ಬಿಪಿಎಲ್‌ ಕಾರ್ಡ್‌: ಸ್ಥಿತಿ ಖಚಿತಕ್ಕೆ ಸ್ಥಳ ಪರಿಶೀಲನೆ

 6 ವರ್ಷಗಳಿಂದ 1,53,319 ಅರ್ಜಿ ವಿಲೇಗೆ ಬಾಕಿ

Team Udayavani, Jan 30, 2023, 7:10 AM IST

ಬಿಪಿಎಲ್‌ ಕಾರ್ಡ್‌: ಸ್ಥಿತಿ ಖಚಿತಕ್ಕೆ ಸ್ಥಳ ಪರಿಶೀಲನೆ

ಪುತ್ತೂರು: ರಾಜ್ಯದಲ್ಲಿ ಆರು ವರ್ಷಗಳಿಂದ ಆದ್ಯತಾ (ಬಿಪಿಎಲ್‌) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇರುವ 1,53,319 ಅರ್ಜಿದಾರರು ಬಿಪಿಎಲ್‌ ಸೌಲಭ್ಯಕ್ಕೆ ಅರ್ಹರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸರಕಾರವು ತಾಲೂಕು ಆಹಾರ ಇಲಾಖಾಧಿಕಾರಿಗಳಿಗೆ ಸೂಚಿಸಿದೆ.

2017ರಿಂದ ಸಲ್ಲಿಕೆಯಾದ ಅರ್ಜಿ ಗಳಲ್ಲಿ 1,55,927 ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ಅನು ಮೋದಿಸುವಂತೆ ಈಗಾಗಲೇ ಸರಕಾರ ಆದೇಶಿಸಿದೆ. ಈ ಪೈಕಿ 68 ಸಾವಿರ ಬಿಪಿಎಲ್‌ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಉಳಿದ 1,53,319 ಅರ್ಜಿಗಳನ್ನು ಸ್ಥಳ ಪರಿಶೀಲನೆ ನಡೆಸಿ ತೀರ್ಮಾನಿಸುವಂತೆ ಸೂಚಿಸಲಾಗಿದೆ.

3,09,246 ಅರ್ಜಿ ಬಾಕಿ
ಸ್ಥಳ ಪರಿಶೀಲನೆ ನಡೆಸಿ 2017ರಿಂದ 2023ರ ಜನವರಿ ತನಕ 40,58,238 ಅರ್ಜಿ ಸ್ವೀಕರಿಸ ಲಾಗಿದೆ. ಇವು ಗಳಲ್ಲಿ 27,47,118 ಅರ್ಜಿಗಳನ್ನು ಅನು ಮೋದಿಸ ಲಾಗಿದೆ. 10,02,174 ಅರ್ಜಿ ತಿರಸ್ಕರಿಸಲಾಗಿದೆ. 37,49,292 ಅರ್ಜಿ ವಿಲೇವಾರಿಯಾಗಿದ್ದು, 3,09,246 ಬಾಕಿ ಇವೆ.

ಖಚಿತ ಪಡಿಸಲು ಸ್ಥಳ ಪರಿಶೀಲನೆ
ಸರಕಾರ ನಿಗದಿಪಡಿಸಿರುವ ನಾಲ್ಕು ಮಾನದಂಡಗಳ ಆಧಾರದಲ್ಲಿ ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿ ಸಿರುವವರ ಸ್ಥಳ ಪರಿಶೀಲನೆ ಮಾಡಿ ಅರ್ಜಿಗಳು ಬಿಪಿಎಲ್‌ ವ್ಯಾಪ್ತಿಗೆ ಒಳಪಡದೆ ಇದ್ದಲ್ಲಿ ಎಪಿಎಲ್‌ಗೆ ಶಿಫಾರಸು ಮಾಡಬೇಕು, ಸ್ಥಳ ಪರಿಶೀಲನೆ ಸಂದರ್ಭ ಅರ್ಜಿದಾರರು ಜಂಟಿ ಕುಟುಂಬವೇ, ಜಂಟಿ ಕುಟುಂಬ ದಿಂದ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸ ಲಾಗಿದೆಯೇ ಎಂದು ತಿಳಿಯಬೇಕು, ಈಗಾಗಲೇ ಬೇರೆ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಯಾಗಿದೆಯೇ ಎನ್ನುವುದನ್ನು ಪರಿ ಶೀಲಿಸುವುದು, ಎಪಿಎಲ್‌ ಕಾರ್ಡ್‌ ಹೊಂದಿದ್ದರೂ ಅರ್ಜಿ ಸಲ್ಲಿಸಿದ್ದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅನರ್ಹರಿಗಿಲ್ಲ ಬಿಪಿಎಲ್‌
ಈಗಾಗಲೇ ಪತ್ತೆಯಾದ ಅನರ್ಹರು ಮತ್ತೆ ಅರ್ಜಿ ಸಲ್ಲಿಸಿದ್ದರೆ ಬಿಪಿಎಲ್‌ ಕಾರ್ಡ್‌ ನೀಡ ದಂತೆ ನಿರ್ದೇಶಿಸ ಲಾಗಿದೆ. ಸರಕಾರಿ ನೌಕರರು, ನಿವೃತ್ತ ನೌಕರರು, ಕಂಪೆನಿ ಉದ್ಯೋಗಿಗಳು, ವ್ಯಾಪಾರಸ್ಥರು, ದೊಡ್ಡ ಭೂ ಹಿಡುವಳಿದಾರರು ಸರಕಾರದ ಇತರ ಸವಲತ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರೆ ತಿರಸ್ಕರಿಸುವಂತೆ ಸೂಚಿಸಲಾಗಿದೆ.

ಪ್ರತೀ ಆಹಾರ ನಿರೀಕ್ಷಕರು/ಶಿರಸ್ತೇದಾರರು ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ಪರಿಶೀಲಿಸಿ ಅರ್ಜಿದಾರರು ಅದಕ್ಕೆ ಅರ್ಹರೇ / ಅನರ್ಹರೇ ಎಂಬ ಅಂಕಿಅಂಶ ತಯಾರಿಸಿ ವರದಿ ಸಲ್ಲಿಸುವಂತೆ ಸೂಚಿಸ ಲಾಗಿದೆ. ಅರ್ಹತೆ ಹಾಗೂ ಅನರ್ಹತೆ ಬಗ್ಗೆ ವರದಿ ಮಾತ್ರ ಸಲ್ಲಿಸಲು ಅವಕಾಶ ನೀಡಿದ್ದು, ಯಾವುದೇ ಹೊಸ ಪಡಿತರ ಚೀಟಿಯನ್ನು ಆನ್‌ಲೈನ್‌ನಲ್ಲಿ ಮಂಜೂರು ಮಾಡುವಂತಿಲ್ಲ.
– ಎಂ. ಕನಗವಲ್ಲಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.