‘ಬಿಜೆಪಿಯ ಲಸಿಕೆ’ಯೆಂದು ಟೀಕೆ ಮಾಡಿದವರೇ ಈಗ ಲಸಿಕೆ ಸಿಗುತ್ತಿಲ್ಲವೆನ್ನುತ್ತಿದ್ದಾರೆ: ಕಟೀಲ್
ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ
Team Udayavani, May 14, 2021, 2:27 PM IST
ಮಂಗಳೂರು : ಇದು ರಾಜಕೀಯ ಮಾಡುವ ಕಾಲವಲ್ಲ, ಒಟ್ಟಾಗಿ ಕೆಲಸ ಮಾಡುವ ಸಮಯ. ಇವತ್ತು ಟೀಕೆ ಮಾಡುವವರು ಮೊದಲು ಯೋಚನೆ ಮಾಡಬೇಕು. ದೇಶದಲ್ಲಿ ಕೋವಿಡ್ ಲಸಿಕೆ ಕೊಡಲು ಎರಡು ಘಟಕಗಳು ಕೆಲಸ ಮಾಡುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಕಟೀಲ್, ಈಗಾಗಲೇ ಹತ್ತೊಂಬತ್ತು ಕೋಟಿ ಲಸಿಕೆ ಕೊಡುವ ಕೆಲಸ ಆಗಿದೆ. ಆದರೆ ಆರಂಭದಲ್ಲಿ ಬಹಳಷ್ಟು ಜನರು ಇದು ಬಿಜೆಪಿಯ ಲಸಿಕೆ ಎಂದು ಟೀಕೆ ಮಾಡಿದವರೇ ಈಗ ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕ್ತಿದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಶೀರೂರು ಮಠಕ್ಕೆ ನೂತನ ಪೀಠಾಧಿಪತಿಯಾಗಿ ವೇದವರ್ಧನ ತೀರ್ಥರು ನೇಮಕ
ಜನರ ದಾರಿ ತಪ್ಪಿಸುವ ಕೆಲಸ ಮಾಡಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡಿದರು. ಕೋವಿಡ್ ಲಸಿಕೆ ಬಗ್ಗೆ ಅನುಮಾನ ಪಡುವ ಕೆಲಸ ಮಾಡಿ ಜನರ ದಾರಿ ತಪ್ಪಿಸಿದರು. ಅಂದು ನಂಬಿಕೆ ಇರಲಿಲ್ಲ, ಆದರೆ ಇಂದು ಲಸಿಕೆ ಇಲ್ಲ ಅಂತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ನನ್ನು ದೂರಿದ್ದಾರೆ.
ಇನ್ನು, ಜನರ ದಾರಿ ತಪ್ಪಿಸಿದ ಕಾರಣಕ್ಕೆ ಜನರು ಲಸಿಕೆ ತೆಗೆದುಕೊಂಡಿಲ್ಲ. ರಾತ್ರಿ ಹಗಲು ಎಷ್ಟೋ ಜನರು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಮಾಡುವ ಕೆಲಸಗಳನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ. ರಾಜಕಾರಣ ಮಾಡುವ ಬದಲು ಜನರಿಗೆ ಆತ್ಮವಿಶ್ವಾಸ ತುಂಬಿ. ರಾಜಕಾರಣ ಬಿಟ್ಟು ಕರ್ತವ್ಯ ಮಾಡುವ ಕಾಲಘಟ್ಟ ಮತ್ತು ಅನಿವಾರ್ಯತೆಯಲ್ಲಿ ನಾವಿದ್ದೇವೆ. ಸರ್ಕಾರದದಲ್ಲಿ ವ್ಯತ್ಯಾಸಗಳಾದಾಗ ಟೀಕೆಯ ಬದಲು ಸಲಹೆ ನೀಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬಾಲಗಂಗಾಧರನಾಥ ಸ್ವಾಮೀಜಿ ಕಂಚಿನ ಪ್ರತಿಮೆ ಅನಾವರಣ ಮಾಡಿದ ವಿ ಸೋಮಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ