“ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಸ್ಪರ್ಧೆ’
ಅಳದಂಗಡಿ: ಬಿಜೆಪಿ ಪ್ರಚಾರ ಸಭೆ
Team Udayavani, Apr 15, 2019, 6:00 AM IST
ವೇಣೂರು: ಇಂದು ಜಿಲ್ಲೆ ಯಲ್ಲಿ ಬಿಜೆಪಿ- ಕಾಂಗ್ರೆಸ್ ಸ್ಪರ್ಧೆ ಇಲ್ಲ. ಕಾಂಗ್ರೆಸ್ನವರು ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಸುತ್ತಿದ್ದರೆ ಬಿಜೆಪಿ ಐತಿಹಾಸಿಕ ಜಯ ದಾಖಲಿಸಿಕೊಳ್ಳಲು ಪಣ ತೊಟ್ಟಿದೆ. ಈ ಮೂಲಕ ಭವ್ಯ ಭಾರತದಲ್ಲಿ ಬಿಜೆಪಿ ಇತಿ ಹಾಸ ಸೃಷ್ಟಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ ಹೇಳಿದರು.
ಅಳದಂಗಡಿ ಪೇಟೆಯಲ್ಲಿ ನಡೆದ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಪ್ರಮುಖ ಭಾಷಣಕಾರರಾಗಿ ಮಾತನಾಡಿದರು.
ಗಾಂಧಿ,ಮೋದಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತಲುಪದಿದ್ದರೂ ಮೋದಿ ಈಗಾಗಲೇ ಮನೆ ಮನಗಳ ಕದ ತಟ್ಟಿದ್ದಾರೆ. ಅಂದು ಗಾಂಧಿ ಇಂದು ಮೋದಿ. ಇಬ್ಬರೂ ಗುಜರಾತಿನವರು. ಮೋದಿ ಅಂದರೆ ಮಾಸ್ಟರ್ ಆಫ್ ಡೆವಲಪಿಂಗ್ ಇಂಡಿಯಾ, ಮಾಸ್ಟರ್ ಆಫ್ ಡೇರಿಂಗ್ ಇಂಡಿಯಾ ಎಂದು ಬಣ್ಣಿಸಿದ ಅವರು, ಕಳೆದ 50 ವರ್ಷಗಳಲ್ಲಿ ಪಾಕಿಸ್ಥಾನಕ್ಕೆ ತಕ್ಕ ಉತ್ತರ ಕೊಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲೀಗ ಕೋಮುಗಲಭೆಗಳು ಬಂದ್ ಆಗಿವೆ. ಜಿಲ್ಲೆಯ 68,000 ಮಂದಿಗೆ ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ನೀಡಲಾಗಿದೆ ನಾವೆಲ್ಲ ಸೇರಿ ಮತ್ತೂಮ್ಮೆ ಮೋದಿ ಯವರನ್ನು ಪ್ರಧಾನಿಯನ್ನಾಗಿ ಮಾಡಬೇಕಾಗಿದೆ ಎಂದರು.
ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು, ಅಳದಂಗಡಿ ಹಾಲು ಉತ್ಪಾದಕ ಸ. ಸಂಘದ ಅಧ್ಯಕ್ಷ ಗಣೇಶ ದೇವಾಡಿಗ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಹಿತೇಶ್ ಕಾಪಿನಡ್ಕ ಹಾಗೂ ಮತ್ತಿತರರಿದ್ದರು. ಸಭೆಯ ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿ, ರಾಮಣ್ಣ ಸಾಲ್ಯಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ