ಲಕ್ಷದ್ವೀಪದಲ್ಲಿ ಬೋಟು ಮುಳುಗಡೆ: 7 ಕಾರ್ಮಿಕರ ರಕ್ಷಣೆ
Team Udayavani, Jan 1, 2020, 11:24 PM IST
ಮಂಗಳೂರು: ಲಕ್ಷದ್ವೀಪಕ್ಕೆ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಾಟ ಮಾಡುತ್ತಿದ್ದ ಬೃಹತ್ ದೋಣಿಯೊಂದು ಲಕ್ಷದ್ವೀಪದ ಕಿಲ್ತಾನ್ ದ್ವೀಪದ ಬಳಿ ಭಾಗಶಃ ಮುಳುಗಡೆಯಾಗಿದ್ದು, ಎಲ್ಲ 7 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಆದರೆ ಅದರಲ್ಲಿರುವ ಲಕ್ಷಾಂತರ ರೂ. ಕಟ್ಟಡ ನಿರ್ಮಾಣ ಸಾಮಗ್ರಿಗಳು ನೀರು ಪಾಲಾಗುವ ಭೀತಿ ಎದುರಾಗಿದೆ.
ಲಕ್ಷದ್ವೀಪ ಮೂಲದ ಜಾಬಿರ್ ಅವರ “ಫೈಸಲ್ ಹುಸೈನ್’ ಹೆಸರಿನ ಬೋಟ್ ಸೋಮವಾರ ಬೆಳಗ್ಗೆ ಮಂಗಳೂರು ಹಳೆ ಬಂದರಿನಿಂದ 700 ಚೀಲ ಸಿಮೆಂಟ್, 400 ಬ್ಲಾಕ್ ಇಟ್ಟಿಗೆ, 1,000 ಚೀಲ ಜಲ್ಲಿ, ಎಂ-ಸ್ಯಾಂಡ್, ಸ್ಟೀಲ್ ಹೊತ್ತುಕೊಂಡು ಪ್ರಯಾಣ ಬೆಳೆಸಿತ್ತು.
ಮಂಗಳವಾರ ನಸುಕಿನ ಜಾವ 4ರ ಸುಮಾರಿಗೆ ದಾರಿ ಮಧ್ಯೆ ಬೋಟಿನೊಳಗೆ ನೀರು ತುಂಬಲಾರಂಭಿಸಿತು. ಕಿಲ್ತಾನ್ ದ್ವೀಪದ ಬಳಿ ಲಂಗರು ಹಾಕಲಾಯಿತಾದರೂ ಬೋಟು ಭಾಗಶಃ ಮುಳುಗಿತು. ಲಕ್ಷದ್ವೀಪದ ತನ್ನ ಗುರಿಯತ್ತ ತಲುಪಲು ಬೋಟಿಗೆ ಕೇವಲ ನಾಲ್ಕು ಗಂಟೆ ಪ್ರಯಾಣ ಬಾಕಿಯಿತ್ತು.
“ಘಟನೆ ಬಗ್ಗೆ ಕೂಡಲೇ ಲಕ್ಷದ್ವೀಪದ ಜನರಿಗೆ ಮಾಹಿತಿ ನೀಡಲಾಗಿದ್ದು, ಅಲ್ಲಿಂದ ದೋಣಿಯಲ್ಲಿ ಬಂದ ತಂಡವೊಂದು ಬೋಟ್ನಲ್ಲಿದ್ದ ಎಲ್ಲ 7 ಮಂದಿ ಕಾರ್ಮಿಕರನ್ನು ರಕ್ಷಿಸಿತು. ಬೋಟು ಭಾಗಶಃ ಮುಳುಗಿರು ವುದರಿಂದ ದಡಕ್ಕೆ ಕೊಂಡೊಯ್ಯಲು ಅಸಾಧ್ಯ ಎಂಬ ಸ್ಥಿತಿಯಲ್ಲಿದೆ. ಅದರಲ್ಲಿರುವ ಸರಕು ಉಳಿಯುವ ಭರವಸೆಯಿಲ್ಲ’ ಎಂದು ಮಂಗಳೂರು ಹಳೆ ಬಂದರ್ನ ಬಳಕೆದಾರರ ಅಸೋಸಿಯೇಶನ್ನ ಕಾರ್ಯದರ್ಶಿ ಅಬ್ದುಲ್ ಲತೀಫ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್