸಂಭವಿಸಿದ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

ಕೊಯಿಲ ಪೂರಿಂಗ ನಿವಾಸಿ ಉದಯ ಕುಮಾರ್‌ ಅವರ ಏಕೈಕ ಪುತ್ರನಾಗಿದ್ದ ಇವರು ಬುಲೆಟ್‌ನಲ್ಲಿ ಹಾಸನದಿಂದ ಊರಿಗೆ ಬರುತ್ತಿದ್ದಾಗ  ಅಪಘಾತ ಸಂಭವಿಸಿದೆ.


ಚಾರಣ ಹಾಗೂ ಛಾಯಾಚಿತ್ರಗ್ರಹಣದಲ್ಲಿ ಅತಿಯಾದ ಆಸಕ್ತಿ ಹೊಂದಿದ್ದ ಇವರು ತನ್ನ ಮೂವರು ಸಹಪಾಠಿಗಳಾದ ಬಂಟ್ವಾಳ ತಾಲೂಕಿನ ಬಾಳ್ತಿಲ ನಿವಾಸಿ ರಂಜಿತ್‌, ಬೆಳ್ತಂಗಡಿಯ ಜಾಬಿದ್‌ ಹಾಗೂ ಕುಲದೀಪ್‌ ಅವರೊಂದಿಗೆ ಹಾಸನದ ಶೆಟ್ಟಿಹಳ್ಳಿಯ ಹಳೆಯ ಚರ್ಚೊದರ ಸೂರ್ಯೋದಯದ  ದೃಶ್ಯಗಳನ್ನು ಕೆಮರಾದಲ್ಲಿ  ಸೆರೆ ಹಿಡಿಯಲು ಹೋಗಿದ್ದರು. ಗುರುವಾರ ತಮ್ಮ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಪೂರ್ವ ತಯಾರಿ ಮಾಡುವ ಉದ್ದೇಶದಿಂದ ಬುಧವಾರ ರಾತ್ರಿ 11 ಗಂಟೆ  ತನಕ ಕಾಲೇಜಿನಲ್ಲೇ ಇದ್ದು, ಬಳಿಕ ಎರಡು ಬೈಕಿನಲ್ಲಿ  ಹಾಸನಕ್ಕೆ ಹೊರಟಿದ್ದರು. ಶೆಟ್ಟಿಹಳ್ಳಿಗೆ ಮುಂಜಾನೆ ಐದು ಗಂಟೆ ವೇಳೆಗೆ ತಲುಪಿ ಆರು ಗಂಟೆಗೆ  ಸ್ಟೇಟಸ್‌ನಲ್ಲಿ ತಾನು ತೆಗೆದಿರುವ ಫೋಟೋವನ್ನು ಶೇರ್‌ ಮಾಡಿಕೊಂಡಿದ್ದರು. 

ಕೊಂಬಾರುಗಟ್ಟೆ ಎಡೆಹಳ್ಳಿ ಕ್ರಾಸ್‌ ಬಳಿ ಹೆದ್ದಾರಿ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ರಸ್ತೆಯಲ್ಲಿದ್ದ ಗುಂಡಿ ಗಮನಕ್ಕೆ ಬಾರದೆ ಬೈಕ್‌  ಸ್ಕಿಡ್‌ ಆಗಿ ಎಸೆಯಲ್ಪಟ್ಟಿದೆ. ಪರಿಣಾಮ ಉಜ್ವಲ್‌ ಮಂಜನಾಥ್‌ ಅವರ ಎದೆಗೆ ಬೈಕಿನ ಹ್ಯಾಂಡಲ್‌ ತಾಗಿ ಬಲವಾದ ಪೆಟ್ಟಾಗಿದೆ. ಎಡಗೈ ಮುರಿದಿದ್ದು, ತಲೆ ಹಾಗೂ  ಹೊಟ್ಟೆಗೂ ಗಂಭೀರ ಗಾಯಗಳಾಗಿದ್ದವು. ಇನ್ನೊಂದು ಬೈಕಿನಲ್ಲಿದ್ದವರು ತತ್‌ಕ್ಷಣ ಹಾಸನ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಫ‌ಲಕಾರಿಯಾಗಿಲ್ಲ.  ಹಿಂಬದಿ ಸವಾರ ರಂಜಿತ್‌ಗೂ ಗಾಯವಾಗಿದೆ.  ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಜೆ ವೇಳೆಗೆ ಮೃತದೇಹವನ್ನು ಕೊಯಿಲ ಮನೆಗೆ ತರಲಾಯಿತು.ಅವರು ಓರ್ವ ಸಹೋದರಿ  ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ. 

ಮೃತರ ಮನೆಗೆ ಆರೆಸ್ಸೆಸ್‌ ಮುಖಂಡ ಡಾ| ಪ್ರಭಾಕರ ಭಟ್‌ ಕಲ್ಲಡ್ಕ,  ವಿವೇಕಾನಂದ ಕಾನೂನು ಕಾಲೇಜಿನ ಸಂಚಾಲಕ ಗಣೇಶ್‌ ಜೋಷಿ, ತಾಲೂಕು ಪಂಚಾಯತ್‌ ಸದಸ್ಯೆ ಜಯಂತಿ ಆರ್‌ ಗೌಡ, ಕೊಯಿಲ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಹೇಮಾ ಮೋಹನ್‌ದಾಸ್‌ ಶೆಟ್ಟಿ, ರಾಮಕುಂಜ ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಶಾಂತ್‌ ಆರ್‌.ಕ., ಆಲಂಕಾರು ಸಿಎ ಬ್ಯಾಂಕ್‌ ಅಧ್ಯಕ್ಷ ರಮೇಶ್‌ ಭಟ್‌ ಉಪ್ಪಂಗಳ, ವಿವೇಕಾನಂದ ಕಾಲೇಜಿನ ಪ್ರಿನ್ಸಿಪಾಲ್‌, ಉಪನ್ಯಾಸಕ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಭೇಟಿ ನೀಡಿದರು.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.