ಪಕ್ಷಿಗಳ ವಿಹಾರ ತಾಣ, ಕೃಷಿ ಭೂಮಿಗೆ ಅನುಕೂಲ

ಮೇಲೂರು ಕೆರೆಗೆ ಕಾಯಕಲ್ಪ: 40 ಸೆಂಟ್ಸ್‌ ಜಾಗ ದಾನ

Team Udayavani, Dec 10, 2022, 11:26 AM IST

5

ಪುತ್ತೂರು: ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಮತ್ತು ಸಾಂಪ್ರದಾಯಿಕ ಕೆರೆ-ಕಟ್ಟೆಗಳನ್ನು ಉಳಿಸಿ ಅಭಿವೃದ್ಧಿಪಡಿಸುವ ಅಭಿಯಾನಕ್ಕೆ ಪೂರಕ ಎಂಬಂತೆ ಬಜತ್ತೂರು ಗ್ರಾ.ಪಂ. ವ್ಯಾಪ್ತಿಯ ಮೇಲೂರಿನಲ್ಲಿ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಾರಂಭಗೊಂಡಿದೆ.

ಮೇಲೂರಿನಲ್ಲಿ 60 ಸೆಂಟ್ಸ್‌ ಜಾಗ ಕೆರೆಗೆ ಮೀಸಲಿಡಲಾಗಿತ್ತು. ಅದರಲ್ಲಿ 10 ಸೆಂಟ್ಸ್‌ ಜಾಗದಲ್ಲಿ ಮಾತ್ರ ನೀರು ನಿಲ್ಲುತ್ತಿತ್ತು. ಇನ್ನುಳಿದ 50 ಸೆಂಟ್ಸ್‌ ಜಾಗದಲ್ಲಿ ಹೂಳು ತುಂಬಿತ್ತು. ಕೆರೆಗೆ ಹೊಂದಿಕೊಂಡಿರುವ ಭೂ ಮಾಲಕರಾದ ಮೇಲೂರು ಅಪರಂಜಿ ಅರಿಗ ಅವರು 40 ಸೆಂಟ್ಸ್‌ ಜಾಗವನ್ನು ಗ್ರಾ.ಪಂ.ಗೆ ದಾನ ಪತ್ರದ ಮೂಲಕ ನೀಡಿದ್ದಾರೆ. ಕೆರೆ ರಚನೆಗೆ ಮುತುವರ್ಜಿ ವಹಿಸಿ ಜಮೀನು ದಾನ ನೀಡಿರುವುದು ಕೆರೆ ಅಭಿವೃದ್ಧಿ ನಡೆಸಲು ಮುಖ್ಯ ಕಾರಣ ಎನ್ನುತ್ತದೆ ಗ್ರಾ.ಪಂ. ಆಡಳಿತ ಮಂಡಳಿ.

ಕೆರೆ ಅಭಿವೃದ್ಧಿ

ಮೇಲೂರು ಕೆರೆ ಅಭಿವೃದ್ಧಿ ಕುರಿತು ಉದ್ಯೋಗ ಖಾತರಿ ಯೋಜನೆಯ ಗ್ರಾಮಸಭೆಯಲ್ಲಿ ಪ್ರಸ್ತಾವವಾಗಿತ್ತು. ಕೇವಲ ಉದ್ಯೋಗ ಖಾತರಿ ಯೋಜನೆಯ ಅನುದಾನದಿಂದ ಅಭಿವೃದ್ಧಿ ಸಾಧ್ಯವಿಲ್ಲದಿ ರುವುದರಿಂದ ಜಿ.ಪಂ., ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆ, ಧ.ಗ್ರಾ. ಯೋಜನೆ ಹೀಗೆ ಹಲವು ಇಲಾಖೆಗಳಿಗೆ ಮತ್ತು ಸಿಎಸ್‌ಆರ್‌ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗಿತ್ತು. ಜಿ.ಪಂ., ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಅನುದಾನದಲ್ಲಿ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟು 32 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೊಳ್ಳಲಿದೆ.

ಮೂರು ಭಾಗ ಗುಡ್ಡ ಪ್ರದೇಶವಿದ್ದು ಮಧ್ಯದಲ್ಲಿ ಮೇಲೂರು ಕೆರೆ ಇದೆ. ತಗ್ಗು ಪ್ರದೇಶದಲ್ಲಿ ತೋಟ, ಗದ್ದೆ ಇದ್ದು, ಗುಡ್ಡ ಪ್ರದೇಶದಿಂದ ಹರಿದು ಬಂದ ನೀರು ಈ ಕೆರೆಯಲ್ಲಿ ನಿಲ್ಲಲು ಸಹಕಾರಿಯಾಗಲಿದೆ. ಮಳೆಗಾಲ ಆರಂಭವಾಗುವಾಗ ವಿವಿಧ ಜಾತಿಯ ಪಕ್ಷಿಗಳು ಈ ಪರಿಸರದಲ್ಲಿ ವಿಹರಿಸಿ ಡಿಸೆಂಬರ್‌ ವೇಳೆ ವಲಸೆ ಹೋಗುತ್ತವೆ. ಹೀಗೆ ಪಕ್ಷಿಗಳಿಗೆ ಪ್ರಿಯ ತಾಣವೂ ಇದಾಗಿದೆ.

ಕೆರೆಯ ಹೂಳೆತ್ತುವುದುರಿಂದ ಅಂತ ರ್ಜಲ ವೃದ್ಧಿಯಾಗಲಿದೆ. ಸುತ್ತಲಿನ ನೀರಿನ ಮೂಲಗಳಿಗೆ ಅಲ್ಲದೆ ಕೊಳವೆ ಬಾವಿಗಳಿಗೂ ಪ್ರಯೋಜನವಾಗಲಿದೆ.

ಅಂತರ್ಜಲ ವೃದ್ಧಿಗೆ ಮುಖ್ಯ ಪಾತ್ರವಹಿ ಸಲಿರುವ ಕಾರಣ ಕೆರೆಯ ಅಭಿವೃದ್ಧಿಯ ಆವಶ್ಯಕತೆಗೆ 0.40 ಸೆಂಟ್ಸ್‌ ಜಾಗವನ್ನು ಗ್ರಾ.ಪಂ.ಗೆ ದಾನ ನೀಡಿದ್ದೇವೆ. ಗ್ರಾಮದ ಜನತೆಗೆ ಸಹಾಯವಾಗುತ್ತಿರುವುದಕ್ಕೆ ಖುಷಿ ಇದೆ ಎಂದು ಜಾಗ ದಾನಿಗಳಾದ ವೀರೇಂದ್ರ ಜೈನ್‌ ಮೇಲೂರು ಹೇಳುತ್ತಾರೆ.

ಕಾಮಗಾರಿ ಪ್ರಗತಿಯಲ್ಲಿದೆ: ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆಯಿಂದ 32 ಲ.ರೂ.ನಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಅಂದಾಜು 6 ಮೀ. ಆಳ ಹಾಗೂ 60 ಮೀ. ಉದ್ದ -ಅಗಲ ಕಾಮಗಾರಿ ಪ್ರಗತಿಯಲ್ಲಿದೆ. ಅನುದಾನದ ಕೊರತೆಯಾದರೆ ಇತರ ಅನುದಾನಗಳನ್ನು ಒಗ್ಗೂಡಿಸಿ ಅನುಷ್ಠಾನಿಸಬೇಕಿದೆ. –ಭರತ್‌ ಬಿ.ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂ. ರಾಜ್‌ ಎಂಜಿನಿಯರಿಂಗ್‌ ಇಲಾಖೆ, ಪುತ್ತೂರು

ಪಕ್ಷಿಗಳಿಗೂ ಸಹಕಾರಿ: ಮೇಲೂರು ಕೆರೆ ಅಭಿವೃದ್ಧಿಯಿಂದ ಕೃಷಿ ಜಮೀನುಗಳಿಗೆ ಅನುಕೂಲಕರವಾಗಲಿದೆ. ಕೆರೆಗೆ ಬೇರೆಡೆಯಿಂದ ವಿವಿಧ ಜಾತಿಯ ಪಕ್ಷಿಗಳು ಸ್ಥಳಕ್ಕೆ ವಲಸೆ ಬರುತ್ತಿದ್ದು, ಪಕ್ಷಿಗಳಿಗೂ ಸಹಕಾರಿಯಾಗಲಿದೆ. –ಪ್ರೇಮಾ ಬಿ., ಅಧ್ಯಕ್ಷರು, ಬಜತ್ತೂರು ಗ್ರಾ.ಪಂ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.