ಎಳನೀರು ಬಂಗಾರ ಪಲ್ಕೆ ಫಾಲ್ಸ್ ದುರಂತದಲ್ಲಿ ಕಣ್ಮರೆಯಾಗಿದ್ದ ಯುವಕನ ದೇಹ ಪತ್ತೆ
Team Udayavani, Feb 16, 2021, 5:22 PM IST
ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ಕಣ್ಮರೆಯಾದ ವಿದ್ಯಾರ್ಥಿ ದೇಹ ಫೆ.16 ರಂದು ಪತ್ತೆಯಾಗಿದೆ.
ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ(20) ದೇಹ ಮಣ್ಣು ಕಲ್ಲುಬಂಡೆಯಡಿ ಸಿಲುಕಿದ್ದರಿಂದ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆಯಾಗಿದೆ.
ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತ ನಡೆದಿತ್ತು.
ವಿದ್ಯುತ್ ಸಂಪರ್ಕವಾಗಲಿ, ಯಂತ್ರೋಪಕರಣ ಬಳಸಲು ಸಾಧ್ಯವಿಲ್ಲದ ದುರ್ಗಮ ಸ್ಥಳವಾದ್ದರೂ ಜಿಲ್ಲಾಡಳಿತ, ಶಾಸಕರು, ಸ್ಥಳೀಯರು, ಸಂಘ ಸಂಸ್ಥೆಗಳ ಸಹಕಾರದಿಂದ ದೇಹ ಶೋಧ ಕಾರ್ಯದ ಎಲ್ಲ ಪ್ರಯತ್ನಗಳು ನಡೆದಿದ್ದವು.
ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗದೆ ಪ್ರಕರಣ ಕಗ್ಗಂಟಾಗಿತ್ತು. ಇದೀಗ ಕಡೆಗೂ ಸನತ್ ಶೆಟ್ಟಿ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ವೈದ್ಯಕೀಯ ತಂಡ ಭೇಟಿ ನೀಡಲಿದೆ. ಮುಂದಿನ ಕಾರ್ಯಕ್ಕೆ ಪೊಲೀಸ್ ಇಲಾಖೆ ಪೂರ್ವ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ