ಬಿಜೆಪಿಗೆ ಸಚಿವ ಜಾರ್ಜ್‌ ರಾಜೀನಾಮೆ ಕೇಳುವ ನೈತಿಕತೆಯಿಲ್ಲ: ರೈ


Team Udayavani, Oct 31, 2017, 8:53 AM IST

31-2.jpg

ಮಂಗಳೂರು: ಡಿವೈಎಸ್‌ಪಿ ಗಣಪತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ವಿನಾ ಕಾರಣ ಸಚಿವ ಕೆ.ಜೆ. ಜಾರ್ಜ್‌ ಅವರ ರಾಜೀನಾಮೆ ಕೇಳುವ ಮೂಲಕ ಕಾಂಗ್ರೆಸ್‌ನ ನೈತಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಕೇಂದ್ರದ ಕೆಲವು ಸಚಿವರ ವಿರುದ್ಧವೂ ಎಫ್‌ಐಆರ್‌ ದಾಖಲಾದ್ದು, ಅವರು ಸಚಿವರ ಸ್ಥಾನದಲ್ಲಿ ಮುಂದುವರಿದಿರುವಾಗ ಬಿಜೆಪಿಗೆ ಜಾರ್ಜ್‌ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು, ಗಣಪತಿ ಸಾವಿನ ಕುರಿತು ಸಿಒಡಿ ತನಿಖೆಯ ವೇಳೆ ರಾಜೀನಾಮೆ ನೀಡಿದ್ದ ಜಾರ್ಜ್‌ ಅವರು, ತಪ್ಪಿತಸ್ಥರು ಅಲ್ಲ ಎಂದು ವರದಿ ಬಂದ ಬಳಿಕ ಮತ್ತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈಗ ಸಿಬಿಐ ಎಫ್‌ಐಆರ್‌ ದಾಖಲಿಸಿದ ತತ್‌ಕ್ಷಣ ರಾಜೀನಾಮೆ ಕೊಡಬೇಕೆಂದಿಲ್ಲ ಎಂದರು.

ಹಿಂದೆ ಸಿಬಿಐ ಮೇಲೆ ಬಿಜೆಪಿಗೆ ನಂಬಿಕೆ ಇರಲಿಲ್ಲ. ಈಗ ಕಾಂಗ್ರೆಸ್‌ ಸಚಿವರ ವಿರುದ್ಧ ಆದಾಯ ತೆರಿಗೆ ದಾಳಿಯಂತಹ ತಂತ್ರಗಾರಿಕೆ ಮೂಲಕ ಅಧಿಕಾರ ದುರುಪಯೋಗ ಮಾಡುತ್ತಿದೆ. ಬಳ್ಳಾರಿಯಲ್ಲಿ  ಶೇ. 60 ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ್ದ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳನ್ನು ಈಗ ಸಡಿಲಿಕೆ ಮಾಡಲಾಗಿದೆ. ಈ ಕುರಿತು ಬುದ್ಧಿವಂತ ಜನತೆ ತಿಳಿದುಕೊಳ್ಳಬೇಕು ಎಂದು ರೈ ಹೇಳಿದರು.

ಬಿಜೆಪಿಯಿಂದ ಸಾವಿರ ಸುಳ್ಳು
ಪ್ರಸ್ತುತ ಜಿಎಸ್‌ಟಿ ಜಾರಿಯಲ್ಲಿ ತೊಂದರೆ ಇದೆ ಎಂದು ತಿಳಿದಾಗ ಅದರಲ್ಲಿ ಕಾಂಗ್ರೆಸ್‌ನ ಪಾತ್ರವೂ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಹಿಂದೆ ಕಾಂಗ್ರೆಸ್‌ ಜಿಎಸ್‌ಟಿ ಯಲ್ಲಿ ಶೇ. 18 ತೆರಿಗೆ ವಿಧಿಸಲು ನಿರ್ಧರಿಸಿದ್ದು, ಪ್ರಸ್ತುತ ಅದನ್ನು ಶೇ. 28ಕ್ಕೆ ಏರಿಸಲಾಗಿದೆ. ಪ್ರಜಾತಾಂತ್ರಿಕ ವ್ಯವಸ್ಥೆ ಮೂಲಕ ಗೆಲ್ಲಲು ಸಾಧ್ಯವಾಗದ ಬಿಜೆಪಿ ಪ್ರಸ್ತುತ ಸಾವಿರ ಸುಳ್ಳು ಹೇಳಿ ಪಕ್ಷ ಕಟ್ಟುವ ಪ್ರಯತ್ನ ಮಾಡುತ್ತಿದೆ.

ಕಲ್ಲಡ್ಕದ ಶಾಲೆಯು ಅನುದಾನಿತ ಶಾಲೆಯಾಗಿದ್ದು, ಅದಕ್ಕೆ ಬಿಸಿಯೂಟ ಯೋಜನೆ ನೀಡಲು ಅವಕಾಶವಿದೆ. ದೇವಸ್ಥಾನದ ಪರಿಸರದ ಶಾಲೆಗಳಿಗೆ ಊಟ ನೀಡು ವುದು ಸರಿಯಾದ ಕ್ರಮ. ಆದರೆ 150 ಕಿ.ಮೀ. ದೂರದ ದೇವಸ್ಥಾನದಿಂದ ಊಟಕ್ಕೆ ಅನುದಾನ ನೀಡು ವುದು ಅಧಿಕಾರದ ದುರುಪಯೋಗವಾಗಿದೆ. ಟಿಪ್ಪು ಜಯಂತಿ ಯಲ್ಲಿ ಭಾಗವಹಿಸಲು ಇಷ್ಟವಿಲ್ಲದವರು ದೂರ ನಿಲ್ಲಲಿ. ಅದನ್ನು ಬಿಟ್ಟು ಕೋಮು ಗಲಭೆಯನ್ನು ಸೃಷ್ಟಿಸದಿರಲಿ. ಈ ವೇಳೆ ಅಹಿತಕರ ಘಟನೆಗೆ ಕಾರಣವಾಗುವವರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ರೈ ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಪ್ರಮುಖರಾದ ಬಿ.ಎಚ್‌. ಖಾದರ್‌, ಪಿ.ವಿ. ಮೋಹನ್‌, ಶಶಿಧರ್‌ ಹೆಗ್ಡೆ, ಮಮತಾ ಗಟ್ಟಿ, ಪ್ರತಿಭಾ ಕುಳಾ, ಶ್ಯಾಲೆಟ್‌ ಪಿಂಟೊ, ಅಪ್ಪಿ, ಆರ್‌.ಕೆ. ಪೃಥ್ವಿರಾಜ್‌, ವಿಶ್ವಾಸ್‌ ಕುಮಾರ್‌, ಪುರುಷೋತ್ತಮ ಚಿತ್ರಾಪುರ, ಸಂತೋಷ್‌ ಕುಮಾರ್‌ ಶೆಟ್ಟಿ, ಸಲೀಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.