ಬಿಜೆಪಿಗೆ ಅಚ್ಚರಿ; ಕಾಂಗ್ರೆಸ್‌ಗೆ ಅಂತರದ ಆಘಾತ


Team Udayavani, May 25, 2019, 6:00 AM IST

w-18

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯ ಗೆಲುವಿನ ಅಂತರವು ಬಿಜೆಪಿಗೆ ಅಚ್ಚರಿ ತಂದಿದ್ದರೆ, ಕಾಂಗ್ರೆಸ್‌ಗೆ ಆಘಾತ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ನಳಿನ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ವಿರುದ್ಧ ಪಡೆದಿರುವ 2,72,621 ಮತಗಳ ಅಂತರದ ಜಯವು ಬಿಜೆಪಿ ಮಾತ್ರವಲ್ಲ, ರಾಜಕೀಯ ವಿಶ್ಲೇಷಕರ ವಿಶ್ಲೇಷಣೆಗೂ ಮೀರಿದ ಫಲಿತಾಂಶ ಎನ್ನಬಹುದು.

ನಳಿನ್‌ ಇಷ್ಟು ಅಂತರದ ಜಯ ಗಳಿಸಬಹುದು ಎಂಬುದನ್ನು ಬಿಜೆಪಿಯೇ ನಿರೀಕ್ಷಿಸಿರಲಿಲ್ಲ. ಅದು 2 ಲಕ್ಷದೊಳಗೆ ಇರಬಹುದು ಎಂಬುದು ಪಕ್ಷದ ಆಂತರಿಕ ಸಮೀಕ್ಷೆಯಾಗಿತ್ತು. ಬಿಜೆಪಿ ನಾಯಕರು ಪ್ರಚಾರ ಸಭೆಗಳಲ್ಲಿ, ಪತ್ರಿಕಾಗೋಷ್ಠಿಗಳಲ್ಲಿ ಈ ಬಾರಿ ನಳಿನ್‌ ಸುಮಾರು 2 ಲಕ್ಷ ಮತಗಳ ಅಂತರದಿಂದ ಜಯ ಗಳಿಸುತ್ತಾರೆ ಎಂದು ಹೇಳು ತ್ತಿದ್ದರೂ ಆಂತರಿಕ ವಲಯದಲ್ಲಿ ಒಂದರಿಂದ ಒಂದೂವರೆ ಲಕ್ಷ ಮತಗಳ ಒಳಗಿರಬಹುದು ಎನ್ನುವ ಅಭಿಪ್ರಾಯವಿತ್ತು.

ಕ್ಷೇತ್ರದಲ್ಲಿ ಹೆಚ್ಚಿದ ಮತದಾನ ಮತ್ತು ಟ್ರೆಂಡ್‌ಗಳನ್ನು ಆಧರಿಸಿ ವಿಶ್ಲೇಷಣೆಗಳು ನಡೆದಿದ್ದವು. ಸುಳ್ಯ ಮತ್ತು ಪುತ್ತೂರು ಈ ಬಾರಿಯೂ ಬಿಜೆಪಿಗೆ ಅತ್ಯಧಿಕ ಮುನ್ನಡೆ ಒದಗಿಸಬಹುದು ಎಂದು ಬಿಜೆಪಿ ಲೆಕ್ಕಾಚಾರ ಹಾಕಿತ್ತು. ಈ ನಿರೀಕ್ಷೆ ನಿಜವಾಗಿ, ಸುಳ್ಯ ಅತ್ಯಧಿಕ 47,159 ಮತಗಳ ಮುನ್ನಡೆ ನೀಡಿದೆ.

ಬೆಳ್ತಂಗಡಿಯಲ್ಲಿ 44,760, ಮಂ. ಉತ್ತರದಲ್ಲಿ 46,088 ಮತಗಳ ಮುನ್ನಡೆ ಲಭಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂ. ದಕ್ಷಿಣದಲ್ಲಿ ಕಾಂಗ್ರೆಸ್‌ ವಿರುದ್ಧ 16,075 ಅಂತರದಿಂದ ಜಯ ಗಳಿಸಿದ್ದ ಬಿಜೆಪಿ ಈ ಬಾರಿ 20,000 ಮುನ್ನಡೆ ಒದಗಿಸುವ ಗುರಿ ಹೊಂದಿತ್ತು. ಆದರೆ ಮುನ್ನಡೆ ಪ್ರಮಾಣ ದ್ವಿಗುಣಗೊಂಡಿದ್ದು 32,835 ಆಗಿದೆ. ಬಂಟ್ವಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜಯದ ಅಂತರ 15,971 ಆಗಿತ್ತು. ಆದರೆ ಈ ಬಾರಿ ಇಲ್ಲೂ ಬಿಜೆಪಿಯ ಮುನ್ನಡೆ ಎರಡು ಪಟ್ಟು ಆಗಿದ್ದು, ಲೀಡ್‌ 32,063 ಮತಗಳು. ಮೂಡುಬಿದಿರೆಯಲ್ಲೂ ಏರಿಕೆಯಾಗಿದ್ದು, 37,255 ಮತಗಳ ಲೀಡ್‌ ದೊರಕಿದೆ.

ಕಾಂಗ್ರೆಸ್‌ಗೆ ಆಘಾತ
ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ತಂತ್ರಗಳನ್ನು ರೂಪಿಸಿದ್ದ ಕಾಂಗ್ರೆಸ್‌ಗೆ ಫಲಿತಾಂಶ ಆಘಾತ ತಂದಿದೆ. ಬಿಜೆಪಿಗೆ ಮುನ್ನಡೆ ಒದಗಿಸುತ್ತಿರುವ ಪುತ್ತೂರು, ಸುಳ್ಯಗಳನ್ನು ಅದು ಹೆಚ್ಚು ಕೇಂದ್ರೀಕರಿಸಿತ್ತು. ಒಕ್ಕಲಿಗ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಡಿಕೆಶಿ ಮತ್ತು ಸಿಎಂಕುಮಾರಸ್ವಾಮಿ ಅವರನ್ನು ಕರೆಸಿತ್ತು.

ಬಿಜೆಪಿ ಅಭ್ಯರ್ಥಿ ವಿರುದ್ಧ ವ್ಯಕ್ತವಾಗುತ್ತಿದ್ದ ಅಸಮಾಧಾನ ತನ್ನ ಮತಗಳಾಗಿ ಪರಿವರ್ತನೆಯಾಗು ತ್ತವೆ ಎಂಬ ಲೆಕ್ಕಾಚಾರವೂ ಕಾಂಗ್ರೆಸ್‌ನಲ್ಲಿತ್ತು. ಸುಳ್ಯ, ಪುತ್ತೂರು ಭಾಗಗಳಲ್ಲಿ ಹೆಚ್ಚಿನ ಮತ ಗಳಿಸಿ ಬಿಜೆಪಿ ಲೀಡ್‌ ಕಡಿಮೆ ಮಾಡುವುದು ಮತ್ತು ಮಂಗಳೂರು, ಮಂ. ದಕ್ಷಿಣ ಮತ್ತು ಉತ್ತರಗಳಲ್ಲಿ ಇದನ್ನು ಸರಿದೂಗಿಸಿ ಮುನ್ನಡೆಯುವುದು ಅದರ ತಂತ್ರವಾಗಿತ್ತು. ಆದರೆ ಸುಳ್ಯ,ಪುತ್ತೂರು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಣನೀಯವಾಗಿ ವೃದ್ಧಿಸುವುದರ ಜತೆಗೆ ಇತರ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ನಿರೀಕ್ಷಿತ ಮತ ಬಂದಿಲ್ಲ. ಹೆಚ್ಚು ನಿರೀಕ್ಷೆ ಇದ್ದ ಮಂಗಳೂರು ಕ್ಷೇತ್ರದಲ್ಲೂ ಮುನ್ನಡೆಯಲ್ಲಿ ಇಳಿಕೆ ಆಗಿದೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.