ಅರಣ್ಯ ರೋದನವಾದ ಕಾಡುಪಂಜ ಸೇತುವೆ ಬೇಡಿಕೆ


Team Udayavani, Jul 24, 2018, 12:50 PM IST

kadupanja-24-7.jpg

ಅರಂತೋಡು: ತೊಡಿಕಾನ ಗ್ರಾಮದ ಕಾಡುಪಂಜ (ಎರುಕಡುಪು) ಎಂಬಲ್ಲಿ ಹೊಳೆಗೆ ಸೇತುವೆ ನಿರ್ಮಾಣವಾಗಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಆ ಭಾಗದ ಜನರು ಜನಪ್ರತಿನಿಧಿಗಳ ಮುಂದಿಟ್ಟರೂ ಇನ್ನೂ ಅವರ ಬೇಡಿಕೆ ಕನಸಾಗಿಯೇ ಉಳಿದಿದೆ.

ಕಾಡುಪಂಜ ಊರುಪಂಜ ಭಾಗದಲ್ಲಿ 40ಕ್ಕೂ ಅಧಿಕ ಮನೆಗಳಿವೆ. ಅವರು ಬೇಸಿಗೆಯಲ್ಲಿ ಹೊಳೆ ದಾಟಿ ಹೋಗಬಹುದು. ಮಳೆಗಾಲದಲ್ಲಾದರೆ 7ರಿಂದ 8 ಕಿ.ಮೀ. ಸುತ್ತು ಬಳಸಿ ನಿತ್ಯದ ಕೆಲಸಗಳಿಗೆ, ಶಾಲಾ ಮಕ್ಕಳು ಕಲ್ಲುಗುಂಡಿ, ಅರಂತೋಡು ಮಾರ್ಗವನ್ನು ಸುತ್ತುಬಳಿಸಿ ತೊಡಿಕಾನಕ್ಕೆ ಹಾಗೂ ಸುಳ್ಯಕ್ಕೆ ಬರಬೇಕಾಗುತ್ತದೆ. ಕೆಲವು ವರ್ಷಗಳ ಹಿಂದೆ ಈ ಭಾಗದ ಜನರು ಸೇರಿಕೊಂಡು ಬಿದಿರು, ಅಡಿಕೆ ಮರ ಹಾಗೂ ಅದಕ್ಕೆ ಕಬ್ಬಿಣದ ಸಲಾಕೆಗಳನ್ನು ಬಳಸಿಕೊಂಡು ತಾತ್ಕಾಲಿಕ ಸೇತುವೆ ಮಾಡಿದ್ದರು. ಆದರೆ ಅದು ಕಾಲ ಕಳೆದಂತೆ ಶಿಥಿಲಗೊಂಡು ನೀರಿನಲ್ಲಿ ಕೊಚ್ಚಿ ಹೋಯಿತು.

ಭರವಸೆ ಮಾತ್ರ
ಲೋಕಸಭೆ, ವಿಧಾನಸಭೆ, ಜಿ.ಪಂ., ತಾ.ಪಂ. – ಹೀಗೆ ಎಲ್ಲ ಚುನಾವಣೆಗಳು ಬಂದಾಗ ಈ ಭಾಗದ ಜನರು ತಮ್ಮಲ್ಲಿಗೆ ಮತ ಕೇಳಲು ಬರುವ ನಾಯಕರಲ್ಲಿ ಸೇತುವೆಯ ಬೇಡಿಕೆ ಇಡುತ್ತಾರೆ. ಆಗ ನಾಯಕರು ಗೆದ್ದು ಬಂದರೆ ಪ್ರಥಮ ಆದ್ಯತೆಯಾಗಿ ಈ ಕೆಲಸ ಮಾಡಿಕೊಡುತ್ತೇವೆ ಎನ್ನುವ ಭರವಸೆ ನೀಡುತ್ತಾರೆ ಹೊರತು ಇದುವರೆಗೂ ಈ ಬಗ್ಗೆ ಯಾವುದೇ ಜನಪ್ರತಿನಿಧಿ ಚಿಂತನೆ ನಡೆಸಿಲ್ಲ ಎನ್ನುತ್ತಾರೆ ಈ ಭಾಗದ ಜನರು. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳು ಸೇತುವೆ ಮಾಡುವುದರ ಮೂಲಕ ಈ ಭಾಗದವರ ಸಮಸ್ಯೆಗೆ ಸ್ಪಂದಿಸಬೇಕಾಗಿದೆ.

ಮಕ್ಕಳಿಗೆ ಕಷ್ಟ
ಕಾಡುಪಂಜ ಸೇತುವೆ ನಮ್ಮ ಪ್ರಮುಖ ಬೇಡಿಕೆ. ಈ ಬಾರಿ ಶಾಸಕರು ಸೇತುವೆ ಮಾಡಿಕೊಡಬೇಕೆನ್ನುವುದು ನಮ್ಮ ಪ್ರಮುಖ ಬೇಡಿಕೆಯಲ್ಲೊಂದು. ಕಾಡುಪಂಜದ ಜನರು ನ್ಯಾಯಬೆಲೆ ಅಂಗಡಿಗೆ ತೊಡಿಕಾನಕ್ಕೆ ಬರಬೇಕು. ಆದರೆ ಸೇತುವೆ ಇಲ್ಲದೆ ಸುತ್ತು ಬಳಸಿ ಬರಬೇಕಾದ ಸ್ಥಿತಿ ಇದೆ. ಅನೇಕ ಶಾಲಾ ಮಕ್ಕಳು ಸುತ್ತುವರಿದು ಬರುವ ಸ್ಥಿತಿ ಇದೆ. 
– ಕೇಪಣ್ಣ, ಸ್ಥಳೀಯರು

ಬಹಳ ಅಗತ್ಯವಿದೆ
ಸೇತುವೆ ನಿರ್ಮಾಣಕ್ಕೆ ಕೋಟಿಗಟ್ಟಲೆ ರೂ. ಅನುದಾನ ಬೇಕಾಗಬಹುದು. ನಮ್ಮ ಗ್ರಾ.ಪಂ. ವತಿಯಿಂದ ಇದಕ್ಕೆ ಅನುದಾನ ಹೊಂದಿಸಿಕೊಡುವುದು ಕಷ್ಟ. ಸೇತುವೆ ನಿರ್ಮಾಣ ಮಾಡುವುದಕ್ಕೆ ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇಲ್ಲಿಯ ಜನರ ಸಮಸ್ಯೆ ನಮಗೆ ತಿಳಿದಿದ್ದು, ಸೇತುವೆ ನಿರ್ಮಾಣ ಮಾಡುವ ಅಗತ್ಯ ಇದೆ. 
– ಶಿವಾನಂದ ಕುಕ್ಕುಂಬಳ, ಅರಂತೋಡು ಗ್ರಾ.ಪಂ. ಉಪಾಧ್ಯಕ್ಷರು

ಶಾಸಕರು ಪ್ರಯತ್ನಿಸಲಿ
ಸೇತುವೆ ನಿರ್ಮಾಣದ ಬೇಡಿಕೆ ಹಲವು ವರ್ಷಗಳ ಸ್ಥಳೀಯರ ಬೇಡಿಕೆಯಾಗಿದೆ. ಇಲ್ಲಿಯ ಜನರು ಮಳೆಗಾಲದಲ್ಲಿ ಸಂಚಾರಕ್ಕಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಇಲ್ಲಿ ಸೇತುವೆ ನಿರ್ಮಾಣಕ್ಕಾಗಿ ಶಾಸಕರು ಪ್ರಯತ್ನಪಡಬೇಕಾಗಿದೆ. 
– ನಾಗೇಶ್‌, ಗ್ರಾ.ಪಂ. ಸದಸ್ಯರು

— ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.