ಬಾಂಬ್ ಪ್ರಕರಣ: ಆದಿತ್ಯನ ಹುಸಿ ಬಾಂಬ್ ಕರೆ ತನಿಖೆ ಆರಂಭ
Team Udayavani, Jan 27, 2020, 6:45 AM IST
ಮಂಗಳೂರು: ಬಾಂಬ್ ಪ್ರಕರಣದಲ್ಲಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಆದಿತ್ಯ ರಾವ್ನನ್ನು ರವಿವಾರ ಪೊಲೀಸರು ಸ್ಥಳ ಮಹಜರಿಗಾಗಿ ಎಲ್ಲಿಗೂ ಕರೆದೊಯ್ದಿಲ್ಲ; ಆದರೆ ಹುಸಿ ಬಾಂಬ್ ಬೆದರಿಕೆ ಕರೆ ಕೃತ್ಯದ ಬಗ್ಗೆ ಮಂಗಳೂರು ಸೈಬರ್ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮಂಗಳೂರಿನ ಬಲ್ಮಠದ ಹೊಟೇಲ್ನಲ್ಲಿ ಕೆಲಸಕ್ಕೆ ಇದ್ದ ವೇಳೆ ಆದಿತ್ಯ ರಾವ್ ಆನ್ಲೈನ್ನಲ್ಲಿ ಬಾಂಬ್ ತಯಾರಿಕೆ ಬಗ್ಗೆ ಜಾಲಾಡಿ ಆನ್ಲೈನ್ ಮೂಲಕ ಸ್ಫೋಟಕ ಸಾಮಗ್ರಿಗಳನ್ನು ಬಿಡಿಬಿಡಿಯಾಗಿ ಚೆನ್ನೈಯಿಂದ ಖರೀಸಿದ್ದ. ಇದಕ್ಕಾಗಿ ಕಳುಹಿಸಿದ ಇ-ಮೇಲ್ಗಳ ಕುರಿತು ಸೈಬರ್ ಪೊಲೀಸರು ವಿಸ್ತೃತ ತನಿಖೆ ಆರಂಭಿಸಿದ್ದಾರೆ.
ರವಿವಾರ ಆತ ಪಣಂಬೂರಿನಲ್ಲಿರುವ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕಚೇರಿಯ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದ.
ವಿಶೇಷ ತನಿಖಾ ತಂಡ ಆದಿತ್ಯನ ಸಮಕ್ಷಮದಲ್ಲಿ ಆತ ಮಾಡಿದ ಇ-ಮೇಲ್ ಮತ್ತು ಆನ್ಲೈನ್ ವಹಿವಾಟುಗಳ ಬಗ್ಗೆ ವಿವರ ಸಂಗ್ರಹಿಸಿ ವಿಶ್ಲೇಷಣೆ ನಡೆಸಿತು ಎಂದು ಮೂಲಗಳು ತಿಳಿಸಿವೆ.
ಆದಿತ್ಯ ರಾವ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಪರಾರಿಯಾದ ಬಳಿಕ ಮಲ್ಪೆಯಿಂದ ಇಂಡಿಗೊ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ. ಬಳಿಕ ಬೆದರಿಕೆ ಹಾಕಲು ಬಳಸಿದ ಮೊಬೈಲ್ ಸಿಮ್ನ್ನು ಎಸೆದಿದ್ದನು. ಈ ಬೆದರಿಕೆ ಕರೆಯ ಕುರಿತಾಗಿಯೂ ಸೈಬರ್ ಪೊಲೀಸರು ಆತನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆತನ ಇಂಟರ್ನೆಟ್ ವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?