ಬಿಳಿನೆಲೆ ಶಾಲೆ: ಪರಿಸರ – ಜಲ ಸಂರಕ್ಷಣೆಯ ಪ್ರಯೋಗ ಶಾಲೆ


Team Udayavani, Apr 12, 2018, 1:19 PM IST

12-April-11.jpg

ಸುಬ್ರಹ್ಮಣ್ಯ : ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಈ ಕಾಲದಲ್ಲಿ ಕಾರ್ಯದೊತ್ತಡ ನಡುವೆಯೂ ಎಂಟು ವರ್ಷಗಳಿಂದ ಒಂದಿಲ್ಲೊಂದು ಪರಿಸರ ಅಂಶವನ್ನು ಮಕ್ಕಳಲ್ಲಿ ಬಿತ್ತುತ್ತ ಬೆಳೆಯುತ್ತಿರುವ ಪುಟ್ಟ ಈ ಸರಕಾರಿ ಶಾಲೆಯ ಪರಿಸರ ಪ್ರೇಮ ಎಲ್ಲರಿಗೂ ಮಾದರಿಯಾಗಿದೆ.

ಪಶ್ಚಿಮ ಘಟ್ಟದ ತಪ್ಪಲಿನ ನಡುವೆ ಹೊದ್ದು ಮಲಗಿಕೊಂಡಿದೆ ಬಿಳಿನೆಲೆ ಎಂಬ ಪುಟ್ಟ ಹಳ್ಳಿ. ಇಲ್ಲಿನ ಬಿಳಿನೆಲೆ- ಕೈಕಂಬದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿ ತನಕ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಶಾಲೆಯಲ್ಲಿ ಒಟ್ಟು 29 ಹೆಣ್ಣುಮಕ್ಕಳು. 40 ಗಂಡು ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ. 6 ಮಂದಿ ಬೋಧಕರಿದ್ದು, ಇಲ್ಲಿನ ವಿದ್ಯಾರ್ಥಿಗಳ, ಶಿಕ್ಷಕರ, ಹೆತ್ತವರ ಪರಿಸರ ಕಾಳಜಿ ಈಗ ಎಲ್ಲರನ್ನೂ ಶಾಲೆ ಕಡೆಗೆ ಸೆಳೆಯುತ್ತಿದೆ.

ಪರಿಸರ ಕಾಳಜಿ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಿಕ್ಷಣ ಇಲಾಖೆ, ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ಪರಿಸರ ಮಿತ್ರ ಶಾಲೆಗಳಿಗೆ ನೀಡುವ ಹಸಿರು ಶಾಲೆ ಪುರಸ್ಕಾರವನ್ನು ಸತತ ಮೂರು ಬಾರಿ ಪಡೆದುಕೊಂಡ ಹೆಗ್ಗಳಿಕೆ ಈ ಶಾಲೆಗಿದೆ. ಈ ಪ್ರಶಸ್ತಿಯನ್ನು ಮೂರು ವರ್ಷಗಳ ಹಿಂದೆ ನೀಡಲು ಪ್ರಾರಂಭಿಸಲಾಗಿತ್ತು. ಅಲ್ಲಿಂದೀಚೆಗೆ ಪ್ರತಿ ವರ್ಷವೂ ಈ ಶಾಲೆ ಪ್ರಶಸ್ತಿಗೆ ಭಾಜನವಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಮತ್ತು ಸಹಶಿಕ್ಷಕ, ಶಿಕ್ಷಕಿಯರ ಪರಿಸರ ಕಾಳಜಿ ಇಲ್ಲಿ ಮಕ್ಕಳ ಮೂಲಕ ಸಾಕಾರಗೊಂಡಿದೆ. 

ಶಾಲೆಯ ಪಕ್ಕದಲ್ಲಿ ನಿರ್ಮಿಸಿದ ಸುಂದರ ಕೈತೋಟ ಮನ ಸೆಳೆಯುತ್ತಿದೆ. ಮಕ್ಕಳಿಗೆ ಪಠ್ಯ ವಿಷಯಗಳ ಜತೆಗೆ ಕೃಷಿ ಜ್ಞಾನ ಬೋಧಿಸಲಾಗುತ್ತಿದೆ. ಕೈತೋಟದಲ್ಲಿ ತರಕಾರಿ ಗಿಡಗಳನ್ನು ನೆಟ್ಟು ಅದಕ್ಕೆ ಹಟ್ಟಿ ಗೊಬ್ಬರ ಹಾಕಿ ಪೋಷಣೆ ಮಾಡಲಾಗುತ್ತಿದೆ. ಕೈತೋಟದಲ್ಲಿ ಔಷಧೀಯ ಸಸಿಗಳನ್ನು ನೆಟ್ಟು ಅಳಿವಿನಂಚಿನಲ್ಲಿರುವ ಆಯುರ್ವೇದ ಔಷಧೀಯ ಸಸ್ಯಗಳ ಪರಿಚಯವನ್ನು ಮಾಡಿ ಮುಂದಿನ ತಲೆಮಾರಿಗೆ ಪರಿಚಯಿಸುವ, ಉಳಿಸುವ ಕೆಲಸ ಆಗುತ್ತಿದೆ.

ಈ ಶಾಲೆಯಲ್ಲಿ ತರಕಾರಿ, ಔಷಧೀಯ ಗಿಡ, ಹೂ, ಹಣ್ಣು, ನೀರು, ಗಾಳಿ, ಮಣ್ಣು, ಶಕ್ತಿ, ಆರೋಗ್ಯ, ನೈರ್ಮಲ್ಯ ಕುರಿತು ವಿದ್ಯಾರ್ಥಿಗಳಿಗೆ ನೀಡಿದ ಅಪಾರ ಜ್ಞಾನದ ಸಂಕೇತವಾಗಿ ಸತತ ಮೂರು ಬಾರಿ ಶಾಲೆಗೆ ಪರಿಸರ ಪ್ರಶಸ್ತಿ ಬಂದಿದೆ. ಶಾಲೆಗೆ ಭೇಟಿ ಕೊಟ್ಟ ತಜ್ಞರ ಸಮಿತಿ ಈ ಎಲ್ಲ ವಿಚಾರಗಳನ್ನು ಪರಿಶೀಲಿಸಿ, ಈ ಬಾರಿ ಕೂಡ ಹಸಿರು ಶಾಲೆ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

ಜಲ ಕಾಳಜಿ
ಶಾಲೆಯಲ್ಲಿ ಜಲ ಮರುಪೂರಣ ಘಟಕ ವಿದೆ. ಮಳೆಕೊಯ್ಲು ಪದ್ಧತಿ ಅಳವಡಿಸಿದೆ. ತರಕಾರಿ ತೋಟ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ, ಶಾಲಾ ಆವರಣದಲ್ಲಿ ಸ್ವಚ್ಛತೆ, ಶಾಲಾ ಆವರಣದಲ್ಲಿ ಫ‌ಲಭರಿತ ಮರಗಳ ಬೆಳೆಸುವಿಕೆ, ಹಣ್ಣಿನ ಗಿಡಗಳು, ಔಷಧೀಯ ಸಸ್ಯ ಬೆಳೆಸುವಿಕೆ, ಬಯೋಗ್ಯಾಸ್‌ ವ್ಯವಸ್ಥೆ ಇದೆ.

ಈ ಶಾಲೆ ಮಾದರಿಯಾಗಿದೆ
ಶಾಲೆ ಪರಿಸರ ಕಾಳಜಿಗೆ ಮಾದರಿಯಾಗಿದೆ. ಇಲ್ಲಿನ ಶಿಕ್ಷಕರು, ಮಕ್ಕಳು, ಶಾಲಾಭಿವೃದ್ಧಿ ಸಮಿತಿ, ಹೆತ್ತವರು ಹಾಗೂ ಸ್ಥಳೀಯರ ನೆರವಿನಿಂದ ಪರಿಸರಸ್ನೇಹಿ ಕಾರ್ಯಗಳು ನಡೆಯುತ್ತಿವೆ. ಶಿಕ್ಷಣ ಇಲಾಖೆ ಕಡೆಯಿಂದ ಈ ಸಾಧನೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ.
– ಸುಕನ್ಯಾ,
ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

ಶಿಕ್ಷಣವನ್ನಷ್ಟೆ ನೀಡಿದರೆ ಸಾಲದು
ವಿದ್ಯಾರ್ಥಿಗಳಿಗೆ ಶಿಕ್ಷಣವನ್ನಷ್ಟೆ ಬೋಧಿಸಿದರೆ ಸಾಲದು, ಪರಿಸರ ಕಾಳಜಿಯ ಪಾಠವೂ ಅವಶ್ಯ. ಆ ದಿಕ್ಕಿನಲ್ಲಿ ಎಳೆ ವಯಸ್ಸಿನಲ್ಲಿ ಅವರಲ್ಲಿ ಪರಿಸರ ಕಾಳಜಿ ಮೂಡಿಸುವ ಪ್ರಯತ್ನ ನಡೆಸುತ್ತಿದ್ದೇವೆ. ನಶಿಸಿ ಹೋಗುತ್ತಿರುವ ಆಯುರ್ವೇದ ಔಷಧೀಯ ಸಸ್ಯಗಳನ್ನು ಮಕ್ಕಳಿಗೆ ಪರಿಚಯಿಸುತ್ತಿದ್ದೇವೆ. ಮಕ್ಕಳು, ಸಹ ಶಿಕ್ಷಕರು, ಇಲಾಖೆ ನೆರವಿನಿಂದ ಇದು ಇಲ್ಲಿ ಸಾಕಾರಗೊಂಡಿದೆ.
-ಶಾರದಾ ಪಿ.,
ಮುಖ್ಯ ಶಿಕ್ಷಕಿ

ಕಲಿಕೆ ಜತೆಗೆ ಅನುಭವ
ಅತ್ಯಂತ ಖುಷಿಯ ಅನುಭವ. ಸಸಿ ಬೆಳೆಸುವುದು, ಔಷಧೀಯ ಸಸ್ಯಗಳ ಪರಿಚಯ, ಅದರ ಉಪಯುಕ್ತತೆ ಕುರಿತು ಕಲಿಯಲು ಎಳವೆಯಲ್ಲೆ ಅವಕಾಶ ಸಿಕ್ಕಿದೆ. ನಾನು, ಸಹಪಾಠಿಗಳು ಎಲ್ಲರೂ ಇದರ ಅನುಭವವನ್ನು ಪಡೆಯುತ್ತಿದ್ದೇವೆ. ವೇಳಾಪಟ್ಟಿಯಂತೆ ನಾವು ಪಠ್ಯೇತರ ಚಟುವಟಿಕೆ ನಡೆಸುತ್ತಿದ್ದು, ಪ್ರಯೋಜನಕಾರಿ ಅಂಶವಿದು. ಎಲ್ಲ ಸರಕಾರಿ ಶಾಲೆಗಳಲ್ಲಿ ಇದೇ ಮಾದರಿ ಅಳವಡಿಕೆಯಾಗಬೇಕು.
-ನಿವೇದಿತಾ,
ವಿದ್ಯಾರ್ಥಿ ನಾಯಕಿ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.