ನಿರಂಕುಶಾಧಿಪತ್ಯ ಸಾಬೀತು : ಬಿ.ಕೆ. ಹರಿಪ್ರಸಾದ್
Team Udayavani, Mar 26, 2023, 7:25 AM IST
ಮಂಗಳೂರು: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ರೀತಿಯಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯು ನಿರಂಕುಶಾಧಿಪತ್ಯದ ದಾರಿಯಲ್ಲಿ ಸಾಗುತ್ತಿರುವುದು ಸಾಬೀತಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಮೇಲ್ಮನವಿಗೆ 30 ದಿನಗಳ ಕಾಲಾವಕಾಶ ನೀಡಿದೆ. ಆದರೆ ಆದೇಶ ಪ್ರಕಟಿಸಿದ ಒಂದೇ ದಿನದಲ್ಲಿ ಈ ರೀತಿಯ ಸೇಡಿನ ರಾಜಕೀಯ ಮಾಡಿರುವುದು ರಾಹುಲ್ ಗಾಂಧಿ ಕುರಿತಾದ ಭಯವನ್ನು ಸಾಬೀತು ಪಡಿಸಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇದರ ಬಗ್ಗೆ ಕಾಂಗ್ರೆಸ್ ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಧ್ವನಿ ಎತ್ತಲಿದೆ ಎಂದರು.
ರಾಹುಲ್ ಗಾಂಧಿ ಮೇಲಿನದ್ದು ಭ್ರಷ್ಟಾಚಾರ ಆರೋಪ ಅಲ್ಲ. ಗುಜರಾತ್ನಲ್ಲಿ ಬಿಲ್ಕಿàಸ್ ಬಾನು ಪ್ರಕರಣದಲ್ಲಿ ಯಾವ ರೀತಿ ನ್ಯಾಯ ದೊರಕಿದೆ ಎಂಬುದು ಎಲ್ಲರಿಗೂ ಅರಿವಿದೆ. ಸೌಹಾರ್ದವನ್ನು ಕೆಡಿಸುವ ಹೇಳಿಕೆ ನೀಡಿದಾಗ, ನರಮೇಧಕ್ಕೆ ಕರೆ ಕೊಟ್ಟವರ ಬಗ್ಗೆ ಸ್ವಯಂಪ್ರೇರಿತವಾಗಿ ಕ್ರಮ ಕೈಗೊಳ್ಳಬೇಕಾದ ಸರಕಾರ ಏನೂ ಮಾಡಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.
2 ಬಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡುವ ರಾಜ್ಯ ಸರಕಾರದ ನಿರ್ಣಯದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ಸಂಪೂರ್ಣ ಮೀಸಲಾತಿಯನ್ನೇ ರದ್ದುಗೊಳಿಸುವ ಹುನ್ನಾರ ಎಂದರು.
ದ.ಕ.ದ 8 ಸ್ಥಾನಗಳಲ್ಲಿ 3 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಯಲ್ಲಿ ಪಕ್ಷದಲ್ಲಿ ಕಗ್ಗಂಟು ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗೋಷ್ಠಿಯಲ್ಲಿ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ| ಮಂಜುನಾಥ ಭಂಡಾರಿ, ಮುಖಂಡರಾದ ಶಶಿಧರ ಹೆಗ್ಡೆ, ಜೆ.ಆರ್. ಲೋಬೋ, ಸಂತೋಷ್ ಕುಮಾರ್, ಇಬ್ರಾಹಿಂ ಕೋಡಿಜಾಲ್, ಲಾರೆನ್ಸ್, ಅನ್ವಿತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್