ಕಾಲು ಬೆರಳಿನ ಸಹಾಯದಿಂದ ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್: ಸಚಿವ ಸುರೇಶ್ ಕುಮಾರ್ ಶ್ಲಾಘನೆ
Team Udayavani, Jun 26, 2020, 2:34 PM IST
ಬಂಟ್ವಾಳ: ಯಾರ ಸಹಾಯವೂ ಪಡೆಯದೆ ಕಾಲಿನ ಬೆರಳಿನ ಮೂಲಕ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಬಂಟ್ವಾಳದ ವಿದ್ಯಾರ್ಥಿಯ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೌಶಿಕ್ ಆಚಾರ್ಯ ಬಂಟ್ವಾಳದ ಎಸ್ ವಿಎಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕಾಲಿನ ಬೆರಳುಗಳ ಮೂಲಕ ಪರೀಕ್ಷೆ ಬರೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ಬಂಟ್ವಾಳ ಎಸ್.ವಿಎಸ್ ಪ್ರೌಡ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೆ ಕಾಲಿನ ಬೆರಳುಗಳ ಮೂಲಕ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ . ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸಿತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ ಎಂದು ಬೆಂಬಲ ಸೂಚಿಸಿದ್ದಾರೆ.
ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ. pic.twitter.com/oLV8Ef0RN8
— S.Suresh Kumar, Minister – Govt of Karnataka (@nimmasuresh) June 26, 2020
ಬಹುಮುಖ ಪ್ರತಿಭೆ ಕೌಶಿಕ್: ಬಂಟ್ವಾಳದ ಕಂಚಿಕಾರ ಪೇಟೆ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ಆಚಾರ್ಯ ಅವರ ದ್ವಿತೀಯ ಪುತ್ರನಾಗಿರುವ ಕೌಶಿಕ್ ಗೆ ಹುಟ್ಟಿದಾಗಲೇ ಎರಡು ಕೈಗಳಿರಲಿಲ್ಲ. ಆದರೂ ಯಾವುದೇ ಅಂಜಿಕೆಯಿಲ್ಲದೆ ಯಾರಿಗೂ ಕಡಿಮೆಯಿಲ್ಲದಂತೆ ಸಾಧಿನೆ ತೋರಿದ್ದಾನೆ.
ಪಾಠದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ನಿಪುಣನಾಗಿರುವ ಈತ ಒಂದನೇ ತರಗತಿಯಿಂದಲೇ ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆಯಲು ಆರಂಭಿಸಿದ್ದ. ಹಾಗಾಗಿ ಎರಡು ಕೈಗಳಿಲ್ಲದ ಕೌಶಿಕ್ ನಿಗೆ ಆತನ ಕಾಲುಗಳೇ ಕೈಯಾಗಿ ತನ್ನೆಲ್ಲಾ ಕೆಲಸ ಮಾಡುತ್ತಿದ್ದಾನೆ.
ಓದಿನ ಜೊತೆ ಕೌಶಿಕ್ ನೃತ್ಯ, ಚಿತ್ರಕಲೆ, ಈಜು, ಕ್ರಿಕೆಟ್, ಹೀಗೆ ಎಲ್ಲಾ ಚಟುವಟಿಕೆಗಳಲ್ಲಿ ಎತ್ತಿದ ತನ್ನ ಸಾಮರ್ಥ್ಯ ಪ್ರದರ್ಶನ ನೀಡಿದ್ದಾನೆ. ಗುರುವಾರದಿಂದ ಆರಂಭವಾದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಾಲಿನಿಂದ ಬರೆದು ಮೆಚ್ಚುಗೆ ಪಡೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ