ಮೆದುಳು ಜ್ವರಕ್ಕೆ ಶ್ವಾನಗಳು ಬಲಿ

ಮೂರು ತಾಲೂಕುಗಳಲ್ಲಿ ಪ್ರಕರಣ

Team Udayavani, Dec 1, 2020, 11:34 AM IST

ಮೆದುಳು ಜ್ವರಕ್ಕೆ ಶ್ವಾನಗಳು ಬಲಿ

ಸಾಂದರ್ಭಿಕ ಚಿತ್ರ

ಪುತ್ತೂರು, ನ. 30: ನಾಯಿಗಳಲ್ಲಿ ಮೆದುಳು ಜ್ವರ ವ್ಯಾಪಕವಾಗಿ ಹಬ್ಬುತ್ತಿದ್ದು, ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಹರಡುವಿಕೆಯ ಪ್ರಮಾಣ ತೀವ್ರಗತಿಯಲ್ಲಿದೆ. ಈ ಕಾಯಿಲೆಯಿಂದ ಬೀದಿ ನಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದು, ಇತರ ಸಾಕು ನಾಯಿಗಳಿಗೂ ಹರಡುವ ಭೀತಿ ಎದುರಾಗಿದೆ.

ಸೂಕ್ತ ಚಿಕಿತ್ಸೆ ಅಗತ್ಯ : ವರ್ಷದ ಯಾವ ಸಮಯ ದಲ್ಲಿಯೂ ಈ ರೋಗ ನಾಯಿಗಳಿಗೆ ತಗಲಬಹುದು. ಪ್ರಾರಂಭದಲ್ಲಿ ಆಂಟಿ ಬಯೋಟಿಕ್‌ ಚಿಕಿತ್ಸೆಯ ಮೂಲಕ ರೋಗ ಬಾರದಂತೆ ತಡೆಯಬಹುದು. ವಾಂತಿ ಭೇದಿ ಆರಂಭವಾದಲ್ಲಿ ನಾಯಿಗಳು ಬೇಗನೆ ಸಾವಿಗೀಡಾಗುತ್ತವೆ. ನರ ದೌರ್ಬಲ್ಯ ಲಕ್ಷಣವಿರುವ ನಾಯಿಯನ್ನು ಪ್ರಾರಂಭಿಕ ಹಂತದಲ್ಲಿ ಸೂಕ್ತ ಚಿಕಿತ್ಸೆ ನೀಡಿ ರಕ್ಷಿಸಬಹುದು. ರೋಗ ಬಾರದಂತೆ ಆರಂಭದಲ್ಲಿ 60 ದಿನಗಳ ಮರಿಗಳಿಗೆ ಡಿಸ್ಟೆಂಪರ್‌ ಲಸಿಕೆ ನೀಡಬೇಕಾಗುತ್ತದೆ. 90 ದಿನಗಳ ಬಳಿಕ ಚುಚ್ಚುಮದ್ದು ನೀಡಿ ಅನಂತರ ಪ್ರತೀ ವರ್ಷಕ್ಕೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡಿದರೆ ಮೆದುಳು ಜ್ವರದಿಂದ ನಾಯಿಗಳನ್ನು ರಕ್ಷಿಸಬಹುದು ಎನ್ನುತ್ತಾರೆ ತಜ್ಞರು.

ರೋಗ ಲಕ್ಷಣ :  ರೋಗ ಪೀಡಿತ ನಾಯಿ ವಿಪರೀತ ಜ್ವರಕ್ಕೆ ಈಡಾಗುತ್ತದೆ. ತಲೆ ಮೇಲೆತ್ತಲು ಆಗದ ಸ್ಥಿತಿಗೆ ತಲುಪುತ್ತದೆ. ಎರಡು ಕೈಗಳ ಮಧ್ಯದಲ್ಲಿ ತಲೆಯನ್ನಿರಿಸಿ ನರಳಾಡುತ್ತದೆ. ಆಹಾರ ಸೇವನೆಯನ್ನು ತ್ಯಜಿಸಿ ಕ್ಷೀಣವಾಗುತ್ತದೆ. ವಾಂತಿ ಭೇದಿ, ನರ ದೌರ್ಬಲ್ಯ, ಕಣ್ಣಿನ ಪೊರೆ ಸಮಸ್ಯೆ ಈ ರೋಗದ ಮೂರು ಲಕ್ಷಣಗಳು. ನಾಯಿ ಎದ್ದು ಕುಳಿತುಕೊಳ್ಳಲು, ಓಡಾಡಲು ಅಸಾಧ್ಯ ಎನ್ನುವ ಹಂತಕ್ಕೆ ತಲುಪುತ್ತದೆ. ರೋಗ ಪೀಡಿತ ನಾಯಿ ಆಹಾರ ಸೇವನೆ ಕಡಿಮೆ ಮಾಡಿ ಕೊನೆಗೆ ನೀರನ್ನು ಮಾತ್ರ ಸೇವಿಸುತ್ತದೆ. ಬಳಿಕ ಆಹಾರವನ್ನೂ ತ್ಯಜಿಸುತ್ತದೆ.

ಪ್ರಾರಂಭದಲ್ಲಿ ಲಕ್ಷಣ ಇಲ್ಲ :  ಸೋಂಕು ತಗುಲಿದರೂ ಮೊದಲ ಮೂರು ತಿಂಗಳ ಕಾಲ ನಾಯಿಗಳಲ್ಲಿ ಯಾವುದೇ ಲಕ್ಷಣ ಕಂಡುಬರುವುದಿಲ್ಲ. ಕೊನೆಯ ಎರಡು ವಾರಗಳಲ್ಲಿ ರೋಗ ಉಲ್ಬಣಿಸಿ ನಾಯಿ ಸಾವನ್ನಪುತ್ತವೆ. ಸೋಂಕಿಗೆ ತುತ್ತಾದ ನಾಯಿಗಳು ರೇಬಿಸ್‌ ರೋಗ ಲಕ್ಷಣಗಳನ್ನೂ ಪ್ರದರ್ಶಿಸುವುದು ಕಂಡುಬಂದಿದ್ದು, ಉಳಿದ ನಾಯಿ ಮೇಲೆ ದಾಳಿ ಮಾಡುತ್ತವೆ. ರೋಗ ಈ ಮೂಲಕವೂ ಹರಡುತ್ತದೆ. ಕೆಲವು ನಾಯಿಗಳಿಗೆ ಜ್ವರ ಹೆಚ್ಚಾಗಿ ಹುಚ್ಚು ನಾಯಿಯಂತೆ ವರ್ತಿಸುತ್ತವೆ. ಮೂಗು-ಬಾಯಿಯಿಂದ ಕೀವು ಬರಲು ಆರಂಭವಾಗುತ್ತದೆ. ಅದನ್ನು ಇತರ ನಾಯಿಗಳು ಸ್ಪರ್ಶಿಸಿದಾಗಲೂ ರೋಗ ಹರಡುತ್ತದೆ.

ಮೆದುಳು ಜ್ವರ ಬಂದ ಬಳಿಕ ಅದರ ನಿವಾರಣೆಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಕೆಲವು ಶ್ವಾನಗಳ ದೇಹ ಸಾಮರ್ಥ್ಯದ ಮೇಲೆ ರೋಗ ನಿಯಂತ್ರಣಕ್ಕೆ ಬರುವುದುಂಟು. ಅದು ಬೆರೆಳೆಣಿಕೆ ಪ್ರಕರಣ ಮಾತ್ರ. ಹೆಚ್ಚಿನ ಶ್ವಾನಗಳು ರೋಗ ತಗಲಿದ ಅನಂತರ ಸಾಯುತ್ತವೆ. ಕೆಲವು ದಿನಗಳ ಹಿಂದೆ ಇಂತಹ ಪ್ರಕರಣಗಳು ಕಂಡು ಬಂದಿದ್ದವು. 3ತಿಂಗಳಿಗೊಮ್ಮೆ ಲಸಿಕೆ ಹಾಕುವ ಮೂಲಕ ರೋಗ ಬಾರದ ಹಾಗೆ ತಡೆಗಟ್ಟಲು ಸಾಧ್ಯವಿದೆ. ಡಾ| ಪ್ರಸನ್ನ ಕುಮಾರ ವೈದ್ಯಾಧಿಕಾರಿ ಪಶು ವೈದ್ಯಕೀಯ ಆಸ್ಪತ್ರೆ, ಪುತ್ತೂರು

ಟಾಪ್ ನ್ಯೂಸ್

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

udBantwal ಅಕ್ರಮ ಪ್ರವೇಶ; ಪ್ರಕರಣ ದಾಖಲು

Bantwal ಅಕ್ರಮ ಪ್ರವೇಶ; ಪ್ರಕರಣ ದಾಖಲು

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.