ಮಳೆಗಾಲದಲ್ಲಿ ದ್ವೀಪವಾಗುವ ಸಾಂತ್ಯ

ಮಾಧವಪುರ ಹೊಳೆಗೆ ಸೇತುವೆ ಮರೀಚಿಕೆ

Team Udayavani, May 2, 2022, 10:06 AM IST

bridge

ಕಿನ್ಯಾ: ಮಳೆಗಾಲ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಪ್ರತೀ ವರ್ಷದಂತೆ ಸಾಂತ್ಯ ಭಾಗದ ಜನರಿಗೆ ಈ ಬಾರಿಯೂ ಸುತ್ತು ಬಳಸಿ ಸಾಗುವ ಸ್ಥಿತಿ ನಿರ್ಮಾಣವಾಗಲಿದೆ.

ಕಿನ್ಯಾ – ಸಾಂತ್ಯ ಸಂಪರ್ಕಿಸುವ ರಸ್ತೆಗೆ ಮಾಧವಪುರ ಹೊಳೆಗೆ ಸೇತುವೆ ನಿರ್ಮಾಣವಾ ದರೆ ಈ ಸಮಸ್ಯೆ ಪರಿಹಾರವಾಗಲಿದೆ. ಆದರೆ ಈ ಸಮಸ್ಯೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಮಳೆಗಾಲದಲ್ಲಿ ದ್ವೀಪ ಪ್ರದೇಶವಾಗುವ ಸಾಂತ್ಯದ ಮಾಧವಪುರ ಬಳಿ ಬೇಸಗೆ ಕಾಲದಲ್ಲಿ ತಾತ್ಕಾಲಿಕ ರಸ್ತೆ ಮತ್ತು ಸೇತುವೆ ನಿರ್ಮಿಸಲಾಗುತ್ತಿದೆ. ಮಳೆಗಾಲದಲ್ಲಿ ಇವು ನೀರುಪಾಲಾಗುತ್ತಿದ್ದು, ಹಾಗಾಗಿ ಮೂರು ಕಿ.ಮೀ. ಕ್ರಮಿಸುವ ರಸ್ತೆಯ ಬದಲು 10 ಕಿ.ಮೀ. ದೂರ ಸಂಚರಿಸಿ ಜನರು ಸಾಂತ್ಯಕ್ಕೆ ತಲುಪಬೇಕಿದೆ.

ಮಾಧವಪುರದಿಂದ ಸಾಂತ್ಯ ಮಾರ್ಗವಾಗಿ ಕೇರಳ ಗಡಿಪ್ರದೇಶವಾದ ನೆತ್ತಿಲಪದವು ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯ ಕೃಷಿಕರು ತಮ್ಮ ಸ್ವಂತ ಜಾಗವನ್ನು ಬಿಟ್ಟುಕೊಟ್ಟು ಕಚ್ಚಾ ರಸ್ತೆ ನಿರ್ಮಾಣ ಮಾಡಿ 5 ವರ್ಷಗಳಿಂದ ಸಾಂತ್ಯ ಸಂಪರ್ಕಿಸುವ ಮಾಧವಪುರ ಬಳಿ ಹೊಳೆಗೆ ಸೇತುವೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ ಬೇಡಿಕೆ ಇಟ್ಟರೂ ಈವರೆಗೆ ಈಡೇರಿಲ್ಲ.

2 ಬೇಡಿಕೆಗಳಲ್ಲಿ 1 ಈಡೇರಿಕೆ

ಕಿನ್ಯದಿಂದ ಸಾಂತ್ಯ ಸಂಪರ್ಕಿಸುವ ರಸ್ತೆಯ ಮಾಧವಪುರದ ಬಳಿ ಹೊಳೆಗೆ ಸೇತುವೆ ನಿರ್ಮಾಣ, ಕಿನ್ಯಾ ಪಂಚಾಯತ್‌ ಹಿಂಭಾಗದ ರಹಮತ್‌ ನಗರದಿಂದ ಕುರಿಯ ಸಂಪರ್ಕಿಸುವ ರಸ್ತೆಯಲ್ಲಿಯೂ ಸೇತುವೆ ನಿರ್ಮಾಣಕ್ಕೆ ಬೇಡಿಕೆಯಿದೆ. ಇದೀಗ ಒಂದು ಕೋಟಿ ರೂ. ವೆಚ್ಚದಲ್ಲಿ ಕುರಿಯದಲ್ಲಿ ಸೇತುವೆ ಕಾಮಗಾರಿ ಆರಂಭಗೊಂಡಿದೆ. ಇದು ಕಿನ್ಯದಿಂದ ಕಜೆ, ನಾಟೆಕಲ್‌, ಬೆಳರಿಂಗೆಗೆ ಸಂಪರ್ಕ ಕಲ್ಪಿಸಲಿದ್ದು, ಈ ವರ್ಷದ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಆದರೆ ಸಾಂತ್ಯ ಸೇತುವೆ ಬೇಡಿಕೆ ಮರೀಚಿಕೆಯಾಗಿ ಉಳಿದಿದೆ.

ಕಾಲು ಸಂಕ ಕುಸಿತದ ಭೀತಿ

ಕೃಷಿಕರೇ ಹೆಚ್ಚಾಗಿರುವ ಸಾಂತ್ಯಕ್ಕೆ ಮಾಧವಪುರದಿಂದ ಸಂಪರ್ಕಿಸಲು ಹಲವಾರು ವರ್ಷಗಳ ಹಿಂದೆ ಕಾಲು ಸಂಕ ನಿರ್ಮಾಣ ಮಾಡಿದ್ದು, ಅದು ಕುಸಿತದ ಭೀತಿಯಲ್ಲಿದೆ. ಮಳೆಗಾಲದಲ್ಲಿ ವಿದ್ಯಾರ್ಥಿಗಳು, ಆರೋಗ್ಯ, ಪೋಸ್ಟ್‌ ಆಫೀಸ್‌ ಸಹಿತ ದೈನಂದಿನ ಕಾರ್ಯಗಳಿಗೆ ವಾಹನ ಇಲ್ಲದವರು ಇದೇ ಕಾಲುಸಂಕದ ಮೂಲಕ ನಡೆದುಕೊಂಡು ಮುಖ್ಯ ರಸ್ತೆ ಸಂಪರ್ಕಿಸಬೇಕಾಗಿದ್ದು, ವಾಹನ ವಿದ್ದವರು ನೆತ್ತಿಲಪದವು – ಮಂಜೇಶ್ವರ – ಗೇರುಕಟ್ಟೆ ರಸ್ತೆಯಾಗಿ ಮಂಗಳೂರು ತಲುಪುವ ಸ್ಥಿತಿಯಿದೆ. ಸಾಂತ್ಯ ಭಾಗದ ಹೆಚ್ಚಿನ ಕೃಷಿಕರು ವಲಸೆ ಹೋಗಿ ಮುಖ್ಯ ರಸ್ತೆ ಸಂಪರ್ಕಿಸುವ ಪ್ರದೇಶದಲ್ಲಿ ಮನೆ ಕಟ್ಟಿ ವಾಸಮಾಡುತ್ತಿದ್ದಾರೆ, ಬಡ ಕೃಷಿಕರು ಮಾತ್ರ ಪರದಾಡುವ ಸ್ಥಿತಿಯಿದೆ.

ತಾತ್ಕಾಲಿಕ ಸೇತುವೆ

ಸ್ಥಳೀಯ ನಿವಾಸಿಗಳು ಸೇರಿಕೊಂಡು ಈ ಬಾರಿಯ ಬೇಸಗೆಯಲ್ಲಿ ರಸ್ತೆ ಸಂಪರ್ಕ ಕಲ್ಪಿಸಲು ಈ ಹೊಳೆಗೆ 1.5 ಲಕ್ಷ ರೂ. ಖರ್ಚು ಮಾಡಿ ತಾತ್ಕಾಲಿಕ ಸೇತುವೆ ನಿರ್ಮಿಸಿ ದ್ವಿಚಕ್ರ ವಾಹನ ಮತ್ತು ಕಾರು ಹೋಗಲು ಅನುಕೂಲ ಮಾಡಿದ್ದರು. ಇದೀಗ ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗುವ ಭೀತಿಯಲ್ಲಿದೆ. ಜೆಸಿಬಿ ಕಾರ್ಯಾಚರಣೆಗೆ ಸುಮಾರು 50 ಸಾವಿರ ರೂ. ವೆಚ್ಚ ಕೂಡ ನಷ್ಟವಾಗಲಿದೆ. ಸೇತುವೆ ಕಾಮಗಾರಿಗೆ ತಂದಿರುವ ಪೈಪ್‌ ಗಳಿಗೆ ಸುಮಾರು 1 ಲಕ್ಷ ರೂ. ವೆಚ್ಚ ತಗುಲಿದೆ. ಉಳಿದಂತೆ ಶ್ರಮದಾನದ ಮೂಲಕವೇ ಸೇತುವೆ ನಿರ್ಮಿಸಲಾಗಿದೆ.

ಸೇತುವೆ ನಿರ್ಮಾಣಕ್ಕೆ ಆದ್ಯತೆ

ಕಿನ್ಯಾ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದು, ಆದ್ಯತೆಯ ಮೇರೆಗೆ ಕಜೆ, ಬೆಳರಿಂಗೆ ಮಾರ್ಗವಾಗಿ ನಾಟೆಕಲ್‌ ಸಂಪರ್ಕದ ಕುರಿಯ ಸಂಪರ್ಕ ಸೇತುವೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಎರಡನೇ ಬೇಡಿಕೆಯಾಗಿರುವ ಸಾಂತ್ಯ ಸಂಪರ್ಕಿಸುವ ಹೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳೀಯರು, ಪಂಚಾಯುತ್‌ ಮನವಿ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ಮಾಧವಪುರದ ಸಾಂತ್ಯ ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. –ಯು.ಟಿ. ಖಾದರ್‌, ಶಾಸಕರು, ಮಂಗಳೂರು ವಿಧಾನಸಭೆ ಕ್ಷೇತ್ರ

ವಸಂತ ಎನ್‌. ಕೊಣಾಜೆ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.