ಬಿಪಿಎಲ್‌ ಕಾರ್ಡ್‌: ಸ್ಥಿತಿ ಖಚಿತಕ್ಕೆ ಸ್ಥಳ ಪರಿಶೀಲನೆ

 6 ವರ್ಷಗಳಿಂದ 1,53,319 ಅರ್ಜಿ ವಿಲೇಗೆ ಬಾಕಿ

Team Udayavani, Jan 30, 2023, 7:10 AM IST

ಬಿಪಿಎಲ್‌ ಕಾರ್ಡ್‌: ಸ್ಥಿತಿ ಖಚಿತಕ್ಕೆ ಸ್ಥಳ ಪರಿಶೀಲನೆ

ಪುತ್ತೂರು: ರಾಜ್ಯದಲ್ಲಿ ಆರು ವರ್ಷಗಳಿಂದ ಆದ್ಯತಾ (ಬಿಪಿಎಲ್‌) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇರುವ 1,53,319 ಅರ್ಜಿದಾರರು ಬಿಪಿಎಲ್‌ ಸೌಲಭ್ಯಕ್ಕೆ ಅರ್ಹರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸರಕಾರವು ತಾಲೂಕು ಆಹಾರ ಇಲಾಖಾಧಿಕಾರಿಗಳಿಗೆ ಸೂಚಿಸಿದೆ.

2017ರಿಂದ ಸಲ್ಲಿಕೆಯಾದ ಅರ್ಜಿ ಗಳಲ್ಲಿ 1,55,927 ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ಅನು ಮೋದಿಸುವಂತೆ ಈಗಾಗಲೇ ಸರಕಾರ ಆದೇಶಿಸಿದೆ. ಈ ಪೈಕಿ 68 ಸಾವಿರ ಬಿಪಿಎಲ್‌ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಉಳಿದ 1,53,319 ಅರ್ಜಿಗಳನ್ನು ಸ್ಥಳ ಪರಿಶೀಲನೆ ನಡೆಸಿ ತೀರ್ಮಾನಿಸುವಂತೆ ಸೂಚಿಸಲಾಗಿದೆ.

3,09,246 ಅರ್ಜಿ ಬಾಕಿ
ಸ್ಥಳ ಪರಿಶೀಲನೆ ನಡೆಸಿ 2017ರಿಂದ 2023ರ ಜನವರಿ ತನಕ 40,58,238 ಅರ್ಜಿ ಸ್ವೀಕರಿಸ ಲಾಗಿದೆ. ಇವು ಗಳಲ್ಲಿ 27,47,118 ಅರ್ಜಿಗಳನ್ನು ಅನು ಮೋದಿಸ ಲಾಗಿದೆ. 10,02,174 ಅರ್ಜಿ ತಿರಸ್ಕರಿಸಲಾಗಿದೆ. 37,49,292 ಅರ್ಜಿ ವಿಲೇವಾರಿಯಾಗಿದ್ದು, 3,09,246 ಬಾಕಿ ಇವೆ.

ಖಚಿತ ಪಡಿಸಲು ಸ್ಥಳ ಪರಿಶೀಲನೆ
ಸರಕಾರ ನಿಗದಿಪಡಿಸಿರುವ ನಾಲ್ಕು ಮಾನದಂಡಗಳ ಆಧಾರದಲ್ಲಿ ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿ ಸಿರುವವರ ಸ್ಥಳ ಪರಿಶೀಲನೆ ಮಾಡಿ ಅರ್ಜಿಗಳು ಬಿಪಿಎಲ್‌ ವ್ಯಾಪ್ತಿಗೆ ಒಳಪಡದೆ ಇದ್ದಲ್ಲಿ ಎಪಿಎಲ್‌ಗೆ ಶಿಫಾರಸು ಮಾಡಬೇಕು, ಸ್ಥಳ ಪರಿಶೀಲನೆ ಸಂದರ್ಭ ಅರ್ಜಿದಾರರು ಜಂಟಿ ಕುಟುಂಬವೇ, ಜಂಟಿ ಕುಟುಂಬ ದಿಂದ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸ ಲಾಗಿದೆಯೇ ಎಂದು ತಿಳಿಯಬೇಕು, ಈಗಾಗಲೇ ಬೇರೆ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಯಾಗಿದೆಯೇ ಎನ್ನುವುದನ್ನು ಪರಿ ಶೀಲಿಸುವುದು, ಎಪಿಎಲ್‌ ಕಾರ್ಡ್‌ ಹೊಂದಿದ್ದರೂ ಅರ್ಜಿ ಸಲ್ಲಿಸಿದ್ದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅನರ್ಹರಿಗಿಲ್ಲ ಬಿಪಿಎಲ್‌
ಈಗಾಗಲೇ ಪತ್ತೆಯಾದ ಅನರ್ಹರು ಮತ್ತೆ ಅರ್ಜಿ ಸಲ್ಲಿಸಿದ್ದರೆ ಬಿಪಿಎಲ್‌ ಕಾರ್ಡ್‌ ನೀಡ ದಂತೆ ನಿರ್ದೇಶಿಸ ಲಾಗಿದೆ. ಸರಕಾರಿ ನೌಕರರು, ನಿವೃತ್ತ ನೌಕರರು, ಕಂಪೆನಿ ಉದ್ಯೋಗಿಗಳು, ವ್ಯಾಪಾರಸ್ಥರು, ದೊಡ್ಡ ಭೂ ಹಿಡುವಳಿದಾರರು ಸರಕಾರದ ಇತರ ಸವಲತ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರೆ ತಿರಸ್ಕರಿಸುವಂತೆ ಸೂಚಿಸಲಾಗಿದೆ.

ಪ್ರತೀ ಆಹಾರ ನಿರೀಕ್ಷಕರು/ಶಿರಸ್ತೇದಾರರು ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ಪರಿಶೀಲಿಸಿ ಅರ್ಜಿದಾರರು ಅದಕ್ಕೆ ಅರ್ಹರೇ / ಅನರ್ಹರೇ ಎಂಬ ಅಂಕಿಅಂಶ ತಯಾರಿಸಿ ವರದಿ ಸಲ್ಲಿಸುವಂತೆ ಸೂಚಿಸ ಲಾಗಿದೆ. ಅರ್ಹತೆ ಹಾಗೂ ಅನರ್ಹತೆ ಬಗ್ಗೆ ವರದಿ ಮಾತ್ರ ಸಲ್ಲಿಸಲು ಅವಕಾಶ ನೀಡಿದ್ದು, ಯಾವುದೇ ಹೊಸ ಪಡಿತರ ಚೀಟಿಯನ್ನು ಆನ್‌ಲೈನ್‌ನಲ್ಲಿ ಮಂಜೂರು ಮಾಡುವಂತಿಲ್ಲ.
– ಎಂ. ಕನಗವಲ್ಲಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

puttur

ಮದಡ್ಕ ತೋಟಗಾರಿಕಾ ಕ್ಷೇತ್ರದಲ್ಲಿ ವಿನೂತನ ಪ್ರಯತ್ನ : ಉತ್ಪನ್ನ ಮಾರಾಟಕ್ಕೆ ಮಳಿಗೆ ಪ್ರಯೋಗ

ಸುಳ್ಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟಿಸ್‌

ಸುಳ್ಯ ಪಿಎಫ್‌ಐ ಕಚೇರಿ ಜಪ್ತಿಗೆ ಎನ್‌ಐಎ ನೋಟಿಸ್‌

belthangadi

ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಸಿದ್ಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.