ಸಂಚಾರ ವ್ಯವಸ್ಥೆ ಸುಧಾರಣೆಗೆ ನೀಲ ನಕ್ಷೆ  ಸಿದ್ಧ 


Team Udayavani, Jun 11, 2018, 11:22 AM IST

11-june-6.jpg

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭ 2018 ಎಪ್ರಿಲ್‌ 18ರಂದು ಮಂಗಳೂರು ನಗರದ ಪೊಲೀಸ್‌ ಆಯುಕ್ತರಾಗಿ ವಿಪುಲ್‌ ಕುಮಾರ್‌ ಅವರು ಅಧಿಕಾರ ಸ್ವೀಕರಿಸಿದ್ದು, ಇದೇ ಜೂ. 8ರಂದು ವರ್ಗಾವಣೆ ಆದೇಶ ಬಂದಿದೆ. 51 ದಿನಗಳ ಅಲ್ಪಾವಧಿಯಲ್ಲಿ ನಗರಕ್ಕೆ ಅವರು ಅತ್ಯಮೂಲ್ಯ ಸೇವೆ ಸಲ್ಲಿಸಿದ್ದಾರೆ. ವಿಶೇಷವಾಗಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಬಗ್ಗೆ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ ನೀಲ ನಕ್ಷೆಯನ್ನು ತಯಾರಿಸಿದ್ದಾರೆ. ಜತೆಗೆ ಅಪರಾಧ ಕೃತ್ಯಗಳಿಗೆ ಅಂತ್ಯ ಹಾಡುವ ಉದ್ದೇಶದಿಂದ ದುಷ್ಕೃತ್ಯ ಎಸಗುವವರ ಪಟ್ಟಿಯೊಂದನ್ನು ತಯಾರಿಸಲು ಸಿದ್ಧತೆ ನಡೆಸಿದ್ದರು. ಜತೆಗೆ ಅಕ್ರಮ ಮರಳು ಸಾಗಾಟಗಾರರ ವಿರುದ್ಧ ಕಠಿನ ಕ್ರಮ ಜರಗಿಸಲು ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಅನುಭವವನ್ನು ಉದಯವಾಣಿ ಸುದಿನ ನಡೆಸಿದ ಸಂದರ್ಶನದಲ್ಲಿ ಹಿಲರಿ ಕ್ರಾಸ್ತಾ ಜತೆ ಹಂಚಿಕೊಂಡಿದ್ದಾರೆ. 

 ಮಂಗಳೂರಿನ ಬಗ್ಗೆ ನೀವು ಏನು ಹೇಳುತ್ತೀರಿ?
ಮಂಗಳೂರು ಒಂದು ಫೆಂಟಾಸ್ಟಿಕ್‌ ಸಿಟಿ. ಹೊರಗಿನವರಿಗೆ ಇದು ಕೋಮು ಪ್ರದೇಶ ಎಂಬ ನೆಗೆಟಿವ್‌ ಇಮೇಜ್‌ ಇದೆ. ಅದರಲ್ಲಿ ಸತ್ಯಾಂಶವಿಲ್ಲ. ಇಲ್ಲಿನ ಜನರು ಕಾನೂನು ಪಾಲಕರು. ಇಲ್ಲಿ ಎಲ್ಲ ಸಮುದಾಯದವರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಚುನಾವಣೆ ಶಾಂತಿಯುತವಾಗಿ ನಡೆದಿರುವುದು ಮತ್ತು ಇತ್ತೀಚಿನ ಮಹಾ ಮಳೆಯ ಸಂದರ್ಭ ರಕ್ಷಣಾ ಕಾರ್ಯಕ್ಕೆ ಎಲ್ಲ ಸಮುದಾಯವರು ಒಟ್ಟಾಗಿ ಪರಸ್ಪರ ಸಹಾಯ ಹಸ್ತ ಚಾಚಿರುವುದು ಇದಕ್ಕೆ ನಿದರ್ಶನ.

ಆಗಿಂದಾಗ್ಗೆ ಕೆಲವೊಂದು ಘಟನೆಗಳು ನಡೆಯತ್ತಿವೆಯಲ್ಲವೇ?
ಕೆಲವೊಂದು ಅಹಿತಕರ ಘಟನೆಗಳು ನಡೆಯುತ್ತವೆ ನಿಜ. ಆದರೆ ಅದಕ್ಕೆ ಯಾವುದೇ ಬಣ್ಣ ನೀಡಬಾರದು. ಇದರಿಂದ ಸಮಸ್ಯೆ ಉಂಟಾಗುತ್ತದೆ. 

ಪೊಲೀಸರ ಕ್ರಮ ಹೇಗಿರಬೇಕು?
ಕಾನೂನು ಮೀರಿದವರ ವಿರುದ್ಧ ಕಠಿನ ಕ್ರಮ ಜರಗಿಸಬೇಕು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಸಂದೇಶ ಬಿತ್ತರಿಸಿದವರ ಮೇಲೆ ಕಠಿನ ಕ್ರಮ ಜರಗಿಸಲಾಗಿದೆ. ಇದನ್ನು ಜನರು ಗುರುತಿಸಿದ್ದು, ಪೊಲೀಸರನ್ನು ಅಭಿನಂದಿಸಿದ್ದಾರೆ. ಇದರಿಂದಾಗಿ ಜನರಲ್ಲಿ ಜಾಗೃತಿ ಉಂಟಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು. ಸಕಾಲದಲ್ಲಿ, ಸೂಕ್ತ ಕ್ರಮ ಕೈಗೊಂಡರೆ ಸಂಘರ್ಷವನ್ನು ತಡೆಯಬಹುದು.

ಪೊಲೀಸರಿಗೆ ಇಲ್ಲಿರುವ ಸವಾಲುಗಳೇನು?
ಇದು ಗಡಿ ಪ್ರದೇಶ. ಕರ್ನಾಟಕ ಮತ್ತು ಕೇರಳದ ಕ್ರಿಮಿನಲ್‌ಗ‌ಳು ಆಚೀಚೆ ಹೋಗುತ್ತಿರುತ್ತಾರೆ. ಈ ಬಗ್ಗೆ ಹೆಚ್ಚು
ಗಮನ ಹರಿಸಬೇಕು. ಇದಕ್ಕಾಗಿ ಸಿ.ಸಿ. ಟಿವಿಗಳ ಸಂಖ್ಯೆ ಹೆಚಿಸಬೇಕಿದೆ. 

ಫೋನ್‌ ಇನ್‌ ಕಾರ್ಯಕ್ರಮದ ಬಗ್ಗೆ ನಿಮ್ಮ ಅಭಿಪ್ರಾಯ
ನಾನು ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಆ ವೇಳೆ ಬಂದ ಕರೆಗಳನ್ನು ಆಧರಿಸಿ ನಗರಾದ್ಯಂತ ಸಂಚರಿಸಿ ಸಮಸ್ಯೆಗಳನ್ನು ಅರ್ಥೈಸಿ ಕೊಂಡು ಸ್ಪಂದಿಸಲು ಯತ್ನಿಸಿದ್ದೇವೆ. ಈಗಾಗಲೇ ಹಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗಿದೆ. ಜನರಿಗೆ ಉತ್ತರ ಕೊಡಲು ಸಿದ್ಧರಾಗಿದ್ದೇವೆ.

ನಗರದ ಟ್ರಾಫಿಕ್‌ ಸಮಸ್ಯೆ ಬಗ್ಗೆ ನಿಮ್ಮ ಅಭಿಪ್ರಾಯ.
ನಗರದ ಸಂಚಾರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮೂರು ದಿನಗಳ ಹಿಂದೆ ಮಹಾನಗರ ಪಾಲಿಕೆ, ಟ್ರಾಫಿಕ್‌ ಪೊಲೀಸ್‌, ಲೋಕೋಪಯೋಗಿ ಇಲಾಖೆ, ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮುಡಾ ಮತ್ತು ಇತರ ಇಲಾಖೆಗಳ ಸಮನ್ವಯ ಸಭೆಯನ್ನು ನಡೆಸಲಾಗಿದೆ. ವಾಹನ ದಟ್ಟಣೆ, ಪಾರ್ಕಿಂಗ್‌ ಸಮಸ್ಯೆ, ಫುಟ್‌ಪಾತ್‌ ಅತಿಕ್ರಿಮಣ, ಸಿಗ್ನಲ್‌ ಲೈಟ್‌ ಸಮಸ್ಯೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗಿದೆ. ನೀಲ ನಕ್ಷೆಯನ್ನು ತಯಾರಿಸಿ ಕಾಲಮಿತಿಯಲ್ಲಿ ಅನುಷ್ಠಾನಿಸಲು ಸೂಚಿಸಲಾಗಿದೆ.

ಮಂಗಳೂರಿನ ಜನರಿಗೆ ನೀಡುವ ಸಂದೇಶ ಏನು?
ಪೊಲೀಸ್‌ ಇಲಾಖೆಯಲ್ಲಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಂದಿ ಬಹಳಷ್ಟು ಕಡಿಮೆ ಇದ್ದಾರೆ. ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ಸಲ್ಲಿಸುವುದು ಒಂದು ಸಮಾಜ ಸೇವೆ ಎಂದು ಪರಿಗಣಿಸಿ ದಕ್ಷಿಣ ಕನ್ನಡದ ಯುವಜನರು ಇಲಾಖೆಗೆ ಸೇರ್ಪಡೆಗೊಳ್ಳಲು ಮುಂದೆ ಬರಬೇಕು. ಪೊಲೀಸರು ಮತ್ತು ಜನರು ಒಂದೇ ನಾಣ್ಯದ ಎರಡು ಮುಖಗಳು. ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು. ಜನರು ಕೆಟ್ಟದ್ದನ್ನು ಹುಡುಕಿ ಪೊಲೀಸರಿಗೆ ತಿಳಿಸಬೇಕು. ಹಾಗೆಯೇ ಪೊಲೀಸರು ಎಡವಿದಾಗ ಅದನ್ನೂ ತೋರಿಸಬೇಕು. ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿ ಇತ್ತೀಚೆಗೆ ಕರ್ತವ್ಯ ಲೋಪ ಎಸಗಿದ 3 ಪೊಲೀಸರ ವಿರುದ್ಧ ಕ್ರಮ ಜರಗಿಸಿರುವುದು ಅವರು ಕೂಡ ಎಡವಿದರೆ ಕ್ರಮ ಜರಗಿಸಲಾಗುತ್ತದೆ ಎನ್ನುವುದಕ್ಕೆ ಉದಾಹರಣೆ. 

ಮಾಹಿತಿ ಕಲೆ
ಗೋಕಳ್ಳರು, ಕಮ್ಯೂನಲ್‌ ಮತ್ತು ಇತರ ಗೂಂಡಾಗಳು, ನೈತಿಕ ಪೊಲೀಸ್‌ಗಿರಿ, ಕೋಮು ದ್ವೇಷ ಹರಡುವವರ ಮಾಹಿತಿ ಕಲೆ ಹಾಕಲು ಸಿದ್ಧತೆ ನಡೆಸಲಾಗಿದೆ. ಸಿದ್ಧ ಮಾಹಿತಿ ಇದ್ದರೆ ಸಕಾಲದಲ್ಲಿ ಸೂಕ್ತ ಕ್ರಮ ಜರಗಿಸಲು ಸಾಧ್ಯವಾಗುತ್ತದೆ. 
– ವಿಪುಲ್‌ ಕುಮಾರ್‌
  ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.