Mangaluru ಕರಸೇವಕರ ಬಂಧನ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ


Team Udayavani, Jan 3, 2024, 5:09 PM IST

Mangaluru ಕರಸೇವಕರ ಬಂಧನ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮಂಗಳೂರು: ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕರಸೇವಕ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಸುದೀರ್ಘ‌ ಕಾಲದ ತನ್ನ ದ್ವೇಷ ಭಾವನೆಯನ್ನು ಹೊರಗೆ ಹಾಕಿದೆ.

ಸರಕಾರಕ್ಕೆ ತಾಕತ್ತಿದ್ದರೆ ರಾಜ್ಯದಲ್ಲಿರುವ ಎಲ್ಲ ಕರಸೇವಕರ ಕೇಸ್‌ಗಳನ್ನು ಮರು ತನಿಖೆ ನಡೆಸಿ ಬಂಧಿಸಲಿ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದ್ದಾರೆ.

ಕರಸೇವಕರ ಬಂಧನ ಖಂಡಿಸಿ ಬುಧವಾರ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜ ದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೂ ಗಳನ್ನು ಇಷ್ಟು ತುತ್ಛವಾಗಿ ಕಾಣುವ ಮುಖ್ಯಮಂತ್ರಿ ಬೇರೆ ಯಾರೂ ಇಲ್ಲ. ಪಿಎಫ್‌ಐ ಕಾರ್ಯರ್ತರು ದೇಶ ದ್ರೋಹಿಗಳಲ್ಲ ಎಂದು ಸಿದ್ದರಾಮಯ್ಯ ತಾವೇ ನಿರ್ಧರಿಸಿ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಿಸಿ ದವನು ಅಮಾಯಕ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದರು.
ಅಯೋಧ್ಯೆ ವಿಚಾರವಾಗಿ ಕಾಂಗ್ರೆಸ್‌ನವರು ಹಲವು ರಾಜ್ಯ ಸರಕಾರಗಳನ್ನೇ ಬರ್ಖಾಸ್ತು ಮಾಡಿದ್ದರು. ಹಿಂದೂಗಳು ರೊಚ್ಚಿಗೆದ್ದರೆ ಒಂದೇ ವಾರದಲ್ಲಿ ಸರಕಾರ ಬೀಳುತ್ತದೆ. ಸರಕಾರ ಹಿಂದೂಗಳ ನಂಬಿಕೆ ಹೊಸಕಿ ಹಾಕುವ, ಕೆಣಕುವ ಪ್ರಯತ್ನ ಕೈಬಿಡಬೇಕು ಎಂದರು.

ಕಾಂಗ್ರೆಸ್‌ ಸಣ್ಣತನ
ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮಾತನಾಡಿ, ಇಡೀ ದೇಶ ರಾಮಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠೆಯ ಸಂಭ್ರಮದ ಸಂದರ್ಭದಲ್ಲಿದೆ. ಆದರೆ ರಾಜ್ಯ ಸರಕಾರ ಹಿಂದಿನ ಪ್ರಕರಣಗಳನ್ನು ಕೆದಕುವ ಸಣ್ಣತನ ತೋರಿಸುತ್ತಿದೆ. ಇದು ಸಿದ್ದರಾಮಯ್ಯನವರ ತುಷ್ಟೀಕರಣ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಸಾಕ್ಷಿ ಎಂದರು.

ವಾರಂಟ್‌ ಇಲ್ಲದೆ ಬಂಧನ
ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್‌ ಶೇಣವ ಮಾತನಾಡಿ, ಪೊಲೀಸರು ಬಂಧಿ ಸಿರುವ ಹಿಂದೂ ಕಾರ್ಯಕರ್ತ ಶ್ರೀಕಾಂತ  ಪೂಜಾರಿ ಹುಬ್ಬಳ್ಳಿಯಲ್ಲಿಯೇ ಆಟೋ ರಿûಾ ಓಡಿಸುತ್ತಿದ್ದರು. ಅವರು ಎಲ್ಲಿಗೂ ಓಡಿ ಹೋಗಿಲ್ಲ. ವಾರಂಟ್‌ ನೀಡದೆ ಪೊಲೀಸರು ಮಾರು ವೇಷದಲ್ಲಿ ಬಂದು ಬಾಡಿಗೆ ಹೆಸರಿನಲ್ಲಿ ಶ್ರೀಕಾಂತ್‌ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ಬಂಧನಕ್ಕೊಳಪಡಿಸಿದ್ದಾರೆ. ಶ್ರೀರಾಮನ ವಿಚಾರದಲ್ಲಿ ತೊಂದರೆ ನೀಡಿದರೆ ಕಾಂಗ್ರೆಸ್‌ ನಿರ್ನಾಮ ವಾಗಲಿದೆ ಎಂದು ಹೇಳಿದರು.

ರಾಮ ಅಲ್ಲ, ರಾವಣ
ಮಂಗಳೂರು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಮಾತನಾಡಿ, ಸಿದ್ದರಾಮಯ್ಯ ಸರಕಾರ ಬಂದ ಮೇಲೆ ತುಷ್ಟೀಕರಣ ನಡೆಯುತ್ತಿದೆ. ಬಹುಸಂಖ್ಯಾಕ ಹಿಂದೂಗಳ ಮೇಲೆ ದಮನ ನೀತಿ ಅನುಸರಿಸುತ್ತಿದೆ. ಇದೀಗ ರಾಮಮಂದಿರ ಕರಸೇವಕರನ್ನು ಬಂ ಧಿಸುವ ಹೇಯ ಕೃತ್ಯ ನಡೆಸಿದೆ. ಮಂಗಳೂರಿನಲ್ಲಿಯೂ ಹಿಂದೂ ಕಾರ್ಯಕರ್ತರು, ನಾಯಕರ ಮೇಲೆ ಕೇಸು ಹಾಕಲಾಗುತ್ತಿದೆ. ಗಡೀಪಾರು ಮಾಡಲಾಗುತ್ತಿದೆ. ಸಿದ್ದರಾಮಯ್ಯ ಹೆಸರಿನಲ್ಲಿರುವ ರಾಮಯ್ಯ ನಮ್ಮ ರಾಮ ಅಲ್ಲ, ಅದು ರಾವಣ ಎಂದು ಹೇಳಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ರಾಜ್ಯ ಕಾರ್ಯದರ್ಶಿ ಕ್ಯಾ| ಬೃಜೇಶ್‌ ಚೌಟ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.