ಕುಸಿಯುವ ಭೀತಿಯಲ್ಲಿ ಸಂಪರ್ಕ ಸೇತು


Team Udayavani, Jun 13, 2018, 2:25 AM IST

bridge-12-6.jpg

ಸುಳ್ಯಪದವು: ಕರ್ನಾಟಕ – ಕೇರಳ ಗಡಿಭಾಗ ಸುಳ್ಯಪದವು ಸಮೀಪದ ಕಾಯರ್‌ ಪದವಿನಲ್ಲಿರುವ ಸೇತುವೆ ಕುಸಿಯುವ ಸ್ಥಿತಿಯಲ್ಲಿದ್ದು, ಉಭಯ ರಾಜ್ಯಗಳ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಸುಳ್ಯಪದವಿನಿಂದ ಸುಮಾರು 150 ಮೀ. ದೂರದಲ್ಲಿರುವ ಈ ಸೇತುವೆಯನ್ನು ಕರ್ನಾಟಕ ಸರಕಾರವು 1984ರಲ್ಲಿ ನಿರ್ಮಾಣ ಮಾಡುವ ಮೂಲಕ ಎರಡು ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸಿತ್ತು. ಸೇತುವೆಯ ಮೇಲ್ಭಾಗದಲ್ಲಿ ಮಳೆ ನೀರು ನಿಲ್ಲುತ್ತಿದ್ದು, ಇಂಗುವ ಮೂಲಕ ಹೊರಗೆ ಹೋಗುತ್ತಿದೆ. ಸುಳ್ಯಪದವಿನಿಂದ ಈ ಸೇತುವೆಯನ್ನು ಸಂಪರ್ಕಿಸುವ ರಸ್ತೆಯೂ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಸೇತುವೆಯ ಸುತ್ತ ಗಿಡಗಂಟಿಗಳು ಬೆಳೆದು ನಿಂತಿವೆ.

ಬಸ್‌ ಸಂಚಾರ ಸ್ಥಗಿತ
ಸುಳ್ಯಪದವಿನಿಂದ ಕಾಸರಗೋಡಿಗೆ ಕೇವಲ 34 ಕಿ.ಮೀ. ದೂರ ಇದೆ. ಕೇರಳ ಗಡಿಭಾಗದ ಜನರಿಗೆ ಕರ್ನಾಟಕದ ಪಡುಮಲೆ, ಈಶ್ವರಮಂಗಲ, ರೆಂಜ, ಸುಳ್ಯ, ಪುತ್ತೂರು ತಾಲೂಕಿಗೆ ಹತ್ತಿರದ ಸಂಪರ್ಕ ಸೇತು ಇದಾಗಿದೆ. ನೂರಾರು ಜನರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಕೇರಳದ ರಾಜ್ಯದ ಖಾಸಗಿ ಬಸ್‌ ಗಳು ಮತ್ತು ಕರ್ನಾಟಕ ರಾಜ್ಯದ ಸರಕಾರಿ ಬಸ್‌ ಸಂಚಾರ ಸ್ಥಗಿತಗೊಳ್ಳುವುದ ರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಾಲಾ ಬಸ್‌ಗಳು, ಜೀಪು, ಕಾರುಗಳು ಈ ಸೇತುವೆಯ ಮೇಲೆ ನಿರಂತರವಾಗಿ ಸಂಚರಿಸುತ್ತಿವೆ. ಸೇತುವೆ ಕುಸಿದರೆ ಎರಡು ರಾಜ್ಯಗಳ ನಡುವೆ ಸಂಪರ್ಕ ಕಡಿತಗೊಳ್ಳಲಿದೆ.

ಕುಸಿಯುವ ಭೀತಿ
ಮೂರು ದಶಕಗಳ ಹಿಂದೆ ನಿರ್ಮಾಣವಾದ ಈ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ. ಸೇತುವೆಗೆ ತಡೆಗೋಡೆಯೂ ಇಲ್ಲ. ಈಗ ಸೇತುವೆ ಮೇಲೆ ನೀರು ನಿಲ್ಲುತ್ತಿದೆ. ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಿ ಗಡಿಭಾಗದ ಜನರ ಸಮಸ್ಯೆಗೆ ಸ್ಪಂದಿಸಬೇಕು. 
– ಸುಬ್ರಹ್ಮಣ್ಯ ಭಟ್‌ ದೇವಸ್ಯ, ಸ್ಥಳೀಯ ನಿವಾಸಿ

ಜನಪ್ರತಿನಿಧಿ ಸ್ಪಂದಿಸಿ
ಪುತ್ತೂರಿಂದ ಕಾಸರಗೋಡು, ಮಧೂರಿಗೆ ಸುಳ್ಯಪದವು ಮೂಲಕ ಹತ್ತಿರ ರಸ್ತೆಯಾಗಿದೆ. ಕಳೆದ ಹಲವು ತಿಂಗಳುಗಳಿಂದ ರಸ್ತೆ, ಸೇತುವೆ ನಾದುರಸ್ತಿಯಲ್ಲಿದೆ. ವಾಹನ ಸಂಚಾರ ದುಸ್ತರವಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕಾಗಿದೆ. 
– ಸುಲತಾ ವರದರಾಜ್‌ ನಾಯಕ್‌, ಪರ್ಲಡ್ಕ ಪುತ್ತೂರು

— ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.