ಮೀನುಗಾರರಿಗೆ ಇಸ್ರೋ ರಕ್ಷೆ !

ಬರಲಿದೆ ದೋಣಿ ಅಪಘಾತ ಮಾಹಿತಿ ಸಾಧನ

Team Udayavani, Sep 20, 2019, 5:02 AM IST

t-49

ಮಂಗಳೂರು: ಆಳಸಮುದ್ರದಲ್ಲಿ ಬೋಟ್‌ ನಾಪತ್ತೆ, ಅವಘಡಗಳನ್ನು ತಡೆಯಲು, ಸಂಭವಿಸಿದರೂ ಕ್ಷಿಪ್ರ ರಕ್ಷಣೆಗೆ ಅನುಕೂಲ ಮಾಡಿಕೊಡುವ ಸಂವಹನ ಸಾಧನವೊಂದನ್ನು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ರೂಪಿಸುತ್ತಿದೆ.

ಮಲ್ಪೆಯ ಸುವರ್ಣ ತ್ರಿಭುಜ ಬೋಟ್‌ ನಾಪತ್ತೆ ಪ್ರಕರಣ ದೇಶವ್ಯಾಪಿ ಸಂಚಲನ ಮೂಡಿಸಿತ್ತು. ಭವಿಷ್ಯದಲ್ಲಿ ಇಂತಹ ದುರ್ಘ‌ಟನೆಗಳನ್ನು ತಡೆಯಲೇಬೇಕು ಎಂದು ತೀರ್ಮಾನಿಸಿರುವ ಮೀನುಗಾರಿಕೆ ಇಲಾಖೆ ಇಂತಹ ಉಪಕರಣವನ್ನು ತಯಾರಿಸಿಕೊಡುವಂತೆ ಇಸ್ರೋವನ್ನು ಕೇಳಿಕೊಂಡಿತ್ತು.

ಉಪಕರಣದ ಡೆಮೊ ನೋಡಲಾಗಿದೆ. ಈ ಬಗ್ಗೆ ಮೀನುಗಾರಿಕೆ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂಬುದಾಗಿ ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಸದ್ಯ ಟ್ರಾನ್ಸ್‌ಪಾಂಡರ್‌ ಕಡ್ಡಾಯ
ಆಳ ಸಮುದ್ರದಲ್ಲಿ ಅಪಾಯ ಸಂಭವಿಸಿದರೆ ರಕ್ಷಣೆಗೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಬೋಟ್‌ಗಳು ಕಡ್ಡಾಯವಾಗಿ ಎಐಎಸ್‌ ಟ್ರಾನ್ಸ್‌ಪಾಂಡರ್‌ ಅಳವಡಿಸಬೇಕು ಎಂದು ಮೀನುಗಾರಿಕೆ ಇಲಾಖೆ ಆದೇಶಿಸಿದೆ. ಬೋಟ್‌ಗೆ ಏನು ಸಮಸ್ಯೆ ಎದುರಾಗಿದೆ, ಅದು ಯಾವ ಸ್ಥಳದಲ್ಲಿದೆ ಎಂಬ ಮಾಹಿತಿ ಇದರಿಂದ ತಿಳಿಯುತ್ತದೆ. ಎಐಎಸ್‌ ಟ್ರಾನ್ಸ್‌ಪಾಂಡರ್‌ ಅಳವಡಿಸಿ, ಬಿಲ್‌ ತೋರಿಸಿದವರಿಗೆ ಮಾತ್ರ ಸಬ್ಸಿಡಿ ಡೀಸೆಲ್‌ ಪಾಸ್‌ಬುಕ್‌ ನೀಡುತ್ತಿದ್ದೇವೆ. ಹಾಗಾಗಿ ಹೆಚ್ಚಿನ ಬೋಟ್‌ಗಳು ಈ ಯಂತ್ರವನ್ನು ಅಳವಡಿಸಿವೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಇಸ್ರೋ ಸಾಧನವೇನು?
ಟ್ರಾನ್ಸ್‌ಪಾಂಡರ್‌ನಿಂದ ಅಪಾಯ ಸಂಭವಿಸಿದ ಬಳಿಕ ಮಾತ್ರ ಮಾಹಿತಿ ಪಡೆಯುವ ಅವಕಾಶವಿದೆ. ಆದರೆ ಬೋಟ್‌ ಅಪಾಯದಲ್ಲಿರುವ ಕ್ಷಣದಿಂದಲೇ ಮಾಹಿತಿ ಪಡೆಯಲು ಇಸ್ರೋದ ಸಾಧನ ನೆರವಾಗಲಿದೆ. ಮೀನುಗಾರರ ಜತೆಗೆ ನೇರ ಸಂಪರ್ಕ ಇದರಿಂದ ಸಾಧ್ಯವಾಗಲಿದೆ. ಸೂಚನೆ ಲಭಿಸಿದ ತತ್‌ಕ್ಷಣವೇ ಕಾರ್ಯಾಚರಣೆಗಿಳಿಯಲು ಇದು ಅನುಕೂಲ ಮಾಡಿಕೊಡುತ್ತದೆ.

ಇಮ್ಮುಖ ಸಂವಹನ ಸಾಧ್ಯ
ಸದ್ಯ ಇರುವ ಟ್ರಾನ್ಸ್‌ಪಾಂಡರ್‌ ಮೂಲಕ ಒಮ್ಮುಖ ಮಾಹಿತಿಯನ್ನಷ್ಟೇ ಪಡೆಯಲು ಸಾಧ್ಯ. ಅಂದರೆ ದೋಣಿಯಿಂದ ಅವಘಡ ನಡೆದಿದೆ, ಎಲ್ಲಿ ಎಂಬಿಷ್ಟೇ ಮಾಹಿತಿ ಕೋಸ್ಟ್‌ಗಾರ್ಡ್‌ ನಿಯಂತ್ರಣ ಕೊಠಡಿಗೆ ಸಿಗುತ್ತದೆ. ಇಲ್ಲಿಂದ ಹೆಚ್ಚುವರಿ ಮಾಹಿತಿಯನ್ನು ಕೇಳಿಪಡೆಯಲು ಅಸಾಧ್ಯ. ಆದರೆ ನೂತನ ಉಪಕರಣದಿಂದ ಇಮ್ಮುಖ ಸಂವಹನ ಸಾಧ್ಯವಾಗಬಲ್ಲುದು. ಹೀಗಾಗಿ ಹೆಚ್ಚುವರಿ ಮಾಹಿತಿ ಸಂಗ್ರಹಿಸಿ ನಿಖರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲು ಅನುಕೂಲ. ಇದು ಉಪಗ್ರಹ ಸಂಪರ್ಕ ಮೂಲಕ ಕಾರ್ಯಾಚರಿಸುತ್ತದೆ.

ಮೀನುಗಾರಿಕೆ ಸಚಿವರೊಂದಿಗೆ ಚರ್ಚೆ
ಪ್ರಸ್ತುತ ಇಸ್ರೋದೊಂದಿಗೆ ಎರಡು ಬಾರಿ ಸಭೆ ನಡೆಸಲಾಗಿದೆ. ನೂತನ ಸಂವಹನ ಉಪಕರಣದ ಪ್ರಾತ್ಯಕ್ಷಿಕೆ ನೀಡಿದ್ದಾರೆ. ಈ ಬಗ್ಗೆ ಮೀನುಗಾರಿಕೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇರಿಸಲಿದ್ದೇವೆ. ಎಲ್ಲವೂ ಸರಿ ಹೋದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಇದನ್ನು ವಿತರಿಸಲಿದ್ದೇವೆ.
 - ತಿಪ್ಪೇಸ್ವಾಮಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಮಂಗಳೂರು

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.